ADVERTISEMENT
Tuesday, June 17, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರೀಡೆ

ಓ.. ಅಭಿಮಾನಿ…ನಿನಗೆ ಯಾರೂ ಹೀರೋ ಅಲ್ಲ.. ನಿನಗೆ ನೀನೇ ಹೀರೋ.. ಅಷ್ಟೇ ಕಣೋ ಬದುಕು (ಕ್ರೀಡಾ ಲೋಕದ ಮಹಾದುರಂತಗಳು)

Oh, Dear Fan… No One Is Your Hero – You Are Your Own Hero

Shwetha by Shwetha
June 5, 2025
in ಕ್ರೀಡೆ, Newsbeat, Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ಓ.. ಅಭಿಮಾನಿ…ನಿನಗೆ ಯಾರೂ ಹೀರೋ ಅಲ್ಲ.. ನಿನಗೆ ನೀನೇ ಹೀರೋ.. ಅಷ್ಟೇ ಕಣೋ ಬದುಕು (ಕ್ರೀಡಾ ಲೋಕದ ಮಹಾದುರಂತಗಳು)

ಅಂದು ಆಗಸ್ಟ್ 16, 1980, ಇಂದು ಜೂನ್ 4, 2025
ಅವತ್ತು ಈಡನ್ ಗಾರ್ಡನ್… ಇವತ್ತು ಗಾರ್ಡನ್ ಸಿಟಿ..!
ಆಗ ಸತ್ತವರ ಸಂಖ್ಯೆ 16, ಈಗ ಸತ್ತವರ ಸಂಖ್ಯೆ 11
ಅದು ಫುಟ್‍ಬಾಲ್ ಆಟ, ಇದು ಕ್ರಿಕೆಟ್ ಆಟ
ಆಗಲೂ ಆಗಿದ್ದು ಕಾಲ್ತುಳಿತ.. ಈಗಲೂ ಆಗಿದ್ದು ಕಾಲ್ತುಳಿತ..!
ಅವತ್ತಿನ ಘಟನೆಗೆ ಕಾರಣ ಫುಟ್‍ಬಾಲ್ ಅಭಿಮಾನಿಗಳ ನಡುವಿನ ಹುಚ್ಚಾಟದ ಸಂಘರ್ಷ
ಇವತ್ತಿನ ಘಟನೆಗೆ ಕಾರಣ ಲಕ್ಷಾಂತರ ಆರ್‍ಸಿಬಿ ಅಭಿಮಾನಿಗಳ ಅಂಧಾಭಿಮಾನ..!
ಆ ಕೊಲ್ಕತ್ತಾ ದುರ್ಘಟನೆಗೂ ಪೊಲೀಸ್ ಇಲಾಖೆಯನ್ನೇ ಬೊಟ್ಟು ಮಾಡಿ ತೋರಿಸಲಾಗಿತ್ತು.
ಈ ಬೆಂಗಳೂರಿನ ದುರ್ಘಟನೆಗೂ ಪೊಲೀಸ್ ಇಲಾಖೆಯ ಮೇಲೆಯೇ ಕೈ ತೋರಿಸಲಾಗುತ್ತಿದೆ.
ಆಗಿನ ಕಾಲದಲ್ಲಿ ಭಾರತದಲ್ಲಿ ಫುಟ್‍ಬಾಲ್ ಕ್ರೇಜ್ ಜಾಸ್ತಿ
ಈಗಿನ ಭಾರತದಲ್ಲಿ ಎಲ್ಲಿ ನೋಡಿದ್ರಲ್ಲಿ ಕ್ರಿಕೆಟ್ ಆಟವೇ ಅಚ್ಚುಮೆಚ್ಚು
ಅಲ್ಲಿ ಆಗಸ್ಟ್ 16, (ಕೊಲ್ಕತ್ತಾದ ಪಾಲಿಗೆ) ಫುಟ್‍ಬಾಲ್ ಪ್ರೇಮಿಗಳ ದಿನ
ಇಲ್ಲಿ ಜೂನ್ 4- (ಬೆಂಗಳೂರಿಗರಿಗೆ) ಆರ್‍ಸಿಬಿ ಅಭಿಮಾನಿಗಳ ದಿನವಾಗುತ್ತಾ..?
saakshatv.com
ಹೌದು, ಭಾರತದಲ್ಲಿ ಈ ಎರಡು ಮಹಾ ದುರಂತಗಳು ನಡೆದಿದ್ದು ಹುಚ್ಚು ಅಭಿಮಾನದಿಂದ. ಸುಮಾರು 45 ವರ್ಷಗಳ ಹಿಂದೆ ಕೊಲ್ಕತ್ತಾದ ಈಡನ್ ಗಾರ್ಡನ್ ಅಂಗಣದಲ್ಲಿ ಭಾರತದ ಮೊದಲ ಕ್ರೀಡಾ ಮಹಾ ದುರಂತವೊಂದು ನಡೆದಿತ್ತು. ಇದೀಗ ಎರಡನೇ ಕ್ರೀಡಾ ಮಹಾ ಅವಘಢಕ್ಕೆ ಸಾಕ್ಷಿಯಾಗಿದೆ ನಮ್ಮ ಬೆಂಗಳೂರು. (RCB)

Related posts

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

June 16, 2025
ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಸಚಿವ ಮಧು ಬಂಗಾರಪ್ಪ ಅವರ ಕನಸು ನನಸು: ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ವಿಶೇಷ ಶಾಲೆ ಜುಲೈನಲ್ಲಿ ಪ್ರಾರಂಭ!

June 16, 2025

ಅದೊಂದು ದುರಂತ ನಡೆದಿದ್ದು 1980, ಆಗಸ್ಟ್ 16ರ ಇಳಿ ಸಂಜೆಯ ವೇಳೆ. ಆ ಎರಡು ಬಲಿಷ್ಠ ತಂಡಗಳ ಜಿದ್ದಾಜಿದ್ದಿನ ಹೋರಾಟವನ್ನು ಫುಟ್‍ಬಾಲ್ ಡರ್ಬಿ ಅಂತನೇ ಕರೆಯಲಾಗುತ್ತದೆ. ಈಸ್ಟ್ ಬೆಂಗಾಲ್ ಮತ್ತು ಮೋಹನ್ ಬಾಗನ್ ತಂಡಗಳ ನಡುವಿನ ಕಾಳಗ ಅಂದ್ರೆ ಫುಟ್‍ಬಾಲ್ ಪ್ರೇಮಿಗಳ ಕಣ್ಣಿಗೆ ಹಬ್ಬ. ತಮ್ಮ ನೆಚ್ಚಿನ ಆmಗಾರರ ಆಟವನ್ನು ನೋಡಲು ಈಡನ್ ಗಾರ್ಡನ್ ಅಂಗಣದಲ್ಲಿ ಸುಮಾರು 70ಸಾವಿರ ಪ್ರೇಕ್ಷಕರು ಸೇರಿದ್ದರು.

ಇನ್ನೇನೂ, ಪಂದ್ಯ ರೋಚಕವಾಗಿ ಸಾಗುತ್ತಿದ್ದ ವೇಳೆ ಮೋಹನ್ ಬಾಗನ್ ತಂಡದ ಬಿದೇಶ್ ಬಸ್ ಅವರನ್ನು ಈಸ್ಟ್ ಬೆಂಗಾಲ್‍ನ ದಿಲೀಪ್ ಪಾಲಿಟ್ ನೆಲಕ್ಕುರಳಿಸಿದ್ರು. ಮೊದಲೇ ಒರಟಾಗಿ ಆಡುವ ಕುಖ್ಯಾತಿ ಪಡೆದಿದ್ದ ದಿಲೀಪ್ ಪಾಲಿಟ್ ಜೊತೆ ಬಿದೇಶ್ ಮಾತಿನ ಚಕಮಕಿ ನಡೆಸಿದ್ದರು. ಇದನ್ನು ನೋಡಿದ್ದ ಎರಡು ತಂಡಗಳ ಅಭಿಮಾನಿಗಳು ರೊಚ್ಚಿಗೆದ್ದಿದ್ದರು. ಪರಸ್ಪರ ಕಲ್ಲು ತೂರಾಟ, ಕೈಗೆ ಸಿಕ್ಕ ವಸ್ತುಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದರು.
saakshatv.com
ಇದರಿಂದ ಭಯಭೀತರಾದ ಪ್ರೇಕ್ಷಕರು ದಿಕ್ಕಾಪಾಲಾಗಿ ಓಡಿದ್ರು. ಪರಿಣಾಮ ಕಾಲ್ತುಳಿತದಿಂದ 16 ಮಂದಿ ಪ್ರಾಣವನ್ನು ಕಳೆದುಕೊಂಡಿದ್ದರು. ಪ್ರೇಕ್ಷಕರ ಗ್ಯಾಲರಿಯಲ್ಲಿ ನಡೆದಿದ್ದ ಈ ಘಟನೆಯನ್ನು ನಿಯಂತ್ರಿಸಲು ಪೋಲಿಸರಿಗೂ ಸಾಧ್ಯವಾಗಲಿಲ್ಲ. ಪಂದ್ಯದ ವೇಳೆ ಮೈದಾನದಲ್ಲಿ ನಡೆದ ಅಹಿತಕರ ಘಟನೆಯನ್ನು ತಡೆಯಲು ಅಂಪೈರ್ ದಿ. ಸುಧಿನ್ ಚಟರ್ಜಿಗೂ ಆಗಲಿಲ್ಲ. ಅಭಿಮಾನಿಗಳ ಹುಚ್ಚಾಟಕ್ಕೆ ಅಮಾಯಕರು ಜೀವ ಕಳೆದುಕೊಳ್ಳಬೇಕಾಯ್ತು.

ಇನ್ನು 2012ರಲ್ಲೂ ಇದೇ ರೀತಿಯ ಘಟನೆ ಕೊಲ್ಕತ್ತಾದಲ್ಲಿ ನಡೆದಿತ್ತು. ಅದು ಕೂಡ ಮೋಹನ್ ಬಾಗನ್ ಮತ್ತು ಈಸ್ಟ್ ಬೆಂಗಾಲ್ ತಂಡಗಳ ನಡುವಿನ ಪಂದ್ಯದ ವೇಳೆಯಲ್ಲೇ. ಮೋಹನ್ ಬಾಗನ್ ತಂಡದ ರಹೀಮ್ ನಬಿ ಮೇಲೆ ಈಸ್ಟ್ ಬೆಂಗಾಲ್‍ನ ಅಭಿಮಾನಿಗಳು ಕಲ್ಲು ತೂರಾಟ ನಡೆಸಿದ್ದರು.

ಆಗ ಈಸ್ಟ್ ಬೆಂಗಾಲ್‍ನ ಡಿಫೆಂಡರ್ ಅರ್ನಾಬ್ ಮಂಡಲ್ ಅವರು ಹಣೆ ಪೆಟ್ಟು ಬಿದ್ದಿದ್ದ ರಹೀಮ್ ನಬಿಯವರನ್ನು ಸುರಕ್ಷಿತವಾಗಿ ಮೈದಾನದಿಂದ ಹೊರಗಡೆ ಕರೆ ತಂದು ಮತ್ತೊಂದು ಅವಘಢವನ್ನು ತಪ್ಪಿಸಿದ್ರು. ಈ ಘಟನೆಯಲ್ಲಿ ಪೋಲಿಸರು ಸೇರಿ ಸುಮಾರು 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಪುಣ್ಯಕ್ಕೆ ಯಾವುದೇ ಜೀವಕ್ಕೆ ಹಾನಿಯಾಗಿಲ್ಲ.

ಇದು ಫುಟ್‍ಬಾಲ್ ಆಟದ ವೇಳೆ ನಡೆದ ಕರಾಳ ದುರ್ಘಟನೆಗಳಾದ್ರೆ, ಕ್ರಿಕೆಟ್ ಆಟದ ವೇಳೆಯಲ್ಲೂ ಇದೇ ರೀತಿಯ ಅವಘಢಗಳು ನಡೆದಿವೆ. 1969ರಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದ ವೇಳೆ ಬೆಂಕಿ ಅವಘಢ ನಡೆದಿತ್ತು. ಎಸ್. ವೆಂಕಟರಾಘವನ್‍ಗೆ ಅಂಪೈರ್ ನೀಡಿರುವ ವಿವಾದಾತ್ಮಕ ತೀರ್ಪಿನಿಂದ ಕುಪಿತಗೊಂಡಿದ್ದ ಪ್ರೇಕ್ಷಕರು ಗ್ಯಾಲರಿಯಲ್ಲೇ ಬೆಂಕಿ ಹಚ್ಚಿದ್ದರು. ಆದ್ರೆ ಅದೃಷ್ಟವಶಾತ್ ಯಾವುದೇ ರೀತಿಯ ಸಾವು ನೋವು ಸಂಭವಿಸಿಲ್ಲ. ಹೀಗೆ ಭಾರತೀಯ ಕ್ರೀಡಾ ಕ್ಷೇತ್ರಗಳಲ್ಲೂ ಕೆಲವೊಂದು ಅಹಿತಕರ ಘಟನೆಗಳು ನಡೆದಿವೆ.
saakshatv.com
ಆದ್ರೆ ಬೆಂಗಳೂರಿನಲ್ಲಿ ನಡೆದಿದ್ದು ಮಾತ್ರ ಮಹಾ ದುರಂತ. ಸುಮಾರು 2 ಲಕ್ಷಕ್ಕೂ ಅಧಿಕ ಅಭಿಮಾನಿಗಳು ವಿರಾಟ್ ಕೊಹ್ಲಿಯನ್ನು ಕಣ್ಣಾರೆ ನೋಡಬೇಕು ಎಂಬ ಹಂಬಲದಿಂದ ವಿಜಯೋತ್ಸವಕ್ಕೆ ಬಂದಿದ್ದರು. ಇದು ತಪ್ಪು ಅಂತನೂ ಅಲ್ಲ. ನೆಚ್ಚಿನ ಆಟಗಾರರನ್ನು ನೋಡುವುದು ಅಭಿಮಾನಿಗಳ ಮಿಡಿತವಾಗಿರುತ್ತದೆ. ಆದ್ರೆ ಪರಿಸ್ಥಿತಿಯನ್ನು ಗಮನಿಸಬೇಕು ಅಲ್ವಾ..? ಜನಸಾಗರವನ್ನು ನೋಡಿದಾಗ ಇಲ್ಲಿರುವುದು ಕ್ಷೇಮವಲ್ಲ ಎಂಬ ಅಲೋಚನೆಯಾದ್ರೂ ಬರಬೇಕಲ್ವಾ..?

ಅಷ್ಟಕ್ಕೂ ಘನವೆತ್ತ ಸರ್ಕಾರ ಮತ್ತು ಪೋಲಿಸ್ ಇಲಾಖೆ ಮುನ್ನಚೇರಿಕೆಯ ಕ್ರಮವನ್ನು ತೆಗೆದುಕೊಳ್ಳಬೇಕಿತ್ತು. ಜನರನ್ನು ನಿಯಂತ್ರಿಸಲು ಲಾಠಿ ಚಾರ್ಜ್
ಮಾಡಿದಾಗ ಸಹಜವಾಗಿ ಜನ ದಿಕ್ಕುಪಾಲಾಗಿ ಓಡ್ತಾರೆ. ಆಗ ಈ ರೀತಿಯ ಅವಘಢಗಳು ನಡೆದೇ ನಡೆಯುತ್ತವೆ. ಹಾಗಂತ ಬೆಂಗಳೂರಿನಲ್ಲಿ ಈ ರೀತಿಯ ಜನಸಾಗರ ಸೇರುವುದು ಇದೇನೂ ಮೊದಲಲ್ಲ. ಆಗ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಆದ್ರೆ ಈಗಿನ ಮಹಾದುರಂತಕ್ಕೆ ಕಾರಣ ಪ್ರಚಾರದಗೀಳು.. ರೀಲ್ಸ್ ಹುಚ್ಚು, ರಾಜಕಾರಣಿಗಳ ಸ್ವಪ್ರತಿಷ್ಠೆ, ಪೊಲೀಸ್ ಇಲಾಖೆಯ ವೈಫಲ್ಯ.

ಅಂತೂ ಇಂತೂ ಸಂಭ್ರಮಾಚರಣೆಯಲ್ಲಿ 11 ಅಮಾಯಕರ ಬಲಿ ತೆಗೆದುಕೊಂಡ ಕಳಂಕವಂತೂ ಆರ್‍ಸಿಬಿ ತಂಡಕ್ಕೆ ಶಾಶ್ವತವಾಗಿ ಅಂಟಿಕೊಂಡಿದೆ. 18 ವರ್ಷಗಳ ಬಳಿಕ ಪ್ರಶಸ್ತಿ ಗೆದ್ದ ಆರ್‍ಸಿಬಿ ತಂಡದ ಖುಷಿ 18 ಗಂಟೆಗಳಲ್ಲೇ ಮಾಯಾವಾಗಿದ್ದು ಮಾತ್ರ ವಿಪರ್ಯಾಸವೇ ಸರಿ.
saakshatv.com
ಇನ್ನು ವಿಶ್ವ ಕ್ರೀಡಾಲೋಕದಲ್ಲಿ ಇದಕ್ಕಿಂತಲೂ ದೊಡ್ಡ ಮಹಾದುರಂತಗಳು ಸಂಭವಿಸಿವೆ.

1964 -ಲಿಮಾ ಕ್ರೀಡಾಂಗಣ ಗಲಭೆ. ಇದು ಕ್ರೀಡಾ ಇತಿಹಾಸದಲ್ಲೇ ಅತೀ ದೊಡ್ಡ ದುರಂತ. ಅರ್ಜೆಂಟಿನಾ ಮತ್ತು ಪೆರು ತಂಡಗಳ ನಡುವಿನ ಒಲಿಂಪಿಕ್ಸ್ ಅರ್ಹತಾ ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಗಲಭೆ ನಡೆದಿತ್ತು. ಪರಿಣಾಮ 300ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿದ್ದರು. ಸಾವಿರಕ್ಕಿಂತಲೂ ಅಧಿಕ ಮಂದಿ ಗಾಯಗೊಂಡಿದ್ದರು.

1989- ಹಿಲ್ಸ್ ಬರೋ ದುರಂತ – ಲಿವರ್‍ಪೂಲ್ ಮತ್ತು ನಾಟಿಂಗ್ ಹ್ಯಾಮ್ ಫಾರೆಸ್ಟ್ ತಂಡಗಳ ನಡುವಿನ ಪಂದ್ಯದ ವೇಳೆ ನಡೆದಿದ್ದ ಕಾಲ್ತುಳಿತದಲ್ಲಿ 97 ಜನ ಸಾವನ್ನಪ್ಪಿದ್ದರು. ನೂರಾರು ಜನ ಗಾಯಗೊಂಡಿದ್ದರು.

1985- ಹೇಸೆಲ್ ಕ್ರೀಡಾಂಗಣ ದುರಂತ – ಲಿವರ್‍ಪೂಲ್ ಮತ್ತು ಜುವೆಂಟಸ್ ತಂಡಗಳ ನಡುವಿನ ಯೂರೋಪಿಯನ್ ಕಪ್ ಫೈನಲ್ ಪಂದ್ಯದ ವೇಳೆ ಕ್ರೀಡಾಂಗಣದ ಗೋಡೆ ಕುಸಿದು 39 ಅಭಿಮಾನಿಗಳು ಜೀವ ಕಳೆದುಕೊಂಡಿದ್ದರು.

1982 – ಲುಜ್ನಿಕಿ ಕ್ರೀಡಾಂಗಣದಲ್ಲಿ ನಡೆದಿದ್ದ ದುರಂತ – ಇದು ರಷ್ಯಾ ಕ್ರೀಡಾ ಇತಿಹಾಸದ ಅತೀ ದೊಡ್ಡ ದುರಂತ. ಸ್ಟಾರ್ಟಕ್ ಮಾಸ್ಕೋ ಮತ್ತು ಜಾರ್ಲೆಮ್ ಎಫ್‍ಸಿ ನಡುವಿನ ಪಂದ್ಯದ ವೇಳೆ ನಡೆದ ದುರಂತದಲ್ಲಿ 66 ಅಭಿಮಾನಿಗಳು ಜೀವ ಕಳೆದುಕೊಂಡಿದ್ದರು.

2009 – ಹೂಫೌಟ್ – ಬೋಯಿಗ್ನಿ ಕಾಲ್ತುಳಿತ – ಅಬಿಡ್ಚಾನ್‍ನಲ್ಲಿ ಐವರಿಕೋಸ್ಟಾ ಮತ್ತು ಮಲಾವಿ ನಡುವಿನ ವಿಶ್ವಕಪ್ ಅರ್ಹತಾ ಪಂದ್ಯದ ವೇಳೆ ನಡೆದಿದ್ದ ಕಾಲ್ತುಳಿತದಲ್ಲಿ 18 ಫುಟ್‍ಬಾಲ್ ಅಭಿಮಾನಿಗಳು ಸಾವನ್ನಪ್ಪಿದ್ದರು. 135ಕ್ಕಿಂತಲೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದರು.
saakshatv.com
ಒಟ್ಟಾರೆ, ಅಮಾಯಕರ ಪ್ರಾಣದ ಚೆಲ್ಲಾಟವಾಡೋ ಕ್ರೀಡಾಭಿಮಾನಿಗಳ ಅಂಧಾಭಿಮಾನಕ್ಕೆ ಧಿಕ್ಕಾರವಿರಲಿ.. ಅಭಿಮಾನ ಇರಬೇಕು.. ಅದು ಮನಸ್ಸಿನಲ್ಲಿದ್ರೆ ಸಾಕು.. ನೆನಪಿಡಿ..ನಿಮ್ಮ ಅತಿರೇಕದ ಅಭಿಮಾನದಿಂದ ನಿಮ್ಮ ಹೊಟ್ಟೆ ತುಂಬುವುದಿಲ್ಲ. ಪ್ರಾಣ ಕಳೆದುಕೊಂಡ ಮೇಲೆ ನಿಮ್ಮ ಮನೆಯವರನ್ನು ನೋಡಿಕೊಳ್ಳಲು ಯಾರು ಬರಲ್ಲ. ಸೂತಕದ ವೇಳೆ ಸಾಂತ್ವನ ಅಷ್ಟೇ ಸಿಗುತ್ತೆ. ಹಾಗಾಗಿ ಕ್ರೀಡೆಯನ್ನು ಕ್ರೀಡೆಯಾಗಿ ಪರಿಗಣಿಸಿ. ನಿಮ್ಮ ನೆಚ್ಚಿನ ಕ್ರೀಡೆಯ ರೋಚಕ ಕ್ಷಣಗಳನ್ನು ಎಂಜಾಯ್ ಮಾಡಿ.. ಆಟ ನೋಡಿ, ಮುಗಿದ ಮೇಲೆ ನೀವು ನೀವಾಗಿರಿ.
ಕೊನೆಯದಾಗಿ, ಓ ಅಭಿಮಾನಿ..ನಿನಗೆ ಯಾರೂ ಹೀರೋ ಅಲ್ಲ.. ನಿನಗೆ ನೀನೇ ಹೀರೋ.. ಅಷ್ಟೇ ಕಣೋ ಬದುಕು..!

ಸನತ್ ರೈ

ShareTweetSendShare
Join us on:

Related Posts

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ ಬರುತ್ತದೆ.

by Shwetha
June 16, 2025
0

ಪ್ರತಿದಿನ ಮನೆ ಬಾಗಿಲಿಗೆ ಈ ಪುಡಿಯನ್ನು ಸಿಂಪಡಿಸಿ ಮಂತ್ರವನ್ನು ಪಠಿಸುವವರ ಮನೆಗಳಿಗೆ ಹಣದ ಹರಿವು ಕಂಡುಬರುತ್ತದೆ. ಎಂದಿಗೂ ಬರುವುದಿಲ್ಲ ಎಂದು ಅವರು ಭಾವಿಸಿದ್ದ ಹಣವು ಅನಿರೀಕ್ಷಿತ ಸ್ಥಳಗಳಿಂದ...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಸಚಿವ ಮಧು ಬಂಗಾರಪ್ಪ ಅವರ ಕನಸು ನನಸು: ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ವಿಶೇಷ ಶಾಲೆ ಜುಲೈನಲ್ಲಿ ಪ್ರಾರಂಭ!

by Shwetha
June 16, 2025
0

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ವಿಶೇಷ ಶಾಲೆ ಸ್ಥಾಪನೆಯ ಕನಸು ಇದೀಗ ನನಸಾಗುವತ್ತ ವೇಗವಾಗಿ ಹೆಜ್ಜೆ ಹಾಕುತ್ತಿದೆ. ಇತ್ತೀಚಿನ ವರದಿಗಳ ಪ್ರಕಾರ,...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

by Shwetha
June 16, 2025
0

ಬೆಂಗಳೂರು, ಕರ್ನಾಟಕ: ಇಸ್ರೇಲ್ ಮತ್ತು ಇರಾನ್ ನಡುವೆ ಪ್ರಸ್ತುತ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ, ಕರ್ನಾಟಕದ 19 ಸದಸ್ಯರ ನಿಯೋಗವೊಂದು ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದೆ. ಈ ನಿಯೋಗದಲ್ಲಿ ಕಾಂಗ್ರೆಸ್, ಬಿಜೆಪಿ...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಬಿಹಾರ: ಲಾಲು ಕಾಲಿನ ಬಳಿ ಅಂಬೇಡ್ಕರ್ ಫೋಟೋ; ಬಿಜೆಪಿ ಆರೋಪ, ತೇಜಸ್ವಿ ತಿರುಗೇಟು!

by Shwetha
June 16, 2025
0

ಪಟ್ನಾ, ಬಿಹಾರ: ಬಿಹಾರ ರಾಜಕಾರಣದಲ್ಲಿ ಹೊಸ ವಿವಾದವೊಂದು ಭುಗಿಲೆದ್ದಿದ್ದು, ಆರ್‌ಜೆಡಿ (ರಾಷ್ಟ್ರೀಯ ಜನತಾ ದಳ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಕಾಲಿನ ಬಳಿ ಸಂವಿಧಾನ ಶಿಲ್ಪಿ...

ಇಸ್ರೇಲ್-ಇರಾನ್ ಉದ್ವಿಗ್ನತೆ: ಯುದ್ಧಭೂಮಿ ಇಸ್ರೇಲ್‌ನಲ್ಲಿ ಕರ್ನಾಟಕದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಿಯೋಗ

ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ 2025

by Shwetha
June 16, 2025
0

LIC HFL Recruitment 2025 : ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram