ಮುಂಬೈ ಪೊಲೀಸರ ಮುಂದೆ ಹಾಜರಾಗಲು ಕಾಲಾವಕಾಶ ಕೇಳಿದ ನೂಪುರ್ ಶರ್ಮಾ…
ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣದಲ್ಲಿ ಮುಂಬೈ ಪೊಲೀಸರ ಮುಂದೆ ಹಾಜರಾಗಲು ಬಿಜೆಪಿ ಮಾಜಿ ವಕ್ತಾರೆ ನೂಪರ್ ಶರ್ಮಾ ಹೆಚ್ಚಿನ ಸಮಯ ಕೇಳಿದ್ದಾರೆ.
ಸೋಮವಾರ ಅವರು ಮಹಾರಾಷ್ಟ್ರದ ಭಿವಂಡಿ ಪೊಲೀಸರ ಮುಂದೆ ಹಾಜರಾಗಬೇಕು. ಆದರೆ, ನೂಪುರ್ ಶರ್ಮಾ ಹೆಚ್ಚಿನ ಕಾಲಾವಕಾಶ ಕೇಳಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶರ್ಮಾ ಅವರ ಮನವಿಯನ್ನು ಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು. ಆದರೆ ಎಷ್ಟು ದಿನಗಳ ಕಾಲಾವಕಾಶ ಕೇಳಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.
ಮೇ 30 ರಂದು, ಟಿವಿ ಟಾಕ್ ಶೋನಲ್ಲಿ ಪ್ರವಾದಿ ಮುಹಮ್ಮದ್ ಕುರಿತು ನೂಪರ್ ಶರ್ಮಾ ಅವರ ಟೀಕೆಗಳ ಬಗ್ಗೆ ದುರು ದಾಖಲಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ನೂಪರ್ ಶರ್ಮಾ ಅವರ ಹೇಳಿಕೆ ದಾಖಲಿಸಿಕೊಳ್ಳಲು ಸಮನ್ಸ್ ಮಾಡಿದ್ದಾರೆ. ಪ್ರವಾದಿ ಕುರಿತು ಟ್ವೀಟ್ ಮಾಡಿದ್ದಕ್ಕಾಗಿ ಬಿಜೆಪಿಯಿಂದ ಅಮಾನತುಗೊಂಡಿರುವ ನವೀನ್ ಕುಮಾರ್ ಜಿಂದಾಲ್ ಅವರಿಗೂ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ಮೇ 15 ರಂದು ಥಾಣೆ ಪೊಲೀಸರ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ