`ಪ್ರತಿಭಟನೆಗಳಿಂದ ಸಾಧಿಸಲಾಗದ್ದನ್ನು ಚುನಾವಣಾ ಭಯದಿಂದ ಸಾಧಿಸಬಹುದು’
ನವದೆಹಲಿ : 355 ದಿನಗಳ ರೈತರ ಹೋರಾಟಕ್ಕೆ ಫಲ ಸಿಕ್ಕಿದೆ. ರೈತರ ನಿರಂತರ ಹೋರಾಟಕ್ಕೆ ಮಣಿದು ಕೇಂದ್ರ ಸರ್ಕಾರ ವಿವಾಧಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಂಡಿದೆ.
ಇಂದು ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕೃಷಿ ಸಂಬಂಧಿ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ತಿಳಿಸಿದರು..
ಇದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಪ್ರತಿಕ್ರಿಯೆ ನೀಡಿದ್ದು, ಪ್ರಜಾಸತ್ತಾತ್ಮಕ ಪ್ರತಿಭಟನೆಗಳಿಂದ ಏನನ್ನು ಸಾಧಿಸಲಾಗದೋ ಅದನ್ನು ಮುಂಬರುವ ಚುನಾವಣೆಯ ಭಯದಿಂದ ಸಾಧಿಸಬಹುದು” ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಚಿದಂಬರಂ, ಮುಂಬರಲಿರುವ ಚುನಾವಣೆಯ ಭಯದಿಂದ ಪ್ರಧಾನಿ ನರೇಂದ್ರ ಮೋದಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಪ್ರಜಾಸತ್ತಾತ್ಮಕ ಪ್ರತಿಭಟನೆಗಳಿಂದ ಏನನ್ನು ಸಾಧಿಸಲಾಗದೋ ಅದನ್ನು ಮುಂಬರುವ ಚುನಾವಣೆಯ ಭಯದಿಂದ ಸಾಧಿಸಬಹುದು.
ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಕುರಿತು ಪ್ರಧಾನ ಮಂತ್ರಿಯವರ ಘೋಷಣೆಯು ಯಾವುದೇ ನೀತಿಯ ಬದಲಾವಣೆ ಅಥವಾ ಹೃದಯದ ಬದಲಾವಣೆಯಿಂದ ಪ್ರೇರಿತವಾಗಿಲ್ಲ. ಇದು ಚುನಾವಣೆಯ ಭಯದಿಂದ ಪ್ರಚೋದಿಸಲ್ಪಟ್ಟಿದೆ ಎಂದು ಕುಟುಕಿದ್ದಾರೆ.