ನವದೆಹಲಿ: ನಿರ್ಭಯಾ ಹತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ನಾಳೆ ಪ್ರಕರಣದ ನಾಲ್ಕು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿ ಮಾಡುವಂತಿಲ್ಲ ಎಂದು ಕೋರ್ಟ್ ಆದೇಶಿಸಿದೆ. ಈ ಹಿಂದೆ ದೆಹಲಿ ಹೈಕೋರ್ಟ್ ಮಾರ್ಚ್ 3ಕ್ಕೆ ನಿರ್ಭಯಾ ಹತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ಆದೇಶ ನೀಡಿತ್ತು. ಅದರಂತೆ ನಾಳೆ ಎಲ್ಲ ನಾಲ್ಕೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಯಾಗಲಿದೆ ಎಂದೇ ಭಾವಿಸಲಾಗಿತ್ತು. ಆದರೆ ದೆಹಲಿ ಕೋರ್ಟ್ ಇದೀಗ ಗಲ್ಲು ಶಿಕ್ಷೆ ಜಾರಿಗೆ ತಡೆಯಾಜ್ಞೆ ನೀಡಿದೆ. ಅಲ್ಲದೆ ಈ ಹಿಂದೆ ಹೊರಡಿಸಿದ್ದ ಡೆತ್ ವಾರೆಂಟ್ ಗೆ ತಡೆಯಾಜ್ಞೆ ನೀಡಿದ್ದು ಹೊಸದಾಗಿ ಡೆತ್ ವಾರಂಟ್ ಜಾರಿ ಮಾಡುವಂತೆ ಸೂಚಿಸಿದೆ.
ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ!
ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ! ಸಾಮಾನ್ಯವಾಗಿ ಸಾಕಷ್ಟು ಮನೆಗಳಲ್ಲಿ ಮನೆ ಒರೆಸಲು ಹಳೆಯ ಬಟ್ಟೆಗಳನ್ನು ಬಳಸುತ್ತಾರೆ. ಆದರೆ ಈರೀತಿಯ ಅಭ್ಯಾಸ ತಪ್ಪು...








