ಮಧ್ಯಪ್ರದೇಶದ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಏನೂ ಆಗಲ್ಲ ಎಂದು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಅವರು ವಿಶ್ವಾಸವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿರುವ ಮಧ್ಯಪ್ರದೇಶದ ಕಾಂಗ್ರೆಸ್ನ 19 ಶಾಸಕರು ಪೊಲೀಸ್ ರಕ್ಷಣೆಯಲ್ಲಿದ್ದಾರೆ. ನಾನು ಅವರ ಸಂಪರ್ಕ ಮಾಡಿದ್ದು, ಬಹುತೇಕರು ಪಕ್ಷಕ್ಕೆ ವಾಪಸ್ ಆಗೋದಕ್ಕೆ ತಿಳಿಸಿದ್ದಾರೆ. ನಮ್ಮ ಸ್ಟ್ರಾಟಜಿ ಏನು ಅನ್ನೋದನ್ನು ಹೇಳೋದಿಲ್ಲ. ಆದ್ರೆ ಇದು ಇಲ್ಲಿಗೆ ನಿಲ್ಲೋದಿಲ್ಲ. ರಾಜ್ಯದಲ್ಲಿರುವ ಶಾಸಕರು ಪಕ್ಷಕ್ಕೆ ಶೀಘ್ರದಲ್ಲೇ ಮರಳಬಹುದು ಎಂದಿದ್ದಾರೆ.
ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್ಶಿಪ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...








