ಶಿವಮೊಗ್ಗ: ಇಲ್ಲಿಯ ಕೇಂದ್ರ ಕಾರಾಗೃಹದ (Central Jail) ಮೇಲೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.
ತುಂಗಾನಗರ ಠಾಣೆಯ ಪೊಲೀಸರು ದಾಳಿ ಮಾಡಿದ್ದು, ಬೀಡಿ, ಮೊಬೈಲ್ (Mobile)) ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರಾಗೃಹದ ಎಲ್ಲ ಸೆಲ್ ಗಳ ಮೇಲೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೈ ತೋಟದಲ್ಲಿ ಗಿಡಗಳ ಮಧ್ಯೆ ತಪಾಸಣೆ ನಡೆಸಿದ ಪೊಲೀಸರಿಗೆ ಹಲವಾರು ವಸ್ತುಗಳು ಸಿಕ್ಕಿವೆ.
ಮಣ್ಣು ಅಗೆದು ಪರಿಶೀಲಿಸಿದಾಗ ಪ್ಲಾಸ್ಟಿಕ್ ಕವರ್ ನಲ್ಲಿ ಮುಚ್ಚಿಟ್ಟಿದ್ದ ಮೊಬೈಲ್ ಪತ್ತೆಯಾಗಿದೆ. ಆದರೆ, ಅದರಲ್ಲಿ ಯಾವುದೇ ಸಿಮ್ ಇರಲಿಲ್ಲ ಎನ್ನಲಾಗಿದೆ. ಮಂಗಳೂರು ಸ್ಪೆಷಲ್ ಬೀಡಿಗಳು, ಬೆಂಕಿಪೊಟ್ಟಣ, ಯುಎಸ್ಬಿ ಚಾರ್ಜರ್, ಚಿಕ್ಕ ಬ್ಲೇಡ್, ಕತ್ತರಿ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ.