ADVERTISEMENT
Thursday, December 11, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಭಕ್ತರೇ ಆಸ್ತಿ, ಭಕ್ತರೇ ಹಕ್ಕುಪತ್ರ : “ಜಗದ್ಗುರುಗಳನ್ನು ಉಚ್ಚಾಟನೆ ಮಾಡೋ ಶಕ್ತಿ ಯಾರಿಗೂ ಇಲ್ಲ!” ಬಸನಗೌಡ ಯತ್ನಾಳ ಸ್ಪಷ್ಟ ಎಚ್ಚರಿಕೆ

"No one has the power to expel the Jagadgurus!" Basana Gowda Yathna's clear warning

Shwetha by Shwetha
October 6, 2025
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ವಿಜಯಪುರ:ಜಗದ್ಗುರುಗಳನ್ನು ಪೀಠದಿಂದ ಉಚ್ಚಾಟನೆ ಮಾಡಲು ಯಾರಿಗೂ ಅಧಿಕಾರವಿಲ್ಲ, ಭಕ್ತರೇ ಅವರಿಗೆ ನಿಜವಾದ ಆಸ್ತಿ ಮತ್ತು ಹಕ್ಕುಪತ್ರ. ಸ್ವಾಮೀಜಿಗಳನ್ನು ಹೊರಹಾಕಿದವರ ಅಹಂಕಾರ ನೋಡಿದ್ದೀರಾ ಎಂದು ಟ್ರಸ್ಟ್‌ನವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಲ್ಲಿ ನನ್ನನ್ನು ಕಡೆಗಣಿಸಿದರೆ ರಾಜ್ಯದಲ್ಲಿ ನನ್ನ ನೇತೃತ್ವದಲ್ಲೇ ಹೊಸ ‘ಭಗವಾ ಝೇಂಡಾ’ ಸರ್ಕಾರ ರಚನೆಯಾಗಲಿದೆ ಎಂದು ಹೊಸ ರಾಜಕೀಯ ಬಾಂಬ್ ಸಿಡಿಸಿದ್ದಾರೆ.

ಮದಭಾಂವಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕೂಡಲಸಂಗಮ ಪಂಚಮಸಾಲಿ ಪೀಠದ ಸ್ವಾಮೀಜಿಗಳ ಉಚ್ಚಾಟನೆ ವಿಚಾರವನ್ನು ತೀವ್ರವಾಗಿ ಖಂಡಿಸಿದರು. “ಯಾರಾದರೂ ಜಗದ್ಗುರುಗಳನ್ನು, ಪೂಜ್ಯರನ್ನು ಪೀಠದಿಂದ ತೆಗೆದುಹಾಕಲು ಸಾಧ್ಯವೇ? ಅವರಿಗೆ ಭಕ್ತರೇ ಆಸ್ತಿ, ಭಕ್ತರೇ ರಿಜಿಸ್ಟ್ರಾರ್, ಅವರೇ ಎಲ್ಲಾ ದಾಖಲೆ. ಇನ್ನು ಮುಂದೆ ಯಾರೂ ಗುರುಗಳನ್ನು ಉಚ್ಚಾಟನೆ ಮಾಡಿದ್ದಾರೆಂದು ಹೇಳಬೇಡಿ. ಆ ಪವರ್ ಅವರಿಗೆ ಇಲ್ಲ, ಆ ನಿಜವಾದ ಪವರ್ ಇರುವುದು ಭಕ್ತರಾದ ನಿಮಗೆ,” ಎಂದು ಜನರನ್ನುದ್ದೇಶಿಸಿ ಹೇಳಿದರು.

Related posts

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

December 11, 2025
ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

December 11, 2025

ಸ್ವಾಮೀಜಿಗಳ ಸರಳ ಜೀವನವನ್ನು ಕೊಂಡಾಡಿದ ಯತ್ನಾಳ್

ಪೀಠದ ಹಿಂದಿನ ಸ್ಥಿತಿಯನ್ನು ನೆನೆದ ಯತ್ನಾಳ್, “ಕೂಡಲಸಂಗಮ ಪೀಠದಲ್ಲಿ ಮೊದಲು ಏನೂ ಇರಲಿಲ್ಲ. ಅದೊಂದು ಸುಡುಗಾಡಿನಂತಿತ್ತು. ಅಲ್ಲಿದ್ದ ಫ್ಯಾನ್ ಹೇಗೆ ತಿರುಗುತ್ತಿತ್ತೋ ಗೊತ್ತಿಲ್ಲ. ಸ್ಪ್ರಿಂಗ್ ಹೋಗಿದ್ದ ಒಂದು ಸೋಫಾ ಇತ್ತು, ಅದರ ಮೇಲೆ ಕುಳಿತರೆ ಹಳ್ಳಕ್ಕೆ ಬಿದ್ದಂತೆ ಆಗುತ್ತಿತ್ತು. ಎಬ್ಬಿಸಲು ಇಬ್ಬರು ಬೇಕಿತ್ತು. ನಾನೇ ನೋಡಿ ಬೇರೆ ಸೋಫಾ ಕಳುಸಿಕೊಟ್ಟೆ. ಮಠದಲ್ಲಿ ಸರಿಯಾದ ಡೈನಿಂಗ್ ಟೇಬಲ್, ಮಂಚ, ಎಸಿ ಇರಲಿಲ್ಲ. ಸೊಳ್ಳೆ ಪರದೆಗೂ ತೂತು ಬಿದ್ದಿತ್ತು. ಅಂತಹ ಕಷ್ಟದ ಸ್ಥಿತಿಯಲ್ಲಿದ್ದ ಮಠವನ್ನು ಸ್ವಾಮೀಜಿಗಳು ಅಭಿವೃದ್ಧಿಪಡಿಸಿ, ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಿದ್ದಾರೆ. ಅಂಥವರನ್ನು ಇಂದು ಉಚ್ಚಾಟನೆ ಮಾಡಿದ್ದಾರೆ. ಹೀಗೆ ಮಾಡಿದವರ ಸೊಂಡಿ ನೋಡಿ ಹೇಗಿದೆ,” ಎಂದು ಹೆಸರು ಹೇಳದೆ ಟ್ರಸ್ಟ್‌ನವರ ವಿರುದ್ಧ ವ್ಯಂಗ್ಯವಾಡಿದರು.

ಸಂತರಾದವರಿಗೆ ಆಸ್ತಿಯ ವ್ಯಾಮೋಹ ಇರಬಾರದು ಎಂಬುದಕ್ಕೆ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ಆದರ್ಶವನ್ನು ಯತ್ನಾಳ್ ಸ್ಮರಿಸಿದರು. “ನಾವು ಸಿದ್ದೇಶ್ವರ ಶ್ರೀಗಳನ್ನು ನೋಡಿದ್ದೇವೆ. ಅವರ ಅಂಗಿಗೆ ಜೇಬು ಇರಲಿಲ್ಲ. ಬಟ್ಟೆ ಹರಿದರೆ ತಾವೇ ಹೊಲಿದುಕೊಳ್ಳುತ್ತಿದ್ದರು. ಚಪ್ಪಲಿ ಸವೆದರೂ ಅದನ್ನೇ ಹಾಕುತ್ತಿದ್ದರು. ಸ್ವಂತ ಕಾರು ಕೂಡ ಇಟ್ಟುಕೊಂಡಿರಲಿಲ್ಲ. ಅಂಥವರು ನಿಜವಾದ ಸಂತರು,” ಎಂದರು.

ನನ್ನದೇ ಹೊಸ ಪಕ್ಷ, ಯೋಗಿ ಮಾದರಿ ಆಡಳಿತ

ಸಮಾವೇಶದಲ್ಲಿ ಶಾಸಕ ಸಿದ್ದು ಸವದಿ ಅವರತ್ತ ತಿರುಗಿ ಮಾತನಾಡಿದ ಯತ್ನಾಳ್, “ಸಿದ್ದು ಅಣ್ಣ, ಒಂದು ವೇಳೆ ನನ್ನನ್ನು ಬಿಜೆಪಿಗೆ ತೆಗೆದುಕೊಳ್ಳದಿದ್ದರೆ, ನಾವು ನಮ್ಮದೇ ಆದ ‘ಭಗವಾ ಝೇಂಡಾ’ ಪಕ್ಷವನ್ನು ಸ್ಥಾಪಿಸುತ್ತೇವೆ. ರಾಜ್ಯದಲ್ಲಿ ನನ್ನ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗುವುದು ನಿಶ್ಚಿತ. ಆಗ ನೀವು ನಮ್ಮ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಟಿವಿಯಲ್ಲಿ ನೋಡಬೇಕಾಗುತ್ತದೆ,” ಎಂದು ಹಾಸ್ಯದ ಮೂಲಕವೇ ಎಚ್ಚರಿಕೆ ರವಾನಿಸಿದರು.

“ನಾನು ಅಧಿಕಾರಕ್ಕೆ ಬಂದರೆ, ಪ್ರಮಾಣ ವಚನ ಸ್ವೀಕಾರದ ದಿನವೇ 11 ಜೆಸಿಬಿಗಳಿಗೆ ಪೂಜೆ ನಡೆಯಲಿದೆ. ದೇಶದ ವಿರುದ್ಧ ಮಾತನಾಡುವವರ ವಿರುದ್ಧ ಉತ್ತರ ಪ್ರದೇಶದ ಯೋಗಿ ಅಣ್ಣನ ಮಾದರಿಯಲ್ಲೇ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಭಿವೃದ್ಧಿಗೂ ಜೆಸಿಬಿ ಬೇಕು, ಕಾಲುವೆ ತೋಡಲೂ ಜೆಸಿಬಿ ಬೇಕು. ರಾಜ್ಯದಲ್ಲಿ ಜೆಸಿಬಿ ಘರ್ಜನೆ ಶುರುವಾಗಲಿದೆ,” ಎಂದು ಯೋಗಿ ಮಾದರಿ ಆಡಳಿತದ ಮುನ್ಸೂಚನೆ ನೀಡಿದರು.

ShareTweetSendShare
Join us on:

Related Posts

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

RCB ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

by Shwetha
December 11, 2025
0

ಬೆಂಗಳೂರು ಕ್ರಿಕೆಟ್ ಅಭಿಮಾನಿಗಳಿಗೆ, ವಿಶೇಷವಾಗಿ RCB ಫ್ಯಾನ್ಸ್‌ಗಳಿಗೆ ರಾಜ್ಯ ಸರ್ಕಾರದಿಂದ ಸಂತಸದ ಸುದ್ದಿ ಬಂದಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿರುವಂತೆ, ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಸೇರಿದಂತೆ ಕ್ರಿಕೆಟ್...

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

ಕರ್ನಾಟಕ ಭೂ ಕಂದಾಯ ಕಾಯ್ದೆ 1964: ಪ್ರಮುಖ ತಿದ್ದುಪಡಿ ಮಂಡನೆಗೆ ರಾಜ್ಯ ಸರ್ಕಾರ ಸಜ್ಜು

by Shwetha
December 11, 2025
0

ರಾಜ್ಯದಲ್ಲಿ ಭೂ ಸಂಬಂಧಿತ ಕಾನೂನುಗಳನ್ನು ಸ್ಮಾರ್ಟ್ ಮತ್ತು ಸುಗಮಗೊಳಿಸುವ ನಿಟ್ಟಿನಲ್ಲಿ ಬಹು ನಿರೀಕ್ಷಿತ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿ ಮಂಡನೆಗೆ ಬರುತ್ತಿದೆ. ರಾಜ್ಯ ರೆವಿನ್ಯೂ...

ಧರ್ಮಸ್ಥಳದ ವಿರುದ್ಧದ ಮಹಾ ಷಡ್ಯಂತ್ರ ಬಯಲು: ಶವ ಹೂತ ಕಥೆ ಕಟ್ಟಿದ ಬುರುಡೆ ಗ್ಯಾಂಗ್‌ಗೆ ಸಂಕಷ್ಟ, ಕ್ಷೇತ್ರಕ್ಕೆ ಸಿಕ್ತು ಕ್ಲೀನ್ ಚಿಟ್!

ಧರ್ಮಸ್ಥಳದ ವಿರುದ್ಧದ ಮಹಾ ಷಡ್ಯಂತ್ರ ಬಯಲು: ಶವ ಹೂತ ಕಥೆ ಕಟ್ಟಿದ ಬುರುಡೆ ಗ್ಯಾಂಗ್‌ಗೆ ಸಂಕಷ್ಟ, ಕ್ಷೇತ್ರಕ್ಕೆ ಸಿಕ್ತು ಕ್ಲೀನ್ ಚಿಟ್!

by Shwetha
December 11, 2025
0

ಬೆಳ್ತಂಗಡಿ: ನಾಡಿನ ಪವಿತ್ರ ಯಾತ್ರಾ ಸ್ಥಳ ಶ್ರೀಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವ ದುರುದ್ದೇಶದಿಂದ ಹೆಣೆಯಲಾದ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಭಾರಿ ಷಡ್ಯಂತ್ರದ ಮುಖವಾಡ ಕಳಚಿದೆ....

RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಟ್ಟುನಿಟ್ಟಿನ ಬ್ರೇಕ್: ಸಚಿವರ ಎಚ್ಚರಿಕೆ

RTO ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಟ್ಟುನಿಟ್ಟಿನ ಬ್ರೇಕ್: ಸಚಿವರ ಎಚ್ಚರಿಕೆ

by Shwetha
December 11, 2025
0

ರಾಜ್ಯದಲ್ಲಿನ RTO ಕಚೇರಿಗಳಲ್ಲಿ ನಡೆದುಬಂದಿರುವ ಮಧ್ಯವರ್ತಿಗಳ ಹಾವಳಿಗೆ ಸರ್ಕಾರ ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಮಧ್ಯವರ್ತಿಗಳ ಮೂಲಕ ಕೆಲಸ ಮಾಡಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾರಿಗೆ ಮತ್ತು...

ನಮ್ಮಲ್ಲಿ ಅಕ್ಕಿ ತಂದು ಸುರಿಯಬೇಡಿ ಭಾರತದ ವಿರುದ್ಧ ಟ್ರಂಪ್ ಗರಂ :ಭಾರತದ ಅಕ್ಕಿ ಆಮದಿಗೆ ಬ್ರೇಕ್ ಹಾಕಲು ಟ್ರಂಪ್ ನಿರ್ಧಾರ

ನಮ್ಮಲ್ಲಿ ಅಕ್ಕಿ ತಂದು ಸುರಿಯಬೇಡಿ ಭಾರತದ ವಿರುದ್ಧ ಟ್ರಂಪ್ ಗರಂ :ಭಾರತದ ಅಕ್ಕಿ ಆಮದಿಗೆ ಬ್ರೇಕ್ ಹಾಕಲು ಟ್ರಂಪ್ ನಿರ್ಧಾರ

by Shwetha
December 11, 2025
0

ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತಮ್ಮ 'ಅಮೆರಿಕ ಫಸ್ಟ್' ನೀತಿಯನ್ನು ಪ್ರಬಲವಾಗಿ ಪ್ರತಿಪಾದಿಸಿದ್ದು, ಭಾರತದ ವ್ಯಾಪಾರ ವಲಯಕ್ಕೆ ದೊಡ್ಡ ಆಘಾತ ನೀಡಿದ್ದಾರೆ. ಅಮೆರಿಕದ ಮಾರುಕಟ್ಟೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram