ರಾಜ್ಯದಲ್ಲಿ ನೋ ನೈಟ್ ಕರ್ಫ್ಯೂ..!
ಬೆಂಗಳೂರು : ಕೊರೊನಾ ಸೋಂಕು ಮೂರನೇ ಅಲೆ ವೇಗವಾಗಿ ಹರಡುತ್ತಿದ್ದ ಕಾರಣ ಸೋಂಕು ತಡೆಗೆ ಜಾರಿಗೆ ತರಲಾಗಿದ್ದ ನೈಟ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. No night curfew in karnataka
ನೈಟ್ ಕರ್ಫ್ಯೂ ಸಡಿಲಿಕೆ, ಬೆಂಗಳೂರಲ್ಲಿ ಶಾಲಾರಂಭ ಸೇರಿದಂತೆ ವಿವಿಧ ವಿಷಯಗಳ ಕುರಿತಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಸಭೆ ನಡೆಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ ಸಚಿವರು, ಹಿರಿಯ ಅಧಿಕಾರಿಗಳು, ಕೋವಿಡ್ ತಜ್ಞರು ಭಾಗವಹಿಸಿದ್ದರು.
ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ರಾಜ್ಯದಲ್ಲಿ ನೈಟ್ ಕರ್ಫ್ಯೂ ಇರುವುದಿಲ್ಲ ಎಂದು ತಿಳಿಸಿದರು. ಕೊರೊನಾ ತಡೆಗೆ ರಾಜ್ಯದಾದ್ಯಂತ ವಿಧಿಸಲಾಗಿದ್ದ ನೈಟ್ ಕರ್ಫ್ಯೂ ಜನವರಿ 31 ರಿಂದ ಕ್ಯಾನ್ಸಲ್ ಆಗಲಿದೆ ಎಂದು ತಿಳಿಸಿದರು.