ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶನದ ಕರಟಕ ದಮನಕ ಸಿನಿಮಾ ಬಗ್ಗೆ ಈಗ ಎಲ್ಲರ ಕುತೂಹಲ ನೆಟ್ಟಿದೆ. ಸದ್ಯ ಈ ಚಿತ್ರ ಶಿವರಾತ್ರಿ ಹಿನ್ನೆಲೆಯಲ್ಲಿ ಮಾ. 8ರಂದು ಬಿಡುಗಡೆ ಆಗುತ್ತಿದೆ.
ಅಲ್ಲದೇ, ಯುಕ್ತ ಮಾರ್ಚ್ 8ರಂದು ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾ ತೆರೆ ಕಾಣುವುದಕ್ಕೂ ಒಂದು ದಿನ ಮೊದಲು ಅಂದರೆ ಮಾ. 7ರಂದು ಸಿನಿಮಾದ ಟ್ರೇಲರ್ ಬಿಡುಗಡೆಯಾಗಲಿದೆ.
ಈ ಸಿನಿಮಾದಲ್ಲಿ ಶಿವರಾಜ್ಕುಮಾರ್, ಪ್ರಭುದೇವ, ನಿಶ್ವಿಕಾ ನಾಯ್ಡು, ಪ್ರಿಯಾ ಆನಂದ್ ಸೇರಿದಂತೆ ಹಲವರು ನಟಿಸಿದ್ದಾರೆ. ಇದೇ ಮೊದಲ ಬಾರಿಗೆ ಶಿವರಾಜ್ಕುಮಾರ್ ಮತ್ತು ಪ್ರಭುದೇವ ಅವರು ಒಟ್ಟಾಗಿ ನಟಿಸಿರುವುದರಿಂದ ‘ಕರಟಕ ದಮನಕ’ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆಗಳು ಮೂಡಿವೆ. ಈ ಸಿನಿಮಾದಲ್ಲಿ ಊರು, ನೀರು ಮತ್ತು ತೇರಿನ ಕಥೆ ಹೇಳಲಾಗುತ್ತಿದೆ ಎಂದು ಅಭಿಮಾನಿಗಳು ಅಂದಾಜಿಸಿದ್ದಾರೆ. ಇದು ಸತ್ಯವೂ ಇರಬಹುದು. ಆದರೆ, ಈ ಚಿತ್ರ ಬಿಡುಗಡೆಗೆ ಅಭಿಮಾನಿಗಳು ಕಾಯುತ್ತಿರುವುದಂತೂ ಸತ್ಯ.
ಅನೇಕ ಜಿಲ್ಲೆಗಳಲ್ಲಿ ಬರಗಾಲ ಎದುರಾಗಿದೆ. ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈ ಸಮಯಕ್ಕೆ ಸರಿಯಾಗಿ ‘ಕರಕಟ ದಮನಕ’ ಸಿನಿಮಾ ಬಿಡುಗಡೆ ಆಗುತ್ತಿದೆ. ನೀರಿನ ಕಥೆ ಈ ಸಿನಿಮಾದಲ್ಲಿ ಇದೆ. ಅಭಿಮಾನಿಗಳು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುವುದನ್ನು ಕಾಯ್ದು ನೋಡಬೇಕಿದೆ.