ADVERTISEMENT
Saturday, January 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಪದ್ಮಭೂಷಣ, ಹಿರಿಯ ಸಾಹಿತಿ ಡಾ. ಎಸ್‌.ಎಲ್‌ ಭೈರಪ್ಪ ನಿಧನ

ಪದ್ಮಭೂಷಣ, ಹಿರಿಯ ಸಾಹಿತಿ ಡಾ. ಎಸ್‌.ಎಲ್‌ ಭೈರಪ್ಪ ನಿಧನ

Saaksha Editor by Saaksha Editor
September 24, 2025
in State, ರಾಜ್ಯ
Padma Bhushan awardee, writer Dr. S.L. Bhyrappa passed away

ಡಾ. ಎಸ್.ಎಲ್. ಭೈರಪ್ಪ

Share on FacebookShare on TwitterShare on WhatsappShare on Telegram

ಬೆಂಗಳೂರು, ಸೆಪ್ಟೆಂಬರ್ 24: ಪದ್ಮಭೂಷಣ, ಸರಸ್ವತಿ ಸಮ್ಮಾನ್‌ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ (SL Bhyrappa) (94) ಅವರು ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಬುಧವಾರ ಮಧ್ಯಾಹ್ನ 2.38ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಎಸ್‌. ಎಲ್‌ ಭೈರಪ್ಪ ಅವರು ವಯೋಸಹಜ ಕಾಯಿಲೆ ಬಳಲುತ್ತಿದ್ದರು.

Related posts

Reliance Jio empowers schools in Karnataka with future AI training

ಕರ್ನಾಟಕದ ಶಾಲೆಗಳಿಗೆ ರಿಲಯನ್ಸ್ ಜಿಯೋದಿಂದ ಭವಿಷ್ಯದ ಎಐ ತರಬೇತಿ ಸಬಲೀಕರಣ

January 30, 2026
Do you have a 'time table': The scientific world of 'time' in Jayanagar!

ನಿಮಗಿದೋ ‘ಟೈಂ ಟೇಬಲ್‌’: ಜಯನಗರದಲ್ಲಿ ‘ಕಾಲ’ದ ವಿಜ್ಞಾನ ಲೋಕ!

January 28, 2026

ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು,

ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ನಿವಾಸದಲ್ಲಿದ್ದ ಅವರನ್ನು 6 ತಿಂಗಳ ಹಿಂದೆ ಅನಾರೋಗ್ಯ ಕಾರಣ ಬೆಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅವರಿಗೆ ಪತ್ನಿ ಸರಸ್ವತಿ, ಪುತ್ರರಾದ ರವಿಶಂಕ‌ರ್ ಹಾಗೂ ಉದಯಶಂಕರ್ ಇದ್ದಾರೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಸಂತೇಶಿವರ ಗ್ರಾಮದಲ್ಲಿ 1934 ಆಗಸ್ಟ್ 20ರಂದು ಲಿಂಗಣ್ಣಯ್ಯ-ಗೌರಮ್ಮ ದಂಪತಿಯ ಪುತ್ರರಾಗಿ ಜನಿಸಿದ ಅವರು, ಬಾಗೂರು, ನುಗ್ಗೇಹಳ್ಳಿ ಶಾಲೆಗಳಲ್ಲಿ ಪ್ರಾಥಮಿಕ, ಮೈಸೂರಿನ ಶಾರದಾವಿಲಾಸದಲ್ಲಿ ಪ್ರೌಢಶಾಲಾ ಶಿಕ್ಷಣ ಪಡೆದರು. ಮಹಾರಾಜ ಕಾಲೇಜಿನಲ್ಲಿ ಬಿ.ಎ ಹಾಗೂ ಮೈಸೂರು ವಿಶ್ವವಿದ್ಯಾಲಯದಲ್ಲಿ 2 ಚಿನ್ನದ ಪದಕಗಳೊಂದಿಗೆ ಎಂ.ಎ ತತ್ವಶಾಸ್ತ್ರದಲ್ಲಿ ಪದವಿ ಪಡೆದಿದ್ದರು.

ಬರೋಡದ ಸಯ್ಯಾಜಿರಾವ್ ವಿಶ್ವವಿದ್ಯಾಲಯದಲ್ಲಿ ‘ಸತ್ಯ ಮತ್ತು ಸೌಂದರ್ಯ’ ಪ್ರಬಂಧಕ್ಕೆ ಪಿ.ಎಚ್‌ಡಿ ಪದವಿ ಪಡೆದ ನಂತರ ಅವರು, ಹುಬ್ಬಳ್ಳಿಯ ಕಾಡಸಿದ್ದೇಶ್ವರ ಕಾಲೇಜು, ಗುಜರಾತ್‌ನ ಸರ್ದಾರ್ ವಲ್ಲಭಬಾಯಿ ಪಟೇಲ್ ವಿಶ್ವವಿದ್ಯಾಲಯದಲ್ಲಿ ತತ್ವಶಾಸ್ತ್ರದ ಪ್ರಾಧ್ಯಾಪಕರಾಗಿದ್ದರು.

ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ (ಎನ್‌ ಸಿಇಆರ್‌ಟಿ) 1967-71ರವರೆಗೆ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, ಮೈಸೂರಿಗೆ ಪ್ರಾದೇಶಿಕ ಶಿಕ್ಷಣ ಕಾಲೇಜಿಗೆ ವರ್ಗವಾದ ಅವರು, ತತ್ವಶಾಸ್ತ್ರ ಮತ್ತು ಶಿಕ್ಷಣ ವಿಜ್ಞಾನದ ಪ್ರಾಧ್ಯಾಪಕರಾಗಿ 1991ರಲ್ಲಿ ನಿವೃತ್ತರಾದರು.

ಅಂತ್ಯಕ್ರಿಯೆ

ಎಸ್ ಭೈರಪ್ಪ ಅವರ ಅಂತ್ಯಕ್ರಿಯೆ ಶುಕ್ರವಾರ ಅಂದರೆ ಸೆಪ್ಟೆ.ಬರ್ 26ರಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಲಿದೆ. ಭೈರಪ್ಪ ಅವರ ಪಾರ್ತೀವ ಶರೀರವನ್ನು ಕೋಲ್ಡ್ ಸ್ಟೋರೇಜ್ ನಲ್ಲಿ ಇರಿಸಲಾಗಿದ್ದು.

ಸಾರ್ವಜನಿಕ ದರ್ಶನ

ನಾಳೆ (ಸೆಪ್ಟೆಂಬರ್ 25) ಬೆಳಗ್ಗೆ 8ಗಂಟೆಗೆ ವರೆಗೂ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇಲ್ಲ. ಎಂಟು ಗಂಟೆ ನಂತರ ಆಸ್ಪತ್ರೆಯಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ತೀವ ಶರೀರವನ್ನು ಶಿಫ್ಟ್ ಮಾಡಿ ಸಾರ್ವಜನಿಕರ ಅಂತಿಮ ದರ್ಶನನ ವ್ಯವಸ್ಥೆ ಮಾಡಲಾಗುತ್ತದೆ.

ನಾಳೆ (ಸೆಪ್ಟೆಂಬರ್ 25) ಮಧ್ಯಾಹ್ನದ ನಂತರ ಎಸ್ ಎಲ್ ಭೈರಪ್ಪ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ಕೊಂಡೊಯ್ದು ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತೆ. ಬಳಿಕ ಶುಕ್ರವಾರ ಮಧ್ಯಾಹ್ನ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: 2025and Daatuand September 24as well as his famous works like ParvaBhyrappa’s famous novels ParvaKannada literary legend passes awayKannada novelist diesKannada novelist S.L. Bhyrappa obituaryPadma Bhushan awardee deathPadma Bhushan awardee S.L. Bhyrappa deathPadma Bhushan Kannada writer diesRashtrotthana HospitalRemembering SL BhyrappaS.L. Bhyrappa deathS.L. Bhyrappa passes awaySanteshivara Lingannaiah Bhyrappa deathsl bhyrappa booksSL Bhyrappa dies at 94SL Bhyrappa legacy and worksVamshavrikshaVamshavrukshaಎಸ್ ಎಲ್ ಭೈರಪ್ಪ ಕೊನೆಯ ದಿನಗಳುಎಸ್ ಎಲ್ ಭೈರಪ್ಪ ಸ್ಮರಣೆಎಸ್.ಎಲ್. ಭೈರಪ್ಪ ನಿಧನಕನ್ನಡ ಸಾಹಿತಿ ಎಸ್ ಎಲ್ ಭೈರಪ್ಪ ವಿಧಿವಶಕನ್ನಡ ಸಾಹಿತ್ಯದ ದಿಗ್ಗಜ ವಿಧಿವಶಡಾ. ಭೈರಪ್ಪ ಬದುಕು ಮತ್ತು ಸಾಧನೆನಾಟಕಕಾರ ಭೈರಪ್ಪ ನಿಧನ ಸುದ್ದಿಪದ್ಮ ಭೂಷಣ ಡಾ. ಎಸ್.ಎಲ್. ಭೈರಪ್ಪ ಇನ್ನಿಲ್ಲಪದ್ಮಭೂಷಣ ಪುರಸ್ಕೃತ ಎಸ್ ಎಲ್ ಭೈರಪ್ಪ ನಿಧನಪ್ರಖ್ಯಾತ ಲೇಖಕ ಭೈರಪ್ಪ ನಿಧನ
ShareTweetSendShare
Join us on:

Related Posts

Reliance Jio empowers schools in Karnataka with future AI training

ಕರ್ನಾಟಕದ ಶಾಲೆಗಳಿಗೆ ರಿಲಯನ್ಸ್ ಜಿಯೋದಿಂದ ಭವಿಷ್ಯದ ಎಐ ತರಬೇತಿ ಸಬಲೀಕರಣ

by admin
January 30, 2026
0

 ಸುಧಾರಿತ ಕೃತಕ ಬುದ್ಧಿಮತ್ತೆಯನ್ನು (ಎಐ- ಆರ್ಟಿಫಿಷಿಯಲ್ ಇಂಟೆಲೆಜೆನ್ಸ್) ಎಲ್ಲರಿಗೂ ಲಭ್ಯ ಆಗುವಂತೆ ಮಾಡುವ ತನ್ನ ಬದ್ಧತೆಯನ್ನು ರಿಲಯನ್ಸ್ ಜಿಯೋ ಮತ್ತಷ್ಟು ಬಲಪಡಿಸುತ್ತಿದೆ. ಈ ಉದ್ದೇಶದ್ದೇ ಭಾಗವಾಗಿ, ಜಿಯೋ ಕರ್ನಾಟಕದಾದ್ಯಂತ ಸಮಗ್ರ ಎಐ ಶಿಕ್ಷಣ ಅಭಿಯಾನ ಪ್ರಾರಂಭಿಸಿದೆ. ಡಿಜಿಟಲ್ ಒಳಗೊಳ್ಳುವಿಕೆ ಬಲಪಡಿಸುವ ಹಾಗೂ ರಾಜ್ಯದ ಶಾಲೆ ಮತ್ತು ಕಾಲೇಜುಗಳ ಜೊತೆಗೆ ಸಂಪರ್ಕವನ್ನು ಸಾಧಿಸಿ, 'ಜಿಯೋ ಎಐ ಕ್ಲಾಸ್‌ರೂಮ್' (Jio AI Classroom) ಉಪಕ್ರಮದ ಮೂಲಕ ಪ್ರಾಯೋಗಿಕ ಎಐ ತರಬೇತಿಯನ್ನು ನೀಡುವ ಗುರಿಯನ್ನು ಈ ಅಭಿಯಾನ ಹೊಂದಿದೆ.  ಭಾರತದಾದ್ಯಂತ ಇರುವ ಶಾಲೆಗಳು ಎಐ ತಂತ್ರಜ್ಞಾನವನ್ನು ತರಗತಿಯ ಕಲಿಕೆಯಲ್ಲಿ ವೇಗವಾಗಿ ಅಳವಡಿಸಿಕೊಳ್ಳುತ್ತಾ ಇವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭವಿಷ್ಯಕ್ಕಾಗಿ ಸಿದ್ಧರಾಗುವ ರೀತಿಯಲ್ಲಿ ಶಿಕ್ಷಣದ ಸ್ವರೂಪದಲ್ಲಿ ಗಮನಾರ್ಹ ಬದಲಾವಣೆಗೆ ಸಾಕ್ಷಿ ಆಗುತ್ತಿದೆ. ಜಿಯೋ ಎಐ ಕ್ಲಾಸ್‌ರೂಮ್ ಮೂಲಕ ಶಿಕ್ಷಣ ಸಂಸ್ಥೆಗಳು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ಎಐ ಕೌಶಲಗಳನ್ನು ಒದಗಿಸುತ್ತಿದ್ದು, ವಿದ್ಯಾರ್ಥಿಗಳಿಗಾಗಿ ನಿಜವಾದ 'ಎಐ-ರೆಡಿ' (AI-Ready) ಶಾಲೆಗಳನ್ನು ಸಜ್ಜುಗೊಳಿಸುತ್ತಿದೆ.  ಈ ಅಭಿಯಾನವು ಆರಂಭಿಕ ಹಂತದಲ್ಲೇ ಭರ್ಜರಿ ಯಶಸ್ಸನ್ನು ಕಂಡಿದ್ದು, ಕರ್ನಾಟಕದಾದ್ಯಂತ 1000ಕ್ಕೂ ಹೆಚ್ಚು ಶಾಲೆಗಳನ್ನು ತಲುಪಿದೆ. ಜಿಯೋದ ಹಿರಿಯ ಕಾರ್ಯನಿರ್ವಾಹಕರು ನಡೆಸಿಕೊಡುತ್ತಿರುವ ಈ ವಿಶೇಷ ತರಬೇತಿ ಅವಧಿಗಳಿಗಾಗಿ 10,000ಕ್ಕೂ ಹೆಚ್ಚು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.  ಯುವಜನತೆಯ ಕೌಶಲ ಅಭಿವೃದ್ಧಿಗೆ ಪೂರಕವಾಗಿ, ಕಂಪನಿಯು ನಾಲ್ಕು ವಾರಗಳ ಉಚಿತ ಆನ್‌ಲೈನ್ ಸರ್ಟಿಫಿಕೇಷನ್ ಕಾರ್ಯಕ್ರಮವಾದ 'ಜಿಯೋ ಎಐ ಕ್ಲಾಸ್‌ರೂಮ್' ಅನ್ನು ಪರಿಚಯಿಸಿದೆ. ಈ ಕಾರ್ಯಕ್ರಮವು ವಿಡಿಯೋ ಉಪನ್ಯಾಸಗಳು, ಪಿಡಿಎಫ್ ಅಧ್ಯಯನ ಸಾಮಗ್ರಿಗಳು, ರೆಫರೆನ್ಸ್ ವಿಡಿಯೊಗಳು ಮತ್ತು ಪ್ರತಿ ಮಾಡ್ಯೂಲ್‌ನ ನಂತರ ಸಂವಾದಾತ್ಮಕ ರಸಪ್ರಶ್ನೆಗಳು ಹಾಗೂ ಅಸೈನ್‌ಮೆಂಟ್‌ಗಳನ್ನು ಒಳಗೊಂಡಿರುವ ನಾಲ್ಕು ಹಂತದ ಸಮಗ್ರ ಪಠ್ಯಕ್ರಮವನ್ನು ನೀಡುತ್ತದೆ.  ಎಲ್ಲ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಭಾಗವಹಿಸುವವರಿಗೆ 'ಕಂಪ್ಲೀಷನ್ ಬ್ಯಾಡ್ಜ್' ನೀಡಲಾಗುತ್ತದೆ. ಜಿಯೋ ಪಿಸಿ (JioPC) ಮೂಲಕ ಈ ಕಾರ್ಯಕ್ರಮವನ್ನು ಪಡೆಯುವ ಕಲಿಯುವವರು ಜಿಯೋ ಇನ್‌ಸ್ಟಿಟ್ಯೂಟ್ ಪ್ರಮಾಣಪತ್ರವನ್ನು ಸಹ ಪಡೆಯಲಿದ್ದಾರೆ. ಇದು ಅವರ ಎಐ ಪರಿಕಲ್ಪನೆಯ ತಿಳಿವಳಿಕೆ ಮತ್ತು ಅಸೈನ್‌ಮೆಂಟ್‌ಗಳ ಮೂಲಕ ಪಡೆದ ಪ್ರಾಯೋಗಿಕ ಜ್ಞಾನವನ್ನು ದೃಢೀಕರಿಸುತ್ತದೆ. ಈ ವ್ಯವಸ್ಥಿತ ಕೋರ್ಸ್ ಅನ್ನು ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಮೂಲಕ ಕಲಿಯುವವರಿಗೆ ತಮ್ಮದೇ ಆದ ವೇಗದಲ್ಲಿ ಕಲಿಯಲು ಮತ್ತು ಎಐ ತಂತ್ರಜ್ಞಾನಗಳ ಪ್ರಾಯೋಗಿಕ ಅನುಭವ ಪಡೆಯಲು ವಿನ್ಯಾಸ ಮಾಡಲಾಗಿದೆ.   ಈ ಡಿಜಿಟಲ್ ಸಬಲೀಕರಣ ಅಭಿವೃದ್ಧಿಯ ಮುಖ್ಯವಾದ ಅಂಶ ಏನೆಂದರೆ, ಯಾವುದೇ ವೆಚ್ಚವಿಲ್ಲದೆ ಬಳಕೆದಾರರಿಗೆ ಪ್ರೀಮಿಯಂ ತಂತ್ರಜ್ಞಾನವನ್ನು ಒದಗಿಸುವುದು. ಜಿಯೋ ತನ್ನ ಅನ್‌ಲಿಮಿಟೆಡ್ 5ಜಿ ಚಂದಾದಾರರಿಗೆ ₹35,100 ಮೌಲ್ಯದ 18 ತಿಂಗಳ 'ಗೂಗಲ್ ಜೆಮಿನಿ ಪ್ರೊ' (Google Gemini Pro) ಪ್ಲಾನ್ ಅನ್ನು ಉಚಿತವಾಗಿ ನೀಡುತ್ತಿದೆ. ಬಳಕೆದಾರರು ಇದನ್ನು ನೇರವಾಗಿ ಮೈಜಿಯೋ (MyJio) ಆಪ್ ಮೂಲಕ ಸಕ್ರಿಯಗೊಳಿಸಬಹುದು. ಇದು ಅತ್ಯಾಧುನಿಕ ಜೆಮಿನಿ 3 ಪ್ರೊ ಮಾಡೆಲ್ ಮತ್ತು ಉನ್ನತ ಮಟ್ಟದ ಸೃಜನಶೀಲ ಸಾಧನಗಳಿಗೆ ಸಂಪರ್ಕವನ್ನು ನೀಡುತ್ತದೆ. ಇದರಲ್ಲಿ ಎಐ-ಚಾಲಿತ ಚಿತ್ರ ರಚನೆಗಾಗಿ 'ನ್ಯಾನೋ ಬನಾನಾ ಪ್ರೊ' (Nano Banana Pro) ಮತ್ತು ಸುಧಾರಿತ ವಿಡಿಯೋ ನಿರ್ಮಾಣಕ್ಕಾಗಿ 'ವಿಯೋ 3.1' (Veo 3.1) ಸೇರಿವೆ. ಈ ಪ್ಲಾನ್ ಶೈಕ್ಷಣಿಕ ಸಂಶೋಧನಾ ಸಾಧನವಾದ 'ನೋಟ್‌ಬುಕ್ ಎಲ್‌ಎಂ'...

Do you have a 'time table': The scientific world of 'time' in Jayanagar!

ನಿಮಗಿದೋ ‘ಟೈಂ ಟೇಬಲ್‌’: ಜಯನಗರದಲ್ಲಿ ‘ಕಾಲ’ದ ವಿಜ್ಞಾನ ಲೋಕ!

by admin
January 28, 2026
0

- ಜಯನಗರದ ಪಾರ್ಸೆಕ್‌ನಲ್ಲಿ 'ಕಾಲ'ದ ಕೌತುಕ - ಪರಮ್ ಫೌಂಡೇಶನ್‌ನಿಂದ ವಿನೂತನ ಕಾರ್ಯಾಗಾರ - ವಾರಾಂತ್ಯದಲ್ಲಿ ನಡೆಯುವ ವಿಶಿಷ್ಟ ಟೈಮ್‌ ಲ್ಯಾಬ್‌ - ಮಕ್ಕಳಿಗಾಗಿ ಸ್ಟಾಪ್‌ವಾಚ್ ತಯಾರಿಸುವ...

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

by Shwetha
January 27, 2026
0

ಉಡುಪಿ: ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀ ಕೃಷ್ಣಮಠದ ಶೀರೂರು ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರು ಕೇಸರಿ ಧ್ವಜವನ್ನು ಪ್ರದರ್ಶಿಸುವ ಮೂಲಕ ಮೆರವಣಿಗೆಗೆ ಚಾಲನೆ...

ಪಕ್ಷವನ್ನು ಮನೆಯಾಸ್ತಿ ಮಾಡಿಕೊಂಡಿದ್ದಕ್ಕೆ ಹೊರಬಂದೆ :ದಳಪತಿಗಳ ಟೀಕೆಗೆ ಶಿವಲಿಂಗೇಗೌಡ ಖಡಕ್ ತಿರುಗೇಟು

ಪಕ್ಷವನ್ನು ಮನೆಯಾಸ್ತಿ ಮಾಡಿಕೊಂಡಿದ್ದಕ್ಕೆ ಹೊರಬಂದೆ :ದಳಪತಿಗಳ ಟೀಕೆಗೆ ಶಿವಲಿಂಗೇಗೌಡ ಖಡಕ್ ತಿರುಗೇಟು

by Shwetha
January 27, 2026
0

ಹಾಸನ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಬಳಿಕ ಇದೇ ಮೊದಲ ಬಾರಿಗೆ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ತಮ್ಮ ಪಕ್ಷಾಂತರದ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಮಂತ್ರಿಯಾಗುವ...

ವಿಷ ಬೇಕಾದರೂ ಕುಡಿಯುವರು, ಅಲ್ಪಸಂಖ್ಯಾತರನ್ನು ಬೆಂಬಲಿಸಲ್ಲ: ಬಿಜೆಪಿ ವಿರುದ್ಧ  ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶ

ವಿಷ ಬೇಕಾದರೂ ಕುಡಿಯುವರು, ಅಲ್ಪಸಂಖ್ಯಾತರನ್ನು ಬೆಂಬಲಿಸಲ್ಲ: ಬಿಜೆಪಿ ವಿರುದ್ಧ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶ

by Shwetha
January 27, 2026
0

ದಾವಣಗೆರೆ: ಬಿಜೆಪಿಯವರು ಯಾವುದೇ ಕಾರಣಕ್ಕೂ ಅಲ್ಪಸಂಖ್ಯಾತರ ಪರ ನಿಲ್ಲುವುದಿಲ್ಲ. ಅವರು ಬೇಕಾದರೆ ವಿಷ ಕುಡಿಯಲು ಸಿದ್ಧರಾಗುತ್ತಾರೆಯೇ ಹೊರತು, ಅಲ್ಪಸಂಖ್ಯಾತರನ್ನು ಬೆಂಬಲಿಸುವುದಿಲ್ಲ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram