ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯದ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಲಾಗಿದೆ. ಇದರಲ್ಲಿ ಅಚ್ಚರಿಯ ಹೆಸರಿದ್ದು, ಹಲವರು ಟಿಕೆಟ್ ವಂಚಿತರಾಗಿದ್ದಾರೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.
ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲು ಬದಲಿಗೆ ಬ್ರಿಜೇಶ್ ಚೌಟಾಗೆ ಟಿಕೆಟ್ ನೀಡಲಾಗೆ. ಅದರಂತೆ ಮೈಸೂರು- ಪ್ರತಾಪ್ ಸಿಂಹ ಬದಲು ಯದುವೀರ ಒಡೆಯರ್,ಬಳ್ಳಾರಿಯಲ್ಲಿ ದೇವೇಂದ್ರಪ್ಪ ಬದಲು ಶ್ರೀರಾಮುಲು, ಹಾವೇರಿಯಲ್ಲಿ ಶಿವಕುಮಾರ್ ಬದಲು ಬೊಮ್ಮಾಯಿ, ತುಮಕೂರಿನಲ್ಲಿ G.S.ಬಸವರಾಜು ಬದಲು ಸೋಮಣ್ಣ, ಕೊಪ್ಪಳದಲ್ಲಿ ಸಂಗಣ್ಣ ಕರಡಿ ಬದಲು ಡಾ.ಬಸವರಾಜ ಕ್ಯಾವಟರ್, ಸಂಸದ ಸದಾನಂದಗೌಡ ಬದಲಿಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ, ಚಾಮರಾಜನಗರದಿಂದ ವಿ.ಶ್ರೀನಿವಾಸ ಪ್ರಸಾದ್ ಬದಲಿಗೆ ಎಸ್.ಬಾಲರಾಜು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನೂ ಹೊಸ ಮುಖಗಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಡಾ. ಸಿ.ಎನ್. ಮಂಜುನಾಥ್-ಬೆಂಗಳೂರು ಗ್ರಾಮಾಂತರ, ಯದುವೀರ ಕೃಷ್ಣದತ್ತ ಒಡೆಯರ್-ಮೈಸೂರು-ಕೊಡಗು, ಕ್ಯಾ. ಬ್ರಿಜೇಶ್ ಚೌಟ-ದಕ್ಷಿಣ ಕನ್ನಡ, ಕೋಟ ಶ್ರೀನಿವಾಸ ಪೂಜಾರಿ-ಉಡುಪಿ-ಚಿಕ್ಕಮಗಳೂರು, ಗಾಯತ್ರಿ ಸಿದ್ದೇಶ್ವರ-ದಾವಣಗೆರೆ, ಡಾ. ಬಸವರಾಜ ಕ್ಯಾವತ್ತೂರ್-ಕೊಪ್ಪಳ ಟಿಕೆಟ್ ಪಡೆದಿದ್ದಾರೆ.
ಇನ್ನೂ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿದೆ. 28 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಡಲಾಗಿದೆ. ಆದರೆ, ಇನ್ನೂ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ರಾಯಚೂರು, ಚಿತ್ರದುರ್ಗ, ಬೆಳಗಾವಿ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿಲ್ಲ.