ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆನ್‍ಲೈನ್ ಶಿಕ್ಷಣದ ಎಫೆಕ್ಟ್: ತಾಳಿ ಅಡವಿಟ್ಟು ಟಿ.ವಿ ಕೊಡಿಸಿದ ಮಹಾತಾಯಿ..!

admin by admin
July 31, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಗದಗ: ಕೂಲಿ ನಾಲಿ ಮಾಡಿಕೊಂಡು ಪ್ರತಿ ದಿನದ ಬದುಕು ಸಾಗಿಸುತ್ತಾ ಮಕ್ಕಳಿಗೆ ಕೈಲಾದಷ್ಟು ಕಲಿಸುವ ಬಡ ಕುಟುಂಬ. ಆದ್ರೆ ಕೊರೊನಾ ಮಾಹಾಮಾರಿಯಿಂದಾಗಿ ಕರ್ನಾಟಕ ಮಾತ್ರವಲ್ಲ, ಇಡೀ ದೇಶದಲ್ಲೇ ಯಾವ ಶಾಲೆಗಳ ಬಾಗಿಲು ತೆಗೆದಿಲ್ಲ. ಹೀಗಾಗಿ ಬಹುತೇಕ ಶಾಲೆಗಳು ಆನ್‍ಲೈನ್ ಶಿಕ್ಷಣದ ಮೊರೆ ಹೋಗಿವೆ.
ಆದರೆ, ಆನ್‍ಲೈನ್ ಶಿಕ್ಷಣ ಪಡೆಯಲಾಗದ ಅದೆಷ್ಟೋ ಬಡ ಮಕ್ಕಳು ಶಿಕ್ಷಣದಿಂದ ವಂಚಿತವಾಗುತ್ತಿವೆ. ನಗರ ಹಾಗೂ ಗ್ರಾಮೀಣ ಪ್ರದೇಶದ ಮಕ್ಕಳಿಗಾಗಿ ರಾಜ್ಯ ಸರ್ಕಾರ ಚಂದನ ಟಿವಿ ಮೂಲಕ ಸೇತುಬಂಧ ಕಾರ್ಯಕ್ರಮದಡಿ ಪಾಠ ಪ್ರವಚನ ಮಾಡಿಸುತ್ತಿದೆ. ಆದರೆ, ತುತ್ತಿನ ಚೀಲ ತುಂಬಿಸಿಕೊಳ್ಳಲು ಪರದಾಡುವ ಅದೆಷ್ಟೋ ಕುಟುಂಬಗಳು ಟಿ.ವಿಯ ಮುಖವನ್ನೇ ನೋಡಿಲ್ಲ. ಹೀಗಾಗಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಆನ್‍ಲೈನ್ ಶಿಕ್ಷಣವನ್ನು ಪಡೆಯಲಾಗದ ಸ್ಥಿತಿ ಗ್ರಾಮೀಣ ಪ್ರದೇಶದ ಮಕ್ಕಳದ್ದಾಗಿದೆ.
ಗದಗ್ ಜಿಲ್ಲೆಯಲ್ಲಿ ತಾಯಿಯೊಬ್ಬರು ಮಕ್ಕಳಿಗಾಗಿ ತಾಳಿಯನ್ನೇ ಅಡವಿಟ್ಟು ಟಿ.ವಿ ಖರೀದಿಸಿದ ಸಂಗತಿ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದೆ.

ಟಿ.ವಿಗಾಗಿ ತಾಳಿ ಅಡವಿಟ್ಟ ತಾಯಿ..!
ಆನ್‍ಲೈನ್ ಪಾಠಕ್ಕಾಗಿ ತಾಯಿಯೊಬ್ಬರು ತನ್ನ ಚಿನ್ನದ ತಾಳಿಯನ್ನ ಅಡವಿಟ್ಟು ಮಕ್ಕಳಿಗಾಗಿ ಟಿವಿ ತಂದುಕೊಟ್ಟ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರ್ ನಾಗನೂರ ಗ್ರಾಮದಲ್ಲಿ ನಡೆದಿದೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026


ಕಸ್ತೂರಿ ಎಂಬುವರ ಇಬ್ಬರು ಮಕ್ಕಳು ಹೈಸ್ಕೂಲ್ ಮತ್ತು ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದಾರೆ. ಓರ್ವ ವಿದ್ಯಾರ್ಥಿನಿ 8 ನೇ ತರಗತಿಯಲ್ಲಿ, ಇನ್ನೋರ್ವ 7 ನೇ ತರಗತಿಯಲ್ಲಿ ಓದುತ್ತಿದ್ದಾರೆ. ಆದ್ರೆ ಈಗ ಮಕ್ಕಳಿಗೆ ಚಂದನ ವಾಹಿನಿಯಲ್ಲಿ ಪ್ರಸಾರವಾಗುವ ಸೇತುಬಂಧ ಪಾಠವನ್ನ ಕೇಳಲು ಶಿಕ್ಷಕರು ಪ್ರತಿದಿನ ಫೋನ್ ಮಾಡಿ ಟಿವಿ ನೋಡಿ ಅಂತ ಹೇಳ್ತಿದ್ರು. ಜೊತೆಗೆ ಅದರಲ್ಲಿ ಬರುವ ಪಾಠಗಳ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿದ್ದರು.
ಆದರೆ, ಮನೆಯಲ್ಲಿ ಟಿವಿ ಇಲ್ಲದ ಕಾರಣ ಪಾಠ ಕೇಳಲು ಆಗುತ್ತಿರಲಿಲ್ಲ. ಹೀಗಾಗಿ ಶಿಕ್ಷಕರು ಕೇಳಿದ ಪ್ರಶ್ನೆಗೆ ಉತ್ತರಿಸಲು ಮಕ್ಕಳಿಗೆ ಸಾಧ್ಯವಾಗುತ್ತಿರಲಿಲ್ಲ. ಇವರ ಮನೆಯಲ್ಲಿ ಈ ಮೊದಲು ಇದ್ದ ಟಿವಿ ಸುಟ್ಟು ಹೋಗಿತ್ತು. ಹೀಗಾಗಿ ಮಕ್ಕಳು ಟಿವಿ ನೋಡಲು ಕಷ್ಟ ಪಡುತ್ತಿದ್ದರು. ಬೇರೆಯವರ ಮನೆಗೆ ಹೋದ್ರೆ ಅವರು ಸಿನಿಮಾ ಇನ್ನಿತರ ಕಾರ್ಯಕ್ರಮಗಳನ್ನು ನೋಡುತ್ತಿದ್ದರು. ಇದರಿಂದ ಮನನೊಂದ ತಾಯಿ ಟಿ.ವಿಯೊಂದನ್ನ ಖರೀದಿಸಲೇಬೇಕು ಅಂತ ವಿಚಾರ ಮಾಡ್ತಾರೆ.
ಮೊದಲೇ ಲಾಕ್‍ಡೌನ್‍ನಿಂದಾಗಿ ಕೆಲಸವಿಲ್ಲದೆ ಕೈಯಲ್ಲಿ ಹಣ ಇಲ್ಲದೆ ಕಂಗಾಲಾಗಿದ್ದ ತಾಯಿಗೆ, ಮಕ್ಕಳ ಗೋಳು ನೋಡಲು ಆಗಲಿಲ್ಲ. ಹೀಗಾಗಿ ಒಂದು ದಿಢೀರ್ ನಿರ್ಧಾರಕ್ಕೆ ಬಂದ ಕಸ್ತೂರಿ, ತನ್ನ ಕೊರಳಲಿದ್ದ ಚಿನ್ನದ ತಾಳಿಯನ್ನ ಅಡವಿಟ್ಟು ಟಿವಿ ಖರೀದಿಸಲು ಯೋಚನೆ ಮಾಡ್ತಾರೆ. ಕೊನೆಗೆ ಅಂದುಕೊಂಡ ನಿರ್ಧಾರದಂತೆ ಒಂದು ಟಿವಿಯನ್ನ ತಂದು ಮಕ್ಕಳಿಗೆ ಓದಲು ಅನುಕೂಲ ಮಾಡಿಕೊಡ್ತಾರೆ.

ಕಸ್ತೂರಿ ಪತಿ ಕೂಲಿ ಕೆಲಸ ಮಾಡ್ತಾರೆ. ಇಬ್ಬರು ಕೂಲಿ ಮಾಡಿಯೇ ಕುಟುಂಬ ಸಾಗಿಸ್ತಾರೆ. ಆದರೆ ಮೊದಲೇ ಕೂಲಿ ಇಲ್ಲದೆ ಕಂಗಾಲಾಗಿದ್ದ ದಂಪತಿಗೆ ಇದೊಂದು ದೊಡ್ಡ ಸಮಸ್ಯೆಯಾಗಿ ಕಾಡಿದೆ. ಮಕ್ಕಳು ಚೆನ್ನಾಗಿ ಕಲಿತರೆ ಸಾಕು ಎಂಬ ನಿರ್ಧಾರಕ್ಕೆ ಬಂದು 20 ಸಾವಿರ ರೂ.ಗೆ ತಾಳಿ ಅಡವಿಟ್ಟು 14 ಸಾವಿರ ರೂ.ಗೆ ಟಿವಿ ಖರೀದಿ ಮಾಡಿದ್ದಾರೆ. ಅವರ ಈ ಮಹತ್ಕಾರ್ಯಕ್ಕೆ ಮಕ್ಕಳೂ ಸಹ ಚೆನ್ನಾಗಿ ಓದುತ್ತಿದ್ದೇವೆ ಅಂತಿದ್ದಾರೆ.

ಬಂತು ನೆರವಿನ ಭರವಸೆ..!
ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟು ಟಿ.ವಿ ಖರೀದಿಸಿದ ತಾಯಿ ಕಸ್ತೂರಿ ಅವರ ಬಗ್ಗೆ ಬೆಳಿಗ್ಗೆಯಿಂದಲೇ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ರಾಜ್ಯಾದ್ಯಂತ ಮೆಚ್ಚುಗೆಯ ಜತೆಗೆ ಆರ್ಥಿಕ ನೆರವು ನೀಡುವುದಾಗಿ ಹಲವರು ಮುಂದೆ ಬಂದಿದ್ದಾರೆ.
ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ್ ಕೂಡ ತಾಳಿ ಅಡವಿಟ್ಟು ಟಿ.ವಿ ಖರೀದಿಸಿದ ತಾಯಿ ಕಸ್ತೂರಿ ಕುಟುಂಬಕ್ಕೆ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ತಾಯಿ ಕಸ್ತೂರಿ ಅವರು ಅಡವಿಟ್ಟ ತಾಳಿಯನ್ನು ಬಿಡಿಸಿ ವಾಪಸ್ ಕೊಡಿಸುತ್ತೇವೆ. ಜತೆಗೆ ಅವರ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವುದಾಗಿ ತಿಳಿಸಿದ್ದಾರೆ.

Tags: kannada newskarnatakamother has bought a TVonline education
ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram