ಕಲಬುರಗಿ: ಕೆಪಿಎಸ್ಸಿ ಪರೀಕ್ಷಾ (KPSC Exam)ಯಲ್ಲಿ ಅಕ್ರಮ ಸರ್ವೇ ಸಾಮಾನ್ಯ ಎನ್ನುವಂತಾಗಿ ಬಿಟ್ಟಿದೆ. ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ತಾಳಿ (Mangalasutra) ಹಾಗೂ ಕಾಲುಂಗುರ ತೆಗೆಸಿ ಅಧಿಕಾರಿಗಳು ಯಡವಟ್ಟು ಮಾಡಿದ್ದಾರೆ. ಆನಂತರ ಎಚ್ಚೆತ್ತುಕೊಂಡು ಮರಳಿ ನೀಡಿದ್ದಾರೆ. ಅಧಿಕಾರಿಗಳು ಸಿಬ್ಬಂದಿಗೆ ವಾರ್ನಿಂಗ್ ಮಾಡಿದ್ದಾರೆ.
ಕಲಬುರಗಿಯ (Kalaburagi) ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ, ಗ್ರೂಪ್ ಸಿ ಹುದ್ದೆಗೆ ನಡೆಯುತ್ತಿರುವ ಪರೀಕ್ಷೆಯಲ್ಲಿ ತಾಳಿ, ಕಾಲುಂಗುರ ಹಾಗೂ ಓಲೆ ತೆಗೆಸಿ, ಪರೀಕ್ಷೆ ಬರೆಯಲು ಸಿಬ್ಬಂದಿ ಸೂಚಿಸಿದ್ದಾರೆ. ಆ ನಂತರ ಅಧಿಕಾರಿಗಳು ವಾರ್ನಿಂಗ್ ನೀಡಿದ ನಂತರ ಅವುಗಳನ್ನು ಮರಳಿ ನೀಡಲಾಗಿದೆ.
ರಾಯಚೂರು ಮೂಲದ ಇಬ್ಬರು ಮಹಿಳೆಯರನ್ನು ಅಧಿಕಾರಿಗಳು ತೀವ್ರ ತಪಾಸಣೆ ಮಾಡಿ ತಾಳಿ ಹಾಗೂ ಕಾಲುಂಗುರ ತೆಗೆಯಲು ಹೇಳಿದ್ದರು. ಈ ವೇಳೆ ಅನಿವಾರ್ಯವಾಗಿ ಮಹಿಳೆಯರು ತೆಗೆದು ಸಂಬಂಧಿಕರ ಬಳಿ ನೀಡಿ ಪರೀಕ್ಷಾ ಹಾಲ್ಗೆ ತೆರಳಿದ್ದರು ಎನ್ನಲಾಗಿದೆ.