ತೈಲ ಬೆಲೆ ಏರಿಕೆ : `ಕೈ’ ನಾಯಕರಿಂದ ಎತ್ತಿನಗಾಡಿ ಚಲೋ ಪ್ರೊಟೆಸ್ಟ್ congress saaksha tv
ಬೆಂಗಳೂರು : ದೇಶದಲ್ಲಿ ತೈಲ ಹಾಗೂ ಇಂಧನ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಎತ್ತಿನಗಾಡಿ ಚಲೋ ಪ್ರತಿಭಟನೆ ನಡೆಸುತ್ತಿದ್ದಾರೆ.
ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ರಾಜ್ಯ ಸರ್ಕಾರದ ಗಮನ ಸೆಳೆಯಲು ಕಾಂಗ್ರೆಸ್ ನಾಯಕರು ಈ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಮಾಜಿ ಗೃಹ ಸಚಿವ ಎಂ.ಬಿ. ಪಾಟೀಲ್, ಪರಿಷತ್ ಸದಸ್ಯ ನಜಿರ್ ಅಹಮದ್ ಭಾಗವಹಿಸಿದ್ದಾರೆ.
ನಗರದ ಶಿವಾನಂದ ಸರ್ಕಲ್ ನ ಸರ್ಕಾರಿ ನಿವಾಸದಿಂದ ಸಿದ್ದರಾಮಯ್ಯ ಹಾಗೂ ಸದಾಶಿವನಗರ ನಿವಾಸದಿಂದ ಡಿ.ಕೆ.ಶಿವಕುಮಾರ್ ಪ್ರತಿಭಟನೆ ಆರಂಭಗೊಂಡಿದೆ. ಎತ್ತಿನಗಾಡಿಯಲ್ಲೇ ಕಾಂಗ್ರೆಸ್ ನಾಯಕರು ವಿಧಾನಸೌಧಕ್ಕೆ ತೆರಳಲಿದ್ದಾರೆ.
ಎತ್ತಿನಗಾಡಿ ಚಲೋ ಪ್ರತಿಭಟನೆಗೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು ದೇಶದ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇನೆ.
ರಾಜ್ಯದಲ್ಲಿ ಸರ್ಕಾರದಿಂದ ಪಿಕ್ ಪಾಕೆಟ್ ನಡೆಯುತ್ತಿದೆ. ನಮ್ಮ ಹೋರಾಟವು ನಿರಂತರವಾಗಿರಲಿದೆ. ಬೆಲೆ ಏರಿಕೆ ಬಗ್ಗೆ ಸದನದೊಳಗೂ ಚರ್ಚೆ ಮಾಡುತ್ತೇವೆ ಎಂದು ಗುಡುಗಿದರು.