ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ತನ್ನ ಅಟ್ಟಹಾಸ ಮುಂದುವರೆಸಿದೆ. ಹಾಗಾಗಿ ಸಿಲಿಕಾನ್ ಸಿಟಿ ಬೆಂಗಳೂರು ಲಾಕ್ ಡೌನ್ ಆಗುತ್ತೆ ಎಂಬ ಮಾತುಗಳು ಕೇಳಿ ಬಂದಿದ್ದವು. ಅದರೆ ಬೆಂಗಳೂರನ್ನು ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಇಂದು ಸರ್ಕಾರ ಸರಣಿ ಸಭೆ ನಡೆಸಿದೆ. ಮೊದಲು ಕ್ಯಾಬಿನೆಟ್ ಸಭೆ ನಡೆಯಿತು. ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರು ಸಚಿವರ ಜೊತೆ ಸಭೆ ನಡೆಸಿದರು, ಸಭೆ ಬಳಿಕ ಮಾತನಾಡಿದ ಆರ್ ಅಶೋಕ್ , ನೋ ಲಾಕ್ ಡೌನ್ ಇನ್ ಬೆಂಗಳೂರು. ಅಲ್ಲದೆ ಕೊರೊನಾ ಬಗ್ಗೆ ಚಿಕಿತ್ಸೆ ನೀಡಲು ಕೆಲ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ಗುರುತಿಸಿದೆ . ಅದೇ ಆಸ್ಪತ್ರೆಗಳಿಗೆ ಚಿಕಿತ್ಸೆ ಪಡೆಯಲು ಹೋಗಬೇಕು. ಜ್ವರ, ಕೆಮ್ಮು ಇದ್ದವರು ಸಹ ಆಸ್ಪತ್ರೆಗೆ ದಾಖಲಾಗಬೇಕು.
ಇನ್ನೂ ಕೊರೊನಾ ಸೋಂಕಿರನ್ನು ಕರೆದುಕೊಂಡು ಹೋಗಲು ಅನುಕೂಲವಾಗಲಿ ಎಂದು 100 ಅಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಎರಡು ವಾರ್ಡ್ ಗೆ ಒಂದು ಅಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಜೊತೆ ಕೊರೊನಾ ಸೋಂಕಿತರಿಗೆ ಹಾಸಿಗೆ ಸಮಸ್ಯೆ ಎದರುರಾಗಿತ್ತು. ಹಾಗಾಗಿ 5000 ಬೆಡ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಬೆಡ್ ಗಳ ಬಗ್ಗೆ ವಾರ್ ರೂಮ್ ಕಂಪ್ಲೀಟ್ ಹೊಂದಿರುತ್ತದೆ. ಜೊತೆಗೆ ಲಾಕ್ ಡೌನ್ ಮಾಡಿದರೆ ಬಡವರಿಗೆ ಸಾಕಷ್ಟು ತೊಂದರೆ ಆಗುತ್ತದೆ. ಹಾಗಾಗಿ ಲಾಕ್ ಡೌನ್ ಮಾಡುವುದಿಲ್ಲ. ಬದಲಾಗಿ ಕೊರೊನಾ ಹೆಚ್ಚಾದ ಕಡೆಗಳಿಗೆ ಸೀಲ್ ಡೌನ್ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.