ಸರ್ಕಾರಕ್ಕಿಂತ ದೊಡ್ಡವರು ಯಾರೂ ಇಲ್ಲ : ಸಿ.ಟಿ.ರವಿ
ಚಿಕ್ಕಮಗಳೂರು : ಹರಾಜಕತೆ ಸೃಷ್ಠಿಸೋದೆ ನಾಯಕತ್ವದ ಲಕ್ಷಣ ಅಲ್ಲ, ಎತ್ತಿಕಟ್ಟೋದು, ಹರಜಾಕತೆ ಸೃಷ್ಟಿಸೋದು ಸುಲಭ ಎಂದು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಕೋಡಿಹಳ್ಳಿ ಚಂದ್ರಶೇಖರ್ ಇಷ್ಟು ದಿನ ರೈತ ನಾಯಕರಾಗಿದ್ದರು, ಈಗ ಕಾರ್ಮಿಕ ನಾಯಕರಾಗಿದ್ದಾರೆ.
ಸಂದರ್ಭ-ಪರಿಸ್ಥಿತಿ ಅರ್ಥೈಸಿಕೊಂಡು ಬೇಡಿಕೆ ಈಡೇರಿಕೆಗೆ ಮುಂದಾಗಬೇಕು. ಅತಿ ಒತ್ತಡ ಹೇರಿದರೆ ಸಂಬಂಧ ಹರಿದು ಹೋಗುತ್ತೆ.
ಸಂಬಂಧ ಹರಿದರೆ ಸರ್ಕಾರಕ್ಕಿಂತ ದೊಡ್ಡವರು ಯಾರೂ ಇಲ್ಲ. ಬೆದರಿಕೆ ಮೂಲಕ ಸರ್ಕಾರ ಮಣಿಸೋದು ಅಸಾಧ್ಯ ಎಂದು ಹೇಳಿದರು.
ಇನ್ನು ಸರ್ಕಾರ ರೈತರ ಪರ ತೆಗೆದುಕೊಂಡ ತೀರ್ಮಾನಗಳನ್ನು ರೈತ ವಿರೋಧಿ ಅಂತಿದ್ರು. ಸರ್ಕಾರದ ಮೂರು ಮಸೂದೆ ರೈತ ಪರ ಇರುವ ಮಸೂದೆಗಳೇ. ಬೆಳೆಗಳನ್ನ ಎಲ್ಲಿ ಬೇಕಾದ್ರು ಮಾರಲು ಅವಕಾಶ ಕೇಳಿದ್ದರು.
ಮುಕ್ತ ಅವಕಾಶ ಸಿಕ್ಕ ಮೇಲೆ ರೈತ ವಿರೋಧಿ ಎಂದು ಹೇಳುತ್ತಾರೆ. ಸಚಿವರು ನೌಕರರ ಜೊತೆ ಮಾತನಾಡಿ ಸಮಯ ಕೇಳಿದ್ದಾರೆ. ನೌಕರರು ಒಂದು ತಿಂಗಳು ಸಮಯ ಕೊಟ್ಟು ಕಾದು ನೋಡಬೇಕು ಎಂದು ಸಿ.ಟಿ.ರವಿ ಸಲಹೆ ನೀಡಿದ್ದಾರೆ.
ಇದೇ ವೇಳೆ ಸಿಎಂ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರವಾಗಿ ಮಾತನಾಡಿ, 2018ರಲ್ಲಿ ಟಿಕೆಟ್ ಕೊಡುವಾಗ ಚರ್ಚೆಯಾಗಿತ್ತು.
ಆಗ ಯತ್ನಾಳ್ ಪರ ವಹಿಸಿ ಬಿಎಸ್ ವೈ ಸಮರ್ಥನೆ ಮಾಡಿ ಮಾತನಾಡಿದ್ದರು. ಅವರ ವ್ಯಕ್ತಿಗತ ಸಂಬಂಧ ಚೆನ್ನಾಗಿದೆ ಅವರು ಹ್ಯಾಂಡಲ್ ಮಾಡ್ತಾರೆ ಎಂದು ಹೇಳಿದ್ದಾರೆ.