ನಿಂತೇ ಹೋಯ್ತು ‘ಪ್ರಾಣ’ ವಾಯು : ಬೆಳಗಾವಿಯಲ್ಲಿ Belgaum ಆಕ್ಸಿಜನ್ ದುರಂತ
ಬೆಳಗಾವಿ : ರಾಜ್ಯದಲ್ಲಿ ಆಕ್ಸಿಜನ್ ಇಲ್ಲದೆ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.
ಆಕ್ಸಿಜನ್ ಇಲ್ಲದೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟ ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಆಕ್ಸಿಜನ್ ದುರಂತ ಸಂಭವಿಸಿದೆ.
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ರೋಗಿಗಳು ಆಕ್ಸಿಜನ್ ಕೊರತೆಯಿಂದ ನರಳಾಡಿ ಕೊನೆಯುಸಿರೆಳೆದಿದ್ದಾರೆ.
ಜಿಲ್ಲಾಸ್ಪತ್ರೆಗೆ ದಾಖಲಾಗಿ ಕೇವಲ 3 ಗಂಟೆಯಲ್ಲಿ ನಾಲ್ವರು ಸೋಂಕಿತರು ಕೊನೆಯುಸಿರೆಳೆದಿದ್ದು, ಇದಕ್ಕೆ ಆಕ್ಸಿಜನ್ ಕೊರತೆಯೇ ಕಾರಣ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೆ ಆಕ್ಸಿಜನ್ ಕೊರತೆ ಉಂಟಾಗಿದ್ದು, ಸಮಸ್ಯೆ ಬಗೆಹರಿಸಲು ಹರಸಾಹಸ ಪಡುತ್ತಿದೆ.