ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Politics – ಬಿಗಡಾಯಿಸಿದ ವ್ಯವಸ್ಥೆ ಯುವ ನಿಷ್ಟವಂತರಿಗೆ ರಾಜಕೀಯ ಪ್ರವೇಶಕ್ಕೆ ಪ್ರಸಕ್ತ ಕಾಲ

Mahesh M Dhandu by Mahesh M Dhandu
November 5, 2022
in Newsbeat, Marjala Manthana, ಮಾರ್ಜಲ ಮಂಥನ
Politics

Politics

Share on FacebookShare on TwitterShare on WhatsappShare on Telegram

Politics – ಬಿಗಡಾಯಿಸಿದ ವ್ಯವಸ್ಥೆ ಯುವ ನಿಷ್ಟವಂತರಿಗೆ ರಾಜಕೀಯ ಪ್ರವೇಶಕ್ಕೆ ಪ್ರಸಕ್ತ ಕಾಲ

ಭಾರತವು ಅಳವಡಿಸಿಕೊಂಡಿರೋ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿಂದ ಬೇಕಾದರು ಚುನಾವಣೆಯಲ್ಲಿ ಸ್ಪರ್ಧಿಸಬಹುದಾಗಿದೆ.ತೀರಾ ಸಹಜವಾದ ಅರ್ಹತೆಯನ್ನ ಭಾರತೀಯ ಚುನಾವಣಾ ಆಯೋಗವು ಪಾಲಿಸುತ್ತದೆ.ಇಂತಹ ಸರಳಿಕೃತ ಮತ್ತು ಹೆಚ್ಚು ಲಿಬರಲ್ ಆಗಿರುವ ನೀತಿಗಳನ್ನ ಬಳಸಿಕೊಂಡು ಪ್ರಭಾವಿಗಳು, ಉದ್ಯಮಿಗಳು, ಭೂಮಾಲಿಕರು ಸೇರಿದಂತೆ ಬರಿ ಉಳ್ಳವರ ಪಾಲಾಗಿರುವ ಭಾರತದ ವ್ಯವಸ್ಥೆಯು ಭ್ರಷ್ಟಚಾರ, ಮೋಸ, ಅನೈತಿಕ ಮೈತ್ರಿಗಳಿಂದ ಕೂಡಿದೆ.ಅತ್ಯಂತ ಸಂಕೀರ್ಣ ಮತ್ತು ಸಮಸ್ಯೆಯಾತ್ಮವಾಗಿರೋ ಭಾರತದ ರಾಜಕೀಯ ಅಂದಾಕ್ಷಣ ನಮ್ಮ ಮನದಲ್ಲಿ ಒಂದು ಸಂಚಲನ ಮೂಡುವುದು ಸಹಜ ಜೊತೆಗೆ ಅದೆ ಕ್ಷಣಕ್ಕೆ ಗೊಂದಲವು ಮೂಡುತ್ತದೆ.ಹಾಗೆ ಯಾಕೆಂದರೆ ಪ್ರಸ್ತುತ ಸನ್ನಿವೇಶದಲ್ಲಿ ಯುವಕರು ರಾಜಕೀಯ ಪ್ರವೇಶ ಮಾಡಬೇಕೋ.? ಬೇಡವೋ.? ಎನ್ನುವ ಎರಡು ರೀತಿಯ ಆಯ್ಕೆಗಳು ಕಣ್ಣ ಮುಂದೆ ಹಾದು ಹೋಗುವುದು ಖಂಡಿತ.

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

ಕಾರಣ ಭಾರತದ ರಾಜಕಾರಣವನ್ನ ಒಂದೇ ದೃಷ್ಟಿಯಿಂದ ಜಡ್ಜ್ ಮಾಡವುದು ತುಂಬಾ ಕಠಿಣವಾದ ಕೆಲಸ ಕಾರಣ ತುಂಬಾ ಸಂಕೀರ್ಣತೆಯಿಂದ ಇಲ್ಲಿನ ಸಾಮಾಜಿಕ ವ್ಯವಸ್ಥೆಯು ಕೂಡಿದೆ. ಜಗತ್ತಿನ ಇತರೇ ಹಲವಾರು ದೇಶಗಳ ರಾಜಕಾರಣ ಮತ್ತು ಅಲ್ಲಿನ ವ್ಯವಸ್ಥೆಗಳು ಒಂದೆಡೆಯಾದರೆ, ಭಾರತದ ರಾಜಕಾರಣವೇ ಬೇರೆ ದಿಕ್ಕು-ದಿಸೆ, ರೂಪರೇಶಗಳನ್ನು ಹೊಂದಿದ್ದು ಅದು ಇಲ್ಲಿನ ಬಹುತ್ವದ ಕಾರಣಕ್ಕಾಗಿ ಹಾಗಿದೆ ಎನ್ನುವುದು ಸತ್ಯ. ಭಾರತ ಸ್ವತಂತ್ರವಾದಾಗಿಂದ ಹಲವಾರು ರೀತಿಯ ಮನಸ್ಥಿತಿಯುಳ್ಳ ರಾಜಕಾರಣಿಗಳನ್ನ ನೋಡಿರುವ ನಮಗೆ ಪ್ರಮುಖವಾಗಿ ಎರಡು ರೀತಿಯ ರಾಜಕಾರಣಿಗಳು ಸಾಮಾನ್ಯವಾಗಿ ಕಂಡು ಬರುತ್ತಾರೆ.ಒಂದು ಪ್ರಮಾಣಿಕತೆ ಮತ್ತು ದಕ್ಷ ಆಡಳಿತದಿಂದ ರಾಜಕೀಯ ಮಾಡುವವರಿದ್ದಾರೆ ಇವರು ಜನಗಳಿಗೆ ಏನಾದಾರು ಮಾಡುವ ತುಡಿತ ಹೊಂದಿರುತ್ತಾರೆ, ಇನ್ನೊಂದು ರೀತಿಯವರು ಎಂದರೆ ಅತಿ ಭ್ರಷ್ಟರು, ಒಡೆದಾಳುವರು ಇದ್ದಾರೆ. ಅಷ್ಟೇ ಅಲ್ಲದೆ ಇತ್ತೀಚಿನ ದಿನಗಳಲ್ಲಿ ರೌಡಿಗಳು, ಗೂಂಡಾಗಳು ಕೂಡ ರಾಜಕೀಯಕ್ಕೆ ಲಗ್ಗೆ ಇಟ್ಟಿರುವುದು ನಮ್ಮ ಕಣ್ಣ ಮುಂದಿದೆ ಇವರಿಗೆ ಪ್ರಜ್ಞಾವಂತರೇ ಬೆಂಬಲವಾಗಿ ನಿಂತಿರೋದು ದುರಂತ.

Politics
Politics

ಪ್ರಮಾಣಿಕರೆಲ್ಲ ಮೂಲೆಗುಂಪಾಗಿ ಅಪ್ರಾಮಾಣಿಕರೇ ತುಂಬಿ ತುಳುಕುತ್ತಿರುವ ಇಂತಹ ರಾಜಕಾರಣಕ್ಕೆ ಇಂದಿನ ಯುವ ಸಮೂಹ ಬರಲು ಹಿಂದೇಟು ಹಾಕುತ್ತಿರುವುದಕ್ಕೆ ಜಾತಿ ವ್ಯವಸ್ಥೆ, ಹಣದ ಕೊರತೆ, ರಾಜಕೀಯ ಜ್ಞಾನದ ಕೊರತೆ, ಎದುರಾಳಿಯ ಪ್ರಭಾವ ಸೇರಿದಂತೆ ಹಲವಾರು ಕಾರಣಗಳಿವೆ. ಆದರೆ ದೇಶದ ಕೆಟ್ಟ ಪರಿಸ್ಥಿತಿ ಮತ್ತು ಅಭಿವೃದ್ಧಿ ಬಗ್ಗೆ ಪ್ರಮಾಣಿಕವಾಗಿ ಕನಸು ಕಾಣುವ ಮತ್ತು ಅವುಗಳನ್ನು ಕಾರ್ಯಗತಗೊಳಿಸುವ ಯುವಪಡೆಯ ರಾಜಕೀಯ ಪ್ರವೇಶಕ್ಕೆ ತುಂಬಾ ಸೂಕ್ತವಾದ ಕಾಲವಿದು. ಯಾಕೆಂದರೆ ಭಾರತ ರಾಷ್ಟ್ರ ನಿರ್ಮಾಣದಲ್ಲಿ ರಾಜಕೀಯ ಪ್ರಮುಖ ಪಾತ್ರ ವಹಿಸುತ್ತದೆ. ಉದಾಹರಣೆಗೆ ನಮ್ಮ ನಗರದಲ್ಲಿ ಒಂದು ಸಣ್ಣ ಗ್ರಂಥಾಲಯದಿಂದ ಹಿಡಿದು ದೊಡ್ಡ ದೊಡ್ಡ ಕಾಮಗಾರಿಗಳಿಗೆ ಅಲ್ಲಿನ ಸ್ಥಳೀಯ ರಾಜಕೀಯ ನಾಯಕರ ಪಾತ್ರ, ಪ್ರಭಾವ & ಸತತ ಪ್ರಯತ್ನ ಬಹಳ ಅತ್ಯವಶ್ಯಕವಾಗಿರುತ್ತದೆ. ಒಂದು ಸಣ್ಣ ಹುಲ್ಲುಕಡ್ಡಿಯು ಅಲ್ಲಾಡೋದಕ್ಕೆ ರಾಜಕೀಯ ಕಮಾಂಡ್ ಬೇಕಾಗಿರುತ್ತದೆ. ಆದ್ದರಿಂದ ವ್ಯವಸ್ಥೆಯ ಬದಲಾವಣೆಯಲ್ಲಿ ರಾಜಕೀಯದ ಅನಿವಾರ್ಯ ಮತ್ತು ಮಹತ್ವವನ್ನು ನಮ್ಮ ಯುವಕರು ಅರಿತು ರಾಜಕೀಯ ರಂಗಕ್ಕೆ ಭಯಭೀತರಾಗದೆ ಪ್ರವೇಶ ಮಾಡುವ ಮೂಲಕ ಭಾರತದ ಸಮಗ್ರ ಏಳಿಗೆಗಾಗಿ ಕಂಕಣ ತೊಡಬೇಕು.

Politics
Politics

ಭಾರತದ ಭಾಗ್ಯವಿಧಾತ ಡಾ.ಬಿ.ಆರ್ ಅಂಬೇಡ್ಕರ್ ವರು ನೀಡಿದ ಸಂವಿಧಾನ ಭಾರತದ ಪ್ರತಿಪ್ರಜೆಗಳಿಗೂ ಹಣವಂತರು ಸ್ಥಿತಿವಂತರು ಅಲ್ಲದ ಸಾಮನ್ಯ ವ್ಯಕ್ತಿಯು ಕೂಡ ದೇಶದ ಅತ್ಯುನ್ನತ ಸ್ಥಾನಕ್ಕೆ ಏರುವ ಅವಕಾಶ ನೀಡಿದೆ. ಆದ ಕಾರಣ ಯುವಕರು ರಾಜಕೀಯ ಪ್ರವೇಶಿಸಿ ಗಾಂಧಿ-ಅಂಬೇಡ್ಕರ್ ಅವರ ಕನಸಿನ ಭಾರತ ನಿರ್ಮಾಣ ಮಾಡುವಲ್ಲಿ ಆಸಕ್ತಿ ವಹಿಸಬೇಕು. ವಿವಿಧತೆಯಲ್ಲಿ ಏಕತೆಯನ್ನ ಕಂಡುಕೊಂಡ ಭಾರತವೂ ಸಂವಿಧಾನದಲ್ಲು ಕೂಡ ಹಲವಾರು ವಿಶೇಷವಾದ ಕಾನೂನುಗಳಿಂದ ಇತರೆ ದೇಶಗಳಿಗಿಂತ ಭಿನ್ನವಾಗಿದೆ.ಇಂತಹ ಪ್ರಜಾಪ್ರಭುತ್ವದ ರಾಜಕೀಯ ಮತ್ತು ಸಾಮಾಜಿಕ ವ್ಯವಸ್ಥೆಯನ್ನ ಅಳವಡಿಸಿಕೊಂಡ ಭಾರತದಲ್ಲಿ ಯುವಕರ ಸಂಖ್ಯೆ ಇಡಿ ಏಷ್ಯಾ ಖಂಡಲ್ಲಿಯೇ ಹೆಚ್ಚಾಗಿದೆ. ಭಾರತೀಯ ರಾಜಕಾರಣವೂ ಮುಕ್ತ ಮತದಾನದ ಮೂಲಕ ತನ್ನನ್ನು ಪ್ರತಿನಿಧಿಸುವವರನ್ನು ಆಯ್ಕೆ ಮಾಡುವ ವಿಧಾನವನ್ನ ಅಳವಡಿಸಿಕೊಂಡಿದೆ. ಇಂತಹ ದೇಶದಲ್ಲಿ ಇವತ್ತು ಪರಿಸ್ಥಿತಿ ಹಲವಾರು ರೀತಿಯಲ್ಲಿ ಹದಗೆಟ್ಟು ಹೋಗಿದ್ದು ನಿಂತ ನೀರಾಗಿ ಕೆಟ್ಟು ವಾಸನೆ ಹೊಡೆಯುತ್ತಿದೆ. ಶಾಸಕಾಂಗ, ಕಾರ್ಯಾಂಗ, ಭ್ರಷ್ಟರಿಂದ ತುಂಬಿ ತುಳುಕುತ್ತಿದೆ. ಭಾರತೀಯ ರಾಜಕಾರಣಕ್ಕೆ ಪ್ರಮಾಣಿಕ ಯುವಜನತೆ ಬಂದು ಹೊಸ ಸುಧಾರಣಾ ನೀತಿ ಮಾರ್ಗ ಕಂಡುಕೊಂಡರೆ ಉಳಿದ ಮೂರರಲ್ಲಿ ಭ್ರಷ್ಟತೆಯನ್ನ‌ ನಿಯಂತ್ರಣ ಮಾಡಬಹುದು.

ಶೈಲಜಾ.ಸಿ
ಪತ್ರಿಕೋದ್ಯಮ ವಿಧ್ಯಾರ್ಥಿನಿ
ಬೆಂಗಳೂರು ವಿಶ್ವವಿದ್ಯಾಲಯ

Tags: #Saaksha TVBangalore Universitypolitics
ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram