ರಾಮನಗರ : ಬಿಡದಿಯ ನಿತ್ಯಾನಂದ ಸ್ವಾಮಿ ರಾಮನಗರ ನ್ಯಾಯಾಲಯದ ವಿಚಾರಣೆಗೆ ಪ್ರತಿ ಬಾರಿ ಗೈರಾಗುತ್ತಿರುವ ಹಿನ್ನೆಲೆಯಲ್ಲಿ ಆತನಿಗೆ ಸೇರಿದ ಆಸ್ತಿಗಳನ್ನು ಪರಿಶೀಲನೆ ಮಾಡಿ ಮುಟ್ಟಗೋಲು ಹಾಕಿಕೊಳ್ಳಲು ಸಿಐಡಿ ಅಧಿಕಾರಿಗಳಿಗೆ ರಾಮನಗರ ನ್ಯಾಯಾಲಯ ಸೂಚನೆ ನೀಡಿದೆ. ಇಂದು ನಿತ್ಯಾನಂದನ ರಾಸಲೀಲೆ ಪ್ರಕರಣದ ವಿಚಾರಣೆಗೆ ಒಂದನೇ ಆರೋಪಿ ನಿತ್ಯಾನಂದ, ಎರಡನೇ ಆರೋಪಿ ಗೋಪಾಲ ಶೀಲಂ ರೆಡ್ಡಿ ಇಬ್ಬರು ಸೇರಿದಂತೆ ಎಲ್ಲಾ ಆರೋಪಿಗಳು ಗೈರಾಗಿದ್ದರು. ದೂರುದಾರ ಲೆನಿನ್ ನ್ಯಾಯಾಲಯದಲ್ಲಿ ಹಾಜರಿದ್ದರು. ನ್ಯಾಯಾಲಯಕ್ಕೆ ಆರೋಪಿಗಳು ಗೈರಾದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಇದೇ ತಿಂಗಳ 23 ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ. ಇನ್ನು ಅಧಿಕಾರಿಗಳು ಆಸ್ತಿಗಳನ್ನು ಪರಿಶೀಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ನಂತರ ಕೋರ್ಟ್, ಜಿಲ್ಲಾಧಿಕಾರಿಗಳಿಗೆ ನಿತ್ಯಾನಂದನ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ನೀಡಲಿದೆ.
SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್ಲೈನ್ನಲ್ಲಿ ಚೆಕ್ ಮಾಡಿ
ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲಿಸಬಹುದಾಗಿದೆ. ಚುನಾವಣಾ ಆಯೋಗದ ಅಧಿಕೃತ ಪೋರ್ಟಲ್ನಲ್ಲಿ SIR-2026,...








