ನವದೆಹಲಿ: ವಿಚಾರಣೆಗೆ ಖುದ್ದು ಹಾಜರಾಗುವಂತೆ ಅರವಿಂದ್ ಕೇಜ್ರಿವಾಲ್ ಗೆ ಕೋರ್ಟ್ ಸೂಚನೆ ನೀಡಿದೆ.
ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಮಾ. 16 ರಂದು ಖುದ್ದು ಹಾಜರಾಗಲು ರೋಸ್ ಅವೆನ್ಯೂ ಕೋರ್ಟ್ ಅನುಮತಿ ನೀಡಿದೆ.
ಇಂದು ವಿಚಾರಣೆಗೆ ಹಾಜರಾಗಲು ಕೋರ್ಟ್ ಸೂಚನೆ ನೀಡಿತ್ತು. ವಿಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆಯಲ್ಲಿ ಭಾಗಿಯಾದ ಅರವಿಂದ್ ಕೇಜ್ರಿವಾಲ್, ವಿಧಾನಸಭೆಯಲ್ಲಿ ಇಂದು ನಡೆಯಲಿರುವ ವಿಶ್ವಾಸ ನಿರ್ಣಯದ ಚರ್ಚೆಯಿಂದಾಗಿ ನ್ಯಾಯಾಲಯದ ಮುಂದೆ ನೇರವಾಗಿ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಬಜೆಟ್ ಅಧಿವೇಶನವೂ ನಡೆಯುತ್ತಿದೆ. ಈ ಅಧಿವೇಶನ ಮಾ. 1ರವರೆಗೆ ನಡೆಯಲಿದ್ದು,ನಂತರ ದಿನಾಂಕ ನೀಡಬಹುದು ಎಂದು ಮನವಿ ಮಾಡಿದ್ದಾರೆ.
ಹೀಗಾಗಿ ದೈಹಿಕವಾಗಿ ಹಾಜರಾಗಲು ಮಾರ್ಚ್ 16ರಂದು ದಿನಾಂಕ ನಿಗದಿ ಮಾಡಲಾಗಿದೆ.