ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೈಗಾರಿಕೆಗಳು ಮತ್ತು ಆಸ್ಪತ್ರೆಗಳಿಗೆ ಆಮ್ಲಜನಕ ಸರಬರಾಜು ಮೇಲುಸ್ತುವಾರಿಗೆ ಜಿಲ್ಲೆಗಳಲ್ಲಿ ನೋಡಲ್‌ ಅಧಿಕಾರಿ 

Mahesh M Dhandu by Mahesh M Dhandu
June 9, 2021
in Newsbeat, State, ರಾಜ್ಯ
FORMER CM JAGADEESH SHETTER REACTION ON CABINET EXPANSION at Hubballi saaksha tv
Share on FacebookShare on TwitterShare on WhatsappShare on Telegram

ಕೈಗಾರಿಕೆಗಳು ಮತ್ತು ಆಸ್ಪತ್ರೆಗಳಿಗೆ ಆಮ್ಲಜನಕ ಸರಬರಾಜು ಮೇಲುಸ್ತವಾರಿಗೆ ಜಿಲ್ಲೆಗಳಲ್ಲಿ ನೋಡಲ್‌ ಅಧಿಕಾರಿ

ಬೆಂಗಳೂರು : ರಾಜ್ಯ ಹಾಗೂ ದೇಶದಲ್ಲಿ ಆಮ್ಲಜನಕದ ಬೇಡಿಕೆಯ ಪ್ರಮಾಣ ದಿನೇ ದಿನೇ ಕಡಿಮೆ ಆಗುತ್ತಿದೆ. ಈ ಹಿನ್ನಲೆಯಲ್ಲಿ ಕೈಗಾರಿಕೆಗಳಿಗೂ ಸ್ವಲ್ಪ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆಗೆ ಕೇಂದ್ರ ಸರಕಾರ ಅನುಮತಿಯನ್ನು ನೀಡಿದೆ. ಈ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗದೆ ಆಸ್ಪತ್ರೆಗಳಿಗೆ ಆದ್ಯತೆ ಮೇರೆಗೆ ಆಮ್ಲಜನಕ ಪೂರೈಕೆ ಮಾಡಿಸುವ ನಿಟ್ಟಿನಲ್ಲಿ ಜಿಲ್ಲಾವಾರು ನೋಡಲ್‌ ಆಫೀಸರ್‌ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಬೃಹತ್‌ ಹಾಗೂ ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ತಿಳಿಸಿದರು

Related posts

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

March 4, 2026
ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

March 4, 2026

ಇಂದು ವಿಧಾನಸೌಧದಲ್ಲಿ ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ ಸಚಿವ ಜಗದೀಶ್‌ ಶೆಟ್ಟರ್‌ ನಂತರ ಈ ವಿಷಯ ತಿಳಿಸಿದರು.

ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಇದರಿಂದಾಗಿ ಆಮ್ಲಜನಕದ ಬೇಡಿಕೆಯೂ ಕಡಿಮೆ ಆಗುತ್ತಿದೆ. ಕಳೆದ ಎರಡು ದಿನಗಳನ್ನು ಗಮನಿಸಿದಲ್ಲಿ ಸಾರಾಸರಿಯಾಗಿ 580 ಎಂ.ಟಿಗಳಷ್ಟು ಮಾತ್ರ ಆಮ್ಲಜನಕದ ಬೇಡಿಕೆ ಇದೆ. ಆದರೆ, ಬೇಡಿಕೆ ಕಡಿಮೆ ಆಗಿರುವುದರಿಂದ ಹೆಚ್ಚಿನ ಗಮನ ನೀಡದೇ ಇರುವುದು ಸರಿಯಲ್ಲ. ಮುಂದಿನ ಮೂರನೇ ಅಲೆಗೆ ಪರಿಸ್ಥಿತಿ ತಿಳಿಯಾಗಿರುವ ಸಂಧರ್ಭದಲ್ಲೇ ಅಗತ್ಯ ತಯಾರಿ ಮಾಕೊಳ್ಳಬೇಕು. ಈ ಹಿನ್ನಲೆಯಲ್ಲಿ ಜಿಲ್ಲಾವಾರು ಆಸ್ಪತ್ರೆಗಳನ್ನು ಆಮ್ಲಜನಕ ಸ್ವಾವಲಂಬಿ ಮಾಡಬೇಕು. ಅಲ್ಲದೆ, ಜಿಲ್ಲೆಗಳಲ್ಲಿ ಬಫರ್‌ ಸ್ಟಾಕ್‌ ಸಂಗ್ರಹಣೆಗೆ ಅಗತ್ಯವಿರುವ ಸೌಲಭ್ಯಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.

oxygen

ಅಲ್ಲದೆ, NIC ಮೂಲಕ ಒಂದು ತಂತ್ರಾಂಶವನ್ನು ಅಭಿವೃದ್ದಿಗೊಳಿಸಲಾಗುತ್ತಿದೆ. ಈ ತಂತ್ರಾಂಶದ ಮೂಲಕ ಆಸ್ಪತ್ರೆಗಳು ಆಮ್ಲಜನಕದ ಬೇಡಿಕೆಯನ್ನು ಸಲ್ಲಿಸಬಹುದಾಗಿದೆ. ಇದು ಇನ್ನು 3 ದಿನಗಳಲ್ಲಿ ಸಿದ್ದವಾಗಲಿದ್ದು ಅದನ್ನು ಸದ್ಯದಲ್ಲೇ ಲೋಕಾರ್ಪಣೆ ಮಾಡಲಾಗುವುದು ಎಂದರು.

ಕೇಂದ್ರ ಸರಕಾರ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಸುವ ನಿಟ್ಟಿನಲ್ಲಿ ಅನುಮತಿಯನ್ನು ನೀಡಿದೆ. ಒಂದು ಬಾರಿ ಈ ಪ್ರಕ್ರಿಯೆ ಪ್ರಾರಂಭವಾದ ನಂತರ ಗೊಂದಲಗಳು ಉಂಟಾಗಬಾರದು ಎನ್ನುವ ನಿಟ್ಟಿನಲ್ಲಿ ಜಿಲ್ಲಾವಾರು ನೋಡಲ್‌ ಅಧಿಕಾರಿಯನ್ನು ನೇಮಿಸಲು ಚಿಂತನೆ ನಡೆದಿದೆ. ನೋಡಲ್‌ ಅಧಿಕಾರಿಗಳು ಆಸ್ಪತ್ರೆಗೆ ಆದ್ಯತೆಯ ಮೇರೆಗೆ ಆಮ್ಲಜನಕ ಪೂರೈಕೆ ಮಾಡುವ ನಿಟ್ಟಿನಲ್ಲಿ ಮೇಲುಸ್ತುವಾರಿ ವಹಿಸಿಲಿದ್ದಾರೆ ಎಂದರು.

3 ನೇ ಕೋವಿಡ್‌ ಅಲೆ ಬಂದರೆ ರಾಜ್ಯ ಆಮ್ಲಜನಕ ವಿಷಯದಲ್ಲಿ ಸಿದ್ದವಾಗಿರಬೇಕಾಗಿರುವುದು ಬಹಳ ಅತ್ಯವಶ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಅಲ್ಲದೆ, ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಿದ ಅಧಿಕಾರಿಗಳಿಗೆ ಇದೇ ಸಂಧರ್ಭದಲ್ಲಿ ಅಭಿನಂದಿಸಿದರು.

ಸಭೆಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜ್ ಕುಮಾರ್ ಖತ್ರಿ, ಆಕ್ಸಿಜನ್ ಸರಬರಾಜು ಸಮಿತಿಯ ನೇತೃತ್ವ ವಹಿಸಿರುವ ಹಿರಿಯ ಐಎಎಸ್‌ ಅಧಿಕಾರಿ ಮೌನಿಶ್‌ ಮೌದ್ಗಿಲ್‌, ಐಪಿಎಸ್‌ ಅಧಿಕಾರಿ ಪ್ರತಾಪ್‌ ರೆಡ್ಡಿ, ಕೆಐಎಡಿಬಿ ಸಿಇಓ ಡಾ ಶಿವಶಂಕರ್, ಡ್ರಗ್ಸ್ ಕಂಟ್ರೋಲರ್ ಅಮರೇಶ್ ತುಬಗಿ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Corona Virusjagadeesh shettaroxygen
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

by Shwetha
March 4, 2026
0

ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿರುವುದನ್ನು ಅಮೆರಿಕದ ಅಧ್ಯಕ್ಷ ಟ್ರಂಪ್ ತೀವ್ರವಾಗಿ ಖಂಡಿಸಿದ್ದಾರೆ. ನಮ್ಮ ರಾಯಭಾರ ಕಚೇರಿಯ ಮೇಲಿನ...

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

ಇಂದಿರಾ ಗಾಂಧಿಗೆ ಬೆನ್ನಿಗೆ ಚೂರಿ ಹಾಕಿದ್ದ ಇರಾನ್ ಈಗ ಕಾಂಗ್ರೆಸ್‌ಗೆ ಆಪ್ತಮಿತ್ರವಾಯಿತೇ 1971ರ ದ್ರೋಹದ ಕರಾಳ ಇತಿಹಾಸ ಅನಾವರಣ

by Shwetha
March 4, 2026
0

ನವದೆಹಲಿ: ಜಾಗತಿಕ ರಾಜಕೀಯ ವಲಯದಲ್ಲಿ ಉಂಟಾಗಿರುವ ಅಲ್ಲೋಲ ಕಲ್ಲೋಲಗಳು ಇದೀಗ ಭಾರತದ ರಾಜಕೀಯ ಅಂಗಳದಲ್ಲೂ ಪ್ರತಿಧ್ವನಿಸುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ವಿಚಾರದಲ್ಲಿ ಕೇಂದ್ರದ ನರೇಂದ್ರ...

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡ್ರಂತೆ ಸಿಎಂ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ತೀವ್ರ ವಾಗ್ದಾಳಿ, ಅಗ್ರಿಮೆಂಟ್ ರಾಮಯ್ಯ ಎಂದು ಟಾಂಗ್

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ಕಾವು ಏರುತ್ತಿರುವ ಬೆನ್ನಲ್ಲೇ, ಇದೀಗ ಫೋನ್ ಕದ್ದಾಲಿಕೆ ಆರೋಪ ಆಡಳಿತ ಮತ್ತು ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಹೊಸ ವೇದಿಕೆಯಾಗಿದೆ....

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

ಹಗಲು ದರೋಡೆಗೆ ಇಳಿದ ಆಟೋ ಚಾಲಕನಿಗೆ ಖಾಕಿ ಬಿಸಿ: ಮೆಜೆಸ್ಟಿಕ್ ನಿಂದ ಕತ್ರಿಗುಪ್ಪೆಗೆ 700 ರೂ ಕೇಳಿ ಸಿಕ್ಕಿಬಿದ್ದ ಚಾಲಕ

by Shwetha
March 4, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಟೋ ಚಾಲಕರ ದರ್ಪ ಮತ್ತು ದುಬಾರಿ ದರ ವಸೂಲಿ ಹೊಸದೇನಲ್ಲ. ಪ್ರಾಮಾಣಿಕವಾಗಿ ಆಟೋ ಓಡಿಸುವವರ ನಡುವೆ, ಪ್ರಯಾಣಿಕರಿಂದ ಸುಲಿಗೆ ಮಾಡಲು ಹೊಂಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram