ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಮಯೋಚಿತ ಕ್ರಮಗಳಿಂದ ಆಕ್ಸಿಜನ್‌ ಕೊರತೆ ನಿವಾರಣೆ : ಸಚಿವ ಸುಧಾಕರ್‌

admin by admin
May 25, 2021
in Newsbeat, State, ರಾಜ್ಯ
dr sudhakar, basavaraj bommai saakshatv
Share on FacebookShare on TwitterShare on WhatsappShare on Telegram

ಸಮಯೋಚಿತ ಕ್ರಮಗಳಿಂದ ಆಕ್ಸಿಜನ್‌ ಕೊರತೆ ನಿವಾರಣೆ : ಸಚಿವ ಸುಧಾಕರ್‌

ಅನೇಕ ದಿನಗಳಿಂದ ನನೆಗುದಿಗೆ ಬಿದ್ದಿದ್ದ ಪದನಾಮ ಬೇಡಿಕೆಗೆ ಅಸ್ತು

Related posts

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

August 8, 2026
ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

August 8, 2026

dr sudhakar, basavaraj bommai saakshatvಬೆಂಗಳೂರು : ಆಕ್ಸಿಜನ್‌ ಸರಬರಾಜಿನಲ್ಲಿ ತಾಂತ್ರಿಕ ದೋಷದಿಂದ ಉಂಟಾಗಿದ್ದ ಕೊರತೆಯನ್ನು ಸಮರ್ಥವಾಗಿ ನಿಭಾಯಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

ಸೋಮವಾರ ಮತ್ತು ಮಂಗಳವಾರ ಎರಡು ದಿನಗಳಿಗೆ ಸೀಮಿತವಾದಂತೆ ರಾಜ್ಯಕ್ಕೆ ಸಿಗಬೇಕಿದ್ದ ಒಟ್ಟು ಆಕ್ಸಿಜನ್‌ ಪ್ರಮಾಣದಲ್ಲಿ ೨೮೬.೬೪ ಮೆಟ್ರಿಕ್‌ ಟನ್‌ನಷ್ಟು ಕೊರತೆ ಎದುರಾಗಿತ್ತು. ಉತ್ಪಾದನಾ ಘಟಕಗಳಲ್ಲಿ ತಲೆದೂರಿದ್ದ ತಾಂತ್ರಿಕ ದೋಷಗಳಿಂದ ಈ ಸಮಸ್ಯೆ ಉಂಟಾಗಿತ್ತು. ಆದರೆ ಸಮಯೋಚಿತ ಕ್ರಮಗಳಿಂದ ಪರಿಸ್ಥಿತಿಯನ್ನು ನಿಭಾಯಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಬೆಳವಣಿಗೆಯಿಂದ ಕೋವಿಡ್‌ ರೋಗಿಗಳ ಚಿಕಿತ್ಸೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಲಾಗಿದೆ. ರಾಜ್ಯದ ಎಲ್ಲೆಡೆ ಎಲ್ಲಿಯೂ ಕೊರತೆ ಕಾಣಿಸಿಕೊಳ್ಳದಂತೆ ಪರಿಸ್ಥಿತಿಯನ್ನು ನಿಭಾಯಿಸಲಾಗಿದೆ. ಲಭ್ಯವಿದ್ದ ಆಕ್ಸಿಜನ್‌ ಅನ್ನು ನ್ಯಾಯಸಮ್ಮತ ರೀತಿಯಲ್ಲಿ ಬಳಕೆ ಮಾಡಿಕೊಳ್ಳಲಾಯಿತು. ಈ ಸಂಬಂಧ ಎಲ್ಲಾ ಜಿಲ್ಲಾಡಳಿತಗಳಿಗೆ ಮಾರ್ಗಸೂಚಿ ನೀಡಲಾಗಿದೆ. ಜತೆಗೆ ಹೆಚ್ಚುವರಿ ದಾಸ್ತಾನನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿದ್ದರಿಂದ ಇದು ಸಾಧ್ಯವಾಯಿತು ಎಂದಿದ್ದಾರೆ.

ಮರು ಹೊಂದಾಣಿಕೆ

ಕೇಂದ್ರದ “ಆಕ್ಸಿಜನ್‌ ಎಕ್ಸ್‌ಪ್ರೆಸ್‌ ರೈಲುʼ ಸೋಮವಾರ ನಗರಕ್ಕೆ ಆಗಮಿಸಿತು. ಅದರಿಂದ ೧೩೦ ಮೆಟ್ರಿಕ್‌ ಟನ್‌ ಆಕ್ಸಿಜನ್‌ ಲಭ್ಯವಾಯಿತು. ಬೆಂಗಳೂರಿನಲ್ಲಿ ಹೆಚ್ಚುವರಿಯಾಗಿ ೧೨೦ ಮೆಟ್ರಿಕ್‌ ಟನ್‌ ದಾಸ್ತಾನು ಇತ್ತು. ಉಳಿದಂತೆ ಜಿಲ್ಲೆಗಳಲ್ಲಿ ೧೦೦ ಮೆಟ್ರಿಕ್‌ ಟನ್‌ ದಾಸ್ತಾನು ಇತ್ತು. ಇದನ್ನು ಬೇಡಿಕೆಗೆ ಅನುಗುಣವಾಗಿ ಮರು ಹೊಂದಾಣಿಕೆ ಮಾಡಿ ತಲುಪಿಸುವ ಕೆಲಸ ಮಾಡಲಾಯಿತು. ಹೀಗಾಗಿ ರಾಜ್ಯಾದ್ಯಂತ ಎಲ್ಲಿಯೂ ಆಕ್ಸಿಜನ್‌ ಕೊರತೆ ಎದುರಾಗದಂತೆ ನೋಡಿಕೊಳ್ಳಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಬಳ್ಳಾರಿಯ ಉತ್ಪಾದನಾ ಘಟಕಗಳಲ್ಲಿ ತಲೆದೂರಿದ್ದ ತಾಂತ್ರಿಕ ದೋಷ ಎರಡು ದಿನ ಮಾತ್ರ ಎಂದು ಆಡಳಿತ ಮಂಡಳಿಗಳು ತಿಳಿಸಿವೆ.
ಮಂಗಳವಾರ ಸಂಜೆ ವೇಳೆಗೆ ಪರಿಸ್ಥಿತಿ ಸುಧಾರಣೆ ಆಗುವ ನಿರೀಕ್ಷೆಯಿದೆ. ಹೀಗಾಗಿ ಬುಧವಾರದಿಂದ ಆಕ್ಸಿಜನ್‌ ಸರಬರಾಜಿನಲ್ಲಿ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಈ ಮಧ್ಯೆ ರಾಜ್ಯಕ್ಕೆ ನಿಗದಿಪಡಿಸಿದ್ದ ೧೦೧೫ ಮೆಟ್ರಿಕ್‌ ಟನ್‌ ಆಕ್ಸಿಜನ್‌ ಪ್ರಮಾಣವನ್ನು ಕೇಂದ್ರವು ೧೨೦೦ ಮೆಟ್ರಿಕ್‌ ಟನ್‌ಗಳಿಗೆ ಹೆಚ್ಚಿಸಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಸಚಿವ ಸಂಪುಟ ಸಹೋದ್ಯೋಗಿಗಳು ಕೇಂದ್ರದ ಸಚಿವರ ಜತೆ ನಿರಂತರ ಸಂಪರ್ಕ ಇಟ್ಟುಕೊಂಡು ರಾಜ್ಯದ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಈ ಹೆಚ್ಚಳ ಮಾಡಲಾಗಿದೆ. ಜತೆಗೆ ನೆರೆಯ ಮಹಾರಾಷ್ಟ್ರದಿಂದಲೇ ನಮಗೆ ಅಲಾಟ್‌ ಮಾಡಿರುವುದರಿಂದ ಸರಬರಾಜಿಗೂ ಹೆಚ್ಚು ಅನುಕೂಲ ಆಗಲಿದೆ ಎಂದು ಸಚಿವ ಸುಧಾಕರ್‌ ತಿಳಿಸಿದ್ದಾರೆ.

dr sudhakar, basavaraj bommai saakshatvಪದನಾಮ ಆದೇಶ

ಕಳೆದ ಆರು ತಿಂಗಳಿಂದ ಸಚಿವಾಲಯದಲ್ಲಿ ನನೆಗುದಿಗೆ ಬಿದ್ದಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿಗಳ ಪದನಾಮ ಬದಲಾವಣೆ ಕಡತವನ್ನು ವಿಲೇವಾರಿ ಮಾಡಲಾಗಿದೆ. ಹೀಗಾಗಿ ಅನೇಕ ದಿನಗಳಿಂದ ಬಾಕಿ ಉಳಿದಿದ್ದ ಸಿಬ್ಬಂದಿ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದೂ ಸಚಿವರು ತಿಳಿಸಿದ್ದಾರೆ.

ಈ ನಿರ್ಧಾರದಿಂದ ಎಂಟು ಹುದ್ದೆಗಳ ಪದನಾಮವನ್ನು ಮರು ನಾಮಕರಣ ಮಾಡಲಾಗಿದೆ. ನೌಕರರ ಸಂಘದಿಂದ ಪದನಾಮ ಬದಲಾವಣೆಗೆ ಎರಡು , ಮೂರು ಸಲ ಮನವಿ ಸಲ್ಲಿಸಲಾಗಿತ್ತು. ಇತ್ತೀಚೆಗೆ ಪದಾಧಿಕಾರಿಗಳ ನಿಯೋಗ ತಮ್ಮನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಇನ್ನು ಮುಂದೆ ಕಿರಿಯ ಆರೋಗ್ಯ ಸಹಾಯಕರಿಗೆ (ಪುರುಷ) – ಆರೋಗ್ಯ ನಿರೀಕ್ಷಣಾಧಿಕಾರಿ ಎಂದು, ಹಿರಿಯ ಆರೋಗ್ಯ ಸಹಾಯಕರಿಗೆ (ಪುರುಷ) – ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂದು, ಆರೋಗ್ಯ ಮೇಲ್ವಿಚಾರಕರಿಗೆ – ಆರೋಗ್ಯ ಮೇಲ್ವಿಚಾರಣಾಧಿಕಾರಿ ಎಂದು, ಆರೋಗ್ಯ ಮೇಲ್ವಿಚಾರಕರನ್ನು (ಪತ್ರಾಂಕಿತ) – ಮುಖ್ಯ ಆರೋಗ್ಯ ಮೇಲ್ವಿಚಾರಣಾಧಿಕಾರಿ ಎಂದು, ಕಿರಿಯ ಆರೋಗ್ಯ ಸಹಾಯಕಿಗೆ (ಮಹಿಳೆ) – ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಎಂದೂ, ಹಿರಿಯ ಆರೋಗ್ಯ ಸಹಾಯಕಿಗೆ (ಮಹಿಳೆ) – ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಎಂದು ಜಿಲ್ಲಾ ಶುಶ್ರೂಷಣಾಧಿಕಾರಿ ಅವರನ್ನು – ಜಿಲ್ಲಾ ಶುಶ್ರೂಷಣಾಧಿಕಾರಿ ಎಂದು, ರೇಡಿಯಾಲಜಿಕಲ್‌ ಟೆಕ್ನಾಲಜಿಸ್ಟ್‌ ಹುದ್ದೆಗೆ – ಕಿರಿಯ/ಹಿರಿಯ ವಿಕಿರಣ ಚಿತ್ರಣ ಅಧಿಕಾರಿ ಎಂದು ಮರು ನಾಮಕರಣ ಮಾಡಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

ಭತ್ಯೆ ಕುರಿತು ಸಿಎಂ ಜತೆ ಚರ್ಚೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕೋವಿಡ್‌ ಕರ್ತವ್ಯದಲ್ಲಿರುವ ಪ್ಯಾರಾ ಮೆಡಿಕಲ್‌ ಸಿಬ್ಬಂದಿಗಳಾದ ಶುಶ್ರೂಷಕರು, ಪ್ರಯೋಗಶಾಲೆ ತಂತ್ರಜ್ಞರು, ರೇಡಿಯಾಲಜಿ ಟೆಕ್ನಾಲಜಿಸ್ಟ್ಸ್‌, ಆರೋಗ್ಯ ಸಹಾಯಕರು, ಫಾರ್ಮಾಸಿಸ್ಟ್ಸ್‌, ವಾಹನ ಚಾಲಕರು ಮತ್ತು ಗ್ರೂಪ್‌ ಡಿ ನೌಕರರು ಕೂಡ ವಿಶೇಷ ಭತ್ಯೆ ಯೋಜನೆಯನ್ನು ತಮಗೂ ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಅವರ ಜತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಸುಧಾಕರ್‌ ಅವರು ತಿಳಿಸಿದ್ದಾರೆ.

Tags: #cmbsy#home minister basavaraj bommai#saakshatvcovid karnatakaCovid19covidindiaDr. SudhakarkarnatakaMinister R. Ashok
ShareTweetSendShare
Join us on:

Related Posts

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ

by Shwetha
August 8, 2026
0

ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

ಭಾರತ ಹಿಂದೂ ರಾಷ್ಟ್ರವಾದರೆ ಶೋಷಿತರಿಗೆ ಅಪಾಯ ಎಂದ ಯತೀಂದ್ರ ಸಿದ್ದರಾಮಯ್ಯ: ಡೋಂಗಿ ಜಾತ್ಯಾತೀತರಿಂದ ನಮಗೆ ಪಾಠ ಬೇಡವೆಂದು ಗುಡುಗಿದ ಆರ್ ಅಶೋಕ್

by Shwetha
August 8, 2026
0

ಭಾರತವು ಹಿಂದೂ ರಾಷ್ಟ್ರವಾಗಬಾರದು ಎಂಬ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಹಾಗೂ ತೀವ್ರ ವಾಕ್ಸಮರಕ್ಕೆ...

ಸಂಪುಟ ವಿಸ್ತರಣೆಯ ಅಸಮಾಧಾನ ಶೀಘ್ರವೇ ಶಮನವಾಗಲಿದೆ: ಲಕ್ಷ್ಮಣ್ ಸವದಿ

ಸಂಪುಟ ವಿಸ್ತರಣೆಯ ಅಸಮಾಧಾನ ಶೀಘ್ರವೇ ಶಮನವಾಗಲಿದೆ: ಲಕ್ಷ್ಮಣ್ ಸವದಿ

by Shwetha
August 8, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ವ್ಯಕ್ತವಾಗಿರುವ ಅಸಮಾಧಾನ ಮುಂದಿನ 4–5 ದಿನಗಳಲ್ಲಿ ಶಮನವಾಗಲಿದೆ ಎಂದು ಸಚಿವ ಲಕ್ಷ್ಮಣ್ ಸವದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿರಸಿಯಲ್ಲಿ ಮಾತನಾಡಿದ ಅವರು,...

ಯುಪಿಐ ವಹಿವಾಟು ಇನ್ಮುಂದೆ ಫ್ರೀ ಅಲ್ವಾ ಕಾಂಗ್ರೆಸ್ ಆರೋಪಕ್ಕೆ ಮೋದಿ ಸರ್ಕಾರದ ಖಡಕ್ ಉತ್ತರ

ಯುಪಿಐ ವಹಿವಾಟು ಇನ್ಮುಂದೆ ಫ್ರೀ ಅಲ್ವಾ ಕಾಂಗ್ರೆಸ್ ಆರೋಪಕ್ಕೆ ಮೋದಿ ಸರ್ಕಾರದ ಖಡಕ್ ಉತ್ತರ

by Shwetha
August 8, 2026
0

ನವದೆಹಲಿ: ದೇಶದ ಜನಪ್ರಿಯ ಡಿಜಿಟಲ್ ಪಾವತಿ ವ್ಯವಸ್ಥೆಯಾದ ಯುಪಿಐ ಬಳಕೆದಾರರಲ್ಲಿ ಮನೆ ಮಾಡಿದ್ದ ಶುಲ್ಕದ ಆತಂಕಕ್ಕೆ ಕೇಂದ್ರ ಸರ್ಕಾರ ತೆರೆ ಎಳೆದಿದೆ. ಯುಪಿಐ ವಹಿವಾಟಿನ ಮೇಲೆ ಮರ್ಚೆಂಟ್...

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

by Shwetha
August 8, 2026
0

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಸಭಾಪತಿ ಸ್ಥಾನದಲ್ಲಿ ಮುಂದುವರಿಯಲು ನಡೆಸಿದ ಕೊನೆಯ ಹಂತದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram