ರಾಮನಗರ: ಮಹಾರಾಷ್ಟ್ರದಲ್ಲಿ (Maharashtra) ಮರಾಠಾ ಮೀಸಲಾತಿಗಾಗಿ ಪ್ರತಿಭಟನೆ ವಿಕೋಪಕ್ಕೆ ತೆರಳಿ, ಕರ್ನಾಟಕದ ಬಸ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ಬಸ್ ಸುಟ್ಟಿರುವ ಕುರಿತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಹೀಗಾಗಿ ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿಗೆ ಈ ಕುರಿತು ಪತ್ರ ಬರೆಯಲು ನಮ್ಮ ಮುಖ್ಯ ಕಾರ್ಯದರ್ಶಿಗೆ ಹೇಳಿದ್ದೇವೆ ಎಂದು ಹೇಳಿದ್ದಾರೆ.
ನಮ್ಮ ಮುಖ್ಯ ಕಾರ್ಯದರ್ಶಿಗೆ ಈ ಕುರಿತು ಪತ್ರ ಬರೆಯಲು ಹೇಳಿದ್ದೇವೆ. ಅವರು ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿಗೆ ಈ ಬಗ್ಗೆ ಪತ್ರ ಬರೆಯಲಿದ್ದಾರೆ. ಯಾರು ಬಸ್ ಸುಟ್ಟಿದ್ದಾರೆ ಅವರ ವಿರುದ್ಧ ಕ್ರಮಕ್ಕೆ ಹೇಳಿದ್ದೇನೆ. ಅವರ ಬಸ್ ಕೂಡ ನಮ್ಮ ರಾಜ್ಯದೊಳಗೆ ಬರುವುದಿಲ್ಲವಾ? ಎಂದು ಪ್ರಶ್ನಿಸಿ ಗುಡುಗಿದ್ದಾರೆ.







