ADVERTISEMENT
Tuesday, February 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಅಭಿವೃದ್ಧಿಗೆ ಚಿಪ್ಪು, ಬೆಂಬಲಿಗರಿಗೆ ತುಪ್ಪ : 134 ಶಾಸಕರಿದ್ದರೂ 149 ಮಂದಿಗೆ ಸಚಿವ ಸ್ಥಾನ ನೀಡಿದ ಸರ್ಕಾರದ ವಿರುದ್ಧ ಆರ್ ಅಶೋಕ್ ಕೆಂಡಾಮಂಡಲ

Number of MLAs 134, ministerial posts for 149: Ashok attacks

Shwetha by Shwetha
February 10, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದ ಬೊಕ್ಕಸ ಬರಿದಾಗಿದೆ ಎಂದು ಹೇಳುತ್ತಲೇ, ಮತ್ತೊಂದೆಡೆ ತಮ್ಮ ಆಪ್ತರು ಹಾಗೂ ಕಾರ್ಯಕರ್ತರಿಗೆ ಮಣೆ ಹಾಕಲು ರಾಜ್ಯ ಸರ್ಕಾರ ನೀರಿನಂತೆ ಹಣ ಖರ್ಚು ಮಾಡುತ್ತಿದೆ. ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಎಂಬ ಪರಿಸ್ಥಿತಿ ಸರ್ಕಾರದ್ದಾಗಿದೆ. ಅಭಿವೃದ್ಧಿಗೆ ಹಣವಿಲ್ಲದಿದ್ದರೂ ಸಿಕ್ಕ ಸಿಕ್ಕವರಿಗೆಲ್ಲ ನಿಗಮ ಮಂಡಳಿಗಳಲ್ಲಿ ಸಚಿವ ಸ್ಥಾನಮಾನ ನೀಡಿ, ಜನರ ತೆರಿಗೆ ಹಣವನ್ನು ಪೋಲು ಮಾಡಲಾಗುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಅವರು, ಸರ್ಕಾರದ ಆಡಳಿತ ವೈಖರಿ ಮತ್ತು ದುಂದು ವೆಚ್ಚದ ವಿರುದ್ಧ ಅಂಕಿಅಂಶಗಳ ಸಮೇತ ಹರಿಹಾಯ್ದಿದ್ದಾರೆ.

Related posts

ಇಂದು  ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ – ರಾಜಕೀಯ ವಲಯದಲ್ಲಿ ಕುತೂಹಲ

ಇಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ – ರಾಜಕೀಯ ವಲಯದಲ್ಲಿ ಕುತೂಹಲ

February 10, 2026
ಭಾರತಕ್ಕೆ ಬಂಪರ್ ಗಿಫ್ಟ್ ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ – ರಫ್ತುದಾರರ ಖಾತೆಗೆ ಜಮೆ ಆಗಲಿದೆ 40000 ಕೋಟಿ ರೂಪಾಯಿ

ಭಾರತಕ್ಕೆ ಬಂಪರ್ ಗಿಫ್ಟ್ ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ – ರಫ್ತುದಾರರ ಖಾತೆಗೆ ಜಮೆ ಆಗಲಿದೆ 40000 ಕೋಟಿ ರೂಪಾಯಿ

February 10, 2026

ಶಾಸಕರಿಗಿಂತ ಸಚಿವ ಸ್ಥಾನಮಾನದವರೇ ಹೆಚ್ಚು!

ಪ್ರಸ್ತುತ ಕಾಂಗ್ರೆಸ್ ಸರ್ಕಾರದಲ್ಲಿರುವ ಶಾಸಕರ ಸಂಖ್ಯೆಗಿಂತ ಸಚಿವ ಸಂಪುಟ ದರ್ಜೆ ಹೊಂದಿರುವವರ ಸಂಖ್ಯೆಯೇ ಹೆಚ್ಚಾಗಿದೆ ಎಂಬ ಸ್ಫೋಟಕ ಮಾಹಿತಿಯನ್ನು ಅಶೋಕ್ ಮುಂದಿಟ್ಟಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಶಾಸಕರ ಸಂಖ್ಯೆ 134 ಇದೆ. ಆದರೆ, ಸಂಪುಟ ದರ್ಜೆಯ ಸಚಿವರು ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಸಚಿವ ಸ್ಥಾನಮಾನ ಹೊಂದಿರುವವರ ಸಂಖ್ಯೆ ಬರೋಬ್ಬರಿ 149 ದಾಟಿದೆ. ಇದು ರಾಜ್ಯದ ಬೊಕ್ಕಸಕ್ಕೆ ಹೊರೆಯಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಅಭಿವೃದ್ಧಿ ಶೂನ್ಯ, ಆಡಂಬರಕ್ಕೆ ಮಿತಿ ಇಲ್ಲ

ರಾಜ್ಯದ ಪ್ರಮುಖ ಅಭಿವೃದ್ಧಿ ನಿಗಮಗಳಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ನಿಗಮಗಳು ಅನುದಾನವಿಲ್ಲದೆ ಸೊರಗುತ್ತಿವೆ. ಅಭಿವೃದ್ಧಿ ಕೆಲಸಗಳಿಗೆ ನಯಾ ಪೈಸೆ ಹಣ ಬಿಡುಗಡೆಯಾಗುತ್ತಿಲ್ಲ. ಆದರೆ, ಈ ನಿಗಮಗಳಿಗೆ ನೇಮಕಗೊಂಡಿರುವ ಅಧ್ಯಕ್ಷರಿಗೆ ಮಾತ್ರ ಐಷಾರಾಮಿ ಸೌಲಭ್ಯಗಳಿಗೆ ಕೊರತೆಯಿಲ್ಲ. ಅಧ್ಯಕ್ಷರಿಗೆ ಓಡಾಡಲು ಗೂಟದ ಕಾರು, ಅವರ ಸಿಬ್ಬಂದಿಗೆ ಸಂಬಳ, ಸಾರಿಗೆ ಭತ್ಯೆ ಕೊಡುವುದರಲ್ಲೇ ಜನರ ತೆರಿಗೆ ಹಣ ಪೋಲಾಗುತ್ತಿದೆ. ಇದನ್ನೇ ಸಾಧನೆ ಎಂದುಕೊಂಡಂತಿದೆ ಎಂದು ಅವರು ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಕುರ್ಚಿ ಉಳಿಸಿಕೊಳ್ಳಲು ಖಜಾನೆ ಲೂಟಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ನೇರ ವಾಗ್ದಾಳಿ ನಡೆಸಿರುವ ಅಶೋಕ್, ರಾಜ್ಯ ಕಂಡ ಅತ್ಯಂತ ದುರ್ಬಲ ಮತ್ತು ಅಸಮರ್ಥ ಮುಖ್ಯಮಂತ್ರಿ ಇವರಾಗಿದ್ದಾರೆ. ಕೇವಲ ತಮ್ಮ ಕುರ್ಚಿ ಉಳಿಸಿಕೊಳ್ಳುವ ಏಕೈಕ ಉದ್ದೇಶದಿಂದ, ಅಸಮಾಧಾನಿತರಿಗೆ ಮತ್ತು ಬೇಕಾದವರಿಗೆಲ್ಲಾ ಸಚಿವ ಸ್ಥಾನಮಾನ ನೀಡುತ್ತಿದ್ದಾರೆ. ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಅಧಿಕಾರ ನಡೆಸುತ್ತಾ, ಅನಗತ್ಯ ಹುದ್ದೆಗಳನ್ನು ಸೃಷ್ಟಿಸಿ ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಾಜೀನಾಮೆಗೆ ಆಗ್ರಹ

ಸಿದ್ದರಾಮಯ್ಯನವರೇ, ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು? ರಾಜ್ಯದ ಅಭಿವೃದ್ಧಿ ಕಡೆಗಣಿಸಿ ಕೇವಲ ಅಧಿಕಾರ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದೀರಿ. ನಿಮಗೆ ಸಮರ್ಥವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ತಕ್ಷಣವೇ ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ ಎಂದು ಆರ್ ಅಶೋಕ್ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

ShareTweetSendShare
Join us on:

Related Posts

ಇಂದು  ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ – ರಾಜಕೀಯ ವಲಯದಲ್ಲಿ ಕುತೂಹಲ

ಇಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ – ರಾಜಕೀಯ ವಲಯದಲ್ಲಿ ಕುತೂಹಲ

by Shwetha
February 10, 2026
0

ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (ಡಿಕೆಶಿ) ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಜೋರಾಗಿರುವ ನಡುವೆಯೇ...

ಭಾರತಕ್ಕೆ ಬಂಪರ್ ಗಿಫ್ಟ್ ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ – ರಫ್ತುದಾರರ ಖಾತೆಗೆ ಜಮೆ ಆಗಲಿದೆ 40000 ಕೋಟಿ ರೂಪಾಯಿ

ಭಾರತಕ್ಕೆ ಬಂಪರ್ ಗಿಫ್ಟ್ ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ – ರಫ್ತುದಾರರ ಖಾತೆಗೆ ಜಮೆ ಆಗಲಿದೆ 40000 ಕೋಟಿ ರೂಪಾಯಿ

by Shwetha
February 10, 2026
0

ನವದೆಹಲಿ ಮತ್ತು ವಾಷಿಂಗ್ಟನ್ ನಡುವಿನ ದ್ವಿಪಕ್ಷೀಯ ಬಾಂಧವ್ಯ ಮತ್ತಷ್ಟು ಗಟ್ಟಿಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಪಾಲಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ವ್ಯಾಪಾರ...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 10, 2026
0

ದಿನ ಭವಿಷ್ಯ: 10-02-2026 ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ಸಿಗಲಿದೆ. ವ್ಯಾಪಾರಸ್ಥರಿಗೆ ಹಳೆಯ ಹೂಡಿಕೆಗಳಿಂದ...

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಬಿಗ್ ಶಾಕ್: ಈ ಸಣ್ಣ ತಪ್ಪು ಮಾಡಿದರೆ ರದ್ದಾಗಲಿದೆ ಗ್ಯಾಸ್ ಕನೆಕ್ಷನ್!

by Shwetha
February 9, 2026
0

ಬೆಂಗಳೂರು: ನೀವು ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಾಗಿದ್ದರೇ ನಿಮಗೊಂದು ಅತ್ಯಂತ ಮಹತ್ವದ ಮಾಹಿತಿ ಇಲ್ಲಿದೆ. ಕೇಂದ್ರ ಸರ್ಕಾರವು ಎಲ್‌ಪಿಜಿ ಬಳಕೆದಾರರಿಗೆ ಕಠಿಣ ಸೂಚನೆಯೊಂದನ್ನು ರವಾನಿಸಿದ್ದು,...

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

ಆಸ್ತಿ ಖರೀದಿಸುವ ಮುನ್ನ ಎಚ್ಚರ! ಜಮೀನಿನ ಜಾತಕ ಜಾಲಾಡಲು ಬಂದಿದೆ ದಿಶಾಂಕ್, ಮೊಬೈಲ್ ನಲ್ಲೇ ಚೆಕ್ ಮಾಡಿ ಅಸಲಿ ಕತೆ

by Shwetha
February 9, 2026
0

ಬೆಂಗಳೂರು: ಜಮೀನು ಅಥವಾ ನಿವೇಶನ ಖರೀದಿಸುವುದು ಪ್ರತಿಯೊಬ್ಬರ ಕನಸು. ಆದರೆ ಕಷ್ಟಪಟ್ಟು ದುಡಿದ ಹಣವನ್ನು ಆಸ್ತಿ ಮೇಲೆ ಹೂಡಿಕೆ ಮಾಡುವಾಗ ಆ ಜಾಗದ ಬಗ್ಗೆ ಸರಿಯಾದ ಮಾಹಿತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram