ಬುಧವಾರದ ನಂತರ ಬೆಂಗಳೂರಿನಲ್ಲಿ ಲಾಕ್ ಡೌನ್ ಇಲ್ಲ : ಸುಧಾಕರ್
ಬೆಂಗಳೂರು : ಬುಧವಾರದ ನಂತರ ಬೆಂಗಳೂರಿನಲ್ಲಿ ಲಾಕ್ ಡೌನ್ ಇರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವರ ಸಭೆ ನಡೆಯಿತು. ಈ ಸಭೆಯಲ್ಲಿ ಸಿಎಂ ಬಿಎಸ್ ವೈ ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರಿಸುವುದು ಬೇಡ ಎಂದಿದ್ದಾರೆ.
ಸಭೆ ನಂತರ ಮಾತನಾಡಿದ ಸುಧಾಕರ್, ಬುಧವಾರ ಬೆಳಗ್ಗೆ ಲಾಕ್ ಡೌನ್ ಮುಕ್ತಾಯವಾಗಲಿದೆ. ನಂತರ ಈ ಹಿಂದೆ ಇದ್ದ ರೀತಿಯಲ್ಲಿಯೂ ಕೊರೊನಾ ಮಾರ್ಗಸೂಚಿಯಂತೆ ಜನಜೀವನಕ್ಕೆ ಅವಕಾಶವಿರಲಿದೆ. ಭಾನುವಾರದ ಲಾಕ್ ಡೌನ್ ಹಾಗೂ ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಮುಂದುವರೆಯಲಿದೆ. ಈ ಬಗ್ಗೆ ನಾಳೆ ಅಧಿಕೃತ ಆದೇಶ ಹೊರಬೀಳಲಿದೆ ಎಂದರು.








