ನಟ ದರ್ಶನ್ ಅವರು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರ ಕುರಿತು ಆಡಿದ ತಗಡು ಹೇಳಿಕೆಗೆ ಆಕ್ಷೇಪ ವ್ಯಕ್ತವಾಗಿದೆ.
ಈ ಕುರಿತು ಉಮಾಪತಿ ಶ್ರೀನಿವಾಸಗೌಡ ಅವರ ಬೆಂಬಲಿಗರು ಅಸಮಾಧಾನ ಹೊರ ಹಾಕಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಲು ರಾಜ್ಯ ಒಕ್ಕಲಿಗರ ಸಂಘ ಮುಂದಾಗಿದೆ.
ಹೀಗಾಗಿ ರಾಜ್ಯ ಒಕ್ಕಲಿಗರ ಸಂಘದ ಕೆಂಪೇಗೌಡ ಭವನದ 2ನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ. ಒಕ್ಕಲಿಗರ ಸಂಘದ ನಿರ್ದೇಶಕರು ಮತ್ತು ಸಿನಿಮಾ ನಿರ್ಮಾಪಕರೂ ಆಗಿರುವ ಉಮಾಪತಿ ಶ್ರೀನಿವಾಸ್ ಗೌಡಗೆ ನಟ ದರ್ಶನ್ ಅವರು ಮಾತನಾಡಿದ ರೀತಿ ಸರಿಯಿಲ್ಲ. ಸುಮಾರು ಚಿತ್ರಗಳಿಗೆ ಬಂಡವಾಳ ಹೂಡಿ, ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿರುವ ಉಮಾಪತಿ ಅವರಿಗೆ ತಗಡು ಎಂದು ಹೇಳಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.