“ಓರಿಯೋ” ಗೆ ಕಂಠೀರವ ಸ್ಟುಡಿಯೋದಲ್ಲಿ ಚಾಲನೆ..! ಸಿನಿಮಾ ಅದ್ಬುಲ್ ಕಲಾಮ್ ಮಾತುಗಳೇ ಸ್ಪೂರ್ತಿ..!
ವಿಭಿನ್ನ ಟೈಟಲ್ ನಿಂದಲೇ ಗಮನ ಸೆಳೆಯುತ್ತಿರುವ ಕನ್ನಡದ ಹೊಸ ಸಿನಿಮಾ ಓರಿಯಾ ಸುಮಾರು 4 ಭಾಷೆಗಗಳಲ್ಲಿ ರಿಲೀಸ್ ಆಗಲಿದೆ.. ಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ “ಓರಿಯೋ” ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.
ಚಿತ್ರದ ಮೊದಲ ಸನ್ನಿವೇಶಕ್ಕೆ ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಸದಸ್ಯರಾದ ಮಂಜುನಾಥ್ ಆರಂಭಫಲಕ ತೋರಿದರು. ಮಾಜಿ ನಗರ ಪಾಲಿಕೆ ಸದಸ್ಯರಾದ ಕೆ.ಮುನಿರಾಜು ಕ್ಯಾಮೆರಾ ಚಾಲನೆ ಮಾಡಿದರು. ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.
ಬಳಿಕ ಮಾತನಾಡಿದ ನಿರ್ದೇಶಕ ನಂದನ್ ಪ್ರಭು ಅವರು ಅಪ್ಪುವನ್ನ ನೆನೆಯುವ ಮೂಲಕ ಮಾತು ಆರಂಭಿಸಿದರು. ಇಂದಿಗೆ ಅಪ್ಪು ಅವರು ನಮ್ಮನ್ನು ಅಗಲಿ ಒಂದು ತಿಂಗಳಾಯಿತು. ಆದರೂ ದು:ಖ ಕಡಿಮೆಯಾಗಿಲ್ಲ. ಅವರಿಗೆ ನಮ್ಮ ನಮನ ಎಂದು ಮಾತು ಮುಂದುವರೆಸಿ , ನಾನು ಈ ಹಿಂದೆ ‘ಪ್ರೀತಿಯ ಲೋಕ’ ಹಾಗೂ ‘ಲವ್ ಇಸ್ ಪಾಯ್ ಸನ್’ ಚಿತ್ರಗಳನ್ನು ನಿರ್ದೇಶಿಸಿದ್ದೆ. 6 ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಮರಳಿ ಬಂದಿದ್ದೇನೆ.
ನಾನು ನಿರ್ದೇಶನಕ್ಕೆ ಬರುವ ಮೊದಲು ಮಾಜಿ ರಾಷ್ಟ್ರಪತಿ ಎ ಪಿ ಜೆ ಅಬ್ದುಲ್ ಕಲಾಂ(ರಾಷ್ಟ್ರಪತಿ ಆಗುವುದಕ್ಕಿಂತ ಮುಂಚೆ) ಅವರ ಕಾರಿಗೆ ಚಾಲಕನಾಗಿದ್ದೆ.
ಅವರು ನನ್ನೊಂದಿಗೆ ಆಡುತ್ತಿದ್ದ ಮಾತುಗಳು ಈ ಕಥೆಗೆ ಸ್ಪೂರ್ತಿ. “ಓರಿಯೋ” ಪದಕ್ಕೆ ಒಂದೊಂದು ದೇಶದಲ್ಲಿ ಒಂದೊಂದು ಹೆಸರಿದೆ. ಭಾರತದಲ್ಲಿ ಆ ಹೆಸರಿನ ಬಿಸ್ಕೆಟ್ ಸಹ ಇದೆ ಎಂದು ವಿವರಣೆ ನೀಡಿದರು.
ನಾವು ಎಚ್ಚರ ತಪ್ಪಿದರೆ, ಮುಂದೊಂದು ದಿನ ಹೀಗೂ ಆಗಬಹುದು ಎಂಬ ಎಚ್ಚರಿಕೆಯ ಸಂದೇಶವನ್ನು ಇಡೀ ವಿಶ್ವಕ್ಕೆ ನೀಡುವ ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾವಿದು ಎಮದು ನಿರ್ದೇಶ ನಂದ ಪ್ರಭು ಅವರು ವಿವರಿಸಿದ್ರು..
ಅಲ್ಲದೇ ಪ್ರಮುಖ ಪಾತ್ರಧಾರಿ ನಿತಿನ್ ಗೌಡ ಮಾತನಾಡಿ ನಾನು ಮೂಲತಃ ಆರ್ಕಿಟೆಕ್ಟ್. ಇದು ನನ್ನ ಮೊದಲ ಚಿತ್ರ. ಪಾತ್ರ ಚೆನ್ನಾಗಿದೆ. ಅವಕಾಶ ನೀಡಿದ್ದ ನಂದನ್ ಪ್ರಭು ಅವರಿಗೆ ಧನ್ಯವಾದ ಎಂದರು.
ಬಳಿಕ ಮಾತನಾಡಿದ ನಟ ಸುಚಿತ್ ನಾನು “ರಥಾವರ” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದೇನೆ. ವೈರ ಹಾಗೂ ಪುಟಾಣಿ ಪಂಟರ್ ಚಿತ್ರಗಳಲ್ಲೂ ಅಭಿನಯಿಸಿದ್ದೇನೆ ಎಂದು ಹೇಳ್ತಾ ಈ ಚಿತ್ರದಲ್ಲಿ ಉತ್ತಮ ಪಾತ್ರ ನೀಡಿರುವ ನಿರ್ದೇಶಕರಿಗೆ ಧನ್ಯವಾದಗಳನ್ನ ಅರ್ಪಿಸಿದ್ರು.
ಸಿನಿಮಾದಲ್ಲಿ ಶುಭಿ, ಲತಾ ನಾಯಕಿಯರಾಗಿದ್ರೆ , ಸಾಯಿಕಿರಣ್ ಸಂಗೀತ ಚಿತ್ರಕ್ಕಿದೆ. ಡಿಸೆಂಬರ್ 1 ರಿಂದ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಆರಂಭವಾಗಲಿದೆ. ಮಡಿಕೇರಿ, ಚಿಕ್ಕಮಗಳೂರಿನಲ್ಲಿ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.
ಶಿವಾಂಜನೇಯ ಪ್ರೊಡಕ್ಷನ್ಸ್ ಲಾಂಛನದಲ್ಲಿ ವಿಜಯಶ್ರೀ ಆರ್ ಎಂ ಹಾಗೂ ವೈಶಾಲಿ.ವೈ.ಜೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಟಿ.ಕೃಷ್ಣಪ್ಪ ಹಾಗೂ ರೇಣುಕಾ ಪ್ರಭಾಕರ್ ಈ ಚಿತ್ರದ ಸಹ ನಿರ್ಮಾಪಕರಾಗಿದ್ದಾರೆ. ಸಂಭಾಷಣೆ ಹಾಗೂ ಸಹ ನಿರ್ದೇಶನ ಬಿ.ರಾಜರತ್ನ ಅವರದು.
ಬ್ಯಾಟಪ್ಪ ಗೌಡ ಛಾಯಾಗ್ರಹಣ, ಸಾಯಿಕಿರಣ್ ಸಂಗೀತ ನಿರ್ದೇಶನ, ಶ್ರೀನಿವಾಸ್ ಪಿ ಬಾಬು ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಜೈ ಹರಿಕೃಷ್ಣ ಅವರ ನೃತ್ಯ ನಿರ್ದೇಶನ “ಓರಿಯೋ” ಚಿತ್ರಕ್ಕಿದೆ.








