ರಾಜ್ಯಕ್ಕೆ ಏಳು ಮತ್ತು ಎಂಟನೇ ಹಂತದಲ್ಲಿ 240 ಟನ್ ಆಕ್ಸಿಜನ್ ಕಳುಹಿಸಿಕೊಟ್ಟ ಕೇಂದ್ರ
ಬೆಂಗಳೂರು: ಇಂದು ಏಳು ಮತ್ತು ಎಂಟನೇ ಹಂತದಲ್ಲಿ 240 ಟನ್ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ.7 ನೇ ಹಂತದಲ್ಲಿ ಆರು ಕಂಟೈನರ್ಗಳನ್ನ ಹೊತ್ತು ತಂದಿದ್ದ ರೈಲು ನಿನ್ನೆ ರಾತ್ರಿ ಬೆಂಗಳೂರಿಗೆ ತಲುಪಿತ್ತು. 8ನೇ ರೈಲು ಇಂದು ಬೆಳಗ್ಗೆ 11 ಗಂಟೆಗೆ ಕಂಟೈನರ್ಗಳಲ್ಲಿ 120 ಟನ್ ಆಕ್ಸಿಜನ್ ಹೊತ್ತು ಬೆಂಗಳೂರಿಗೆ ಬಂದಿದೆ
ದೇಶ ಹಾಗೂ ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಅನೇಕ ಮಕ್ಕಳು ತಂದೆ ತಾಯಿಯನ್ನ ಕಳೆದುಕೊಂಡು ಅನಾಥರಾಗಿದ್ರೆ , ಇನ್ನೂ ಹಲವರು ಕುಟುಂಬಸ್ಥರು , ಆಪ್ತರು , ಸ್ನೇಹಿತರನ್ನ ಕಳೆದುಕೊಂಡಿದ್ದಾರೆ.. ಮತ್ತು ಹಲವು ಕುಟುಂಬಗಳ ಆಧಾರಸ್ಥಂಬವೆನಿಸಿಕೊಂಡಿದ್ದರು ಕೊರೊನಾಗೆ ಬಲಿಯಾಗಿದ್ದು, ಕುಟುಂಬಗಳು ದಿಚ್ಚು ತೋಚದ ಪರಿಸ್ಥಿತಿಗೆ ತಲುಪಿವೆ.. ಸಿನಿಮಾ ತಾರೆಯರು ಮೃತಪಟ್ಟಿದ್ದಾರೆ. ಸೆಲೆಬ್ರಿಟಿಗಳು ಸಹ ತಮ್ಮವರನ್ನ ಕಳೆದುಕೊಂಡಿದ್ದಾರೆ.. ಇನ್ನೂ ವಿಪರ್ಯಾಸವೆಂದ್ರೆ ಮದುವೆಗೆ ಇನ್ನು ಒಂದೆರೆಡು ದಿನಗಳಿರುವಾಗಲೇ ವರ ಅಥವ ವಧು ಮೃತಪಟ್ಟಿರುವ ಘಟನೆಗಳು , ಮದುವೆಯಾದ ವಾರ -10 ದಿನಗಳೊಳಗೇ ಗಂಡ ಅಥವ ಹೆಂಡತಿ ಸಾವನಪ್ಪಿರುವುದು ಇಂತಹ ಮನಕಲುಕುವಂತಹ ಘಟನೆಗಳು ಬೆಳಕಿಗೆ ಬರುತ್ತಿವೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








