ಶ್ರೀನಗರ: ಗಡಿಯಲ್ಲಿ ಪಾಕ್ ನ ಕುತಂತ್ರಕ್ಕೆ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಾಮಗಢ ಸೆಕ್ಟರ್ ನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ನ ಅಪ್ರಚೋದಿತ ದಾಳಿಗೆ ಬಿಎಸ್ ಎಫ್ ಸಿಬ್ಬಂದಿ ಬಲಿಯಾಗಿದ್ದಾರೆ. ಭಾರತೀಯ ಸೇನೆ (Indian Army) ಸಹ ತಕ್ಕ ಪ್ರತ್ಯುತ್ತರ ನೀಡಿದ್ದು, ಶತ್ರು ಸೇನೆಯನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದೆ.
ದಾಳಿಯಲ್ಲಿ ಯೋಧ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪಾಕ್ ನ ಈ ಅಪ್ರಚೋದಿತ ದಾಳಿಗೆ ಕೆಲವು ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಪಾಕಿಸ್ತಾನ ಹಾಗೂ ಭಾರತ 2021 ರ ಫೆ.25 ರಂದು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ್ದವು. ಆದರೆ, ಗಡಿಯಲ್ಲಿ ಪಾಕ್ ತನ್ನ ಕುತುಂತ್ರ ಬುದ್ಧಿಯನ್ನು ಮಾತ್ರ ಬಿಡು್ತಿಲ್ಲ. ಕಳೆದ 24 ದಿನಗಳಲ್ಲಿ ಮೂರು ಬಾರಿ ಪಾಕ್ ಒಪ್ಪಂದ ಉಲ್ಲಂಘಿಸಿದೆ.