ಜಾಧವ್ ಪರ ವಕೀಲರನ್ನು ನೇಮಿಸಲು ಭಾರತಕ್ಕೆ ಅವಕಾಶ ನೀಡುವಂತೆ ಸರ್ಕಾರಕ್ಕೆ ಪಾಕಿಸ್ತಾನದ ಹೈಕೋರ್ಟ್ ಆದೇಶ
ಇಸ್ಲಾಮಾಬಾದ್, ಸೆಪ್ಟೆಂಬರ್04: ಮರಣದಂಡನೆ ಖೈದಿ ಕುಲಭೂಷಣ್ ಜಾಧವ್ ಅವರನ್ನು ಪ್ರತಿನಿಧಿಸಲು ವಕೀಲರನ್ನು ನೇಮಕ ಮಾಡಲು ಭಾರತಕ್ಕೆ ಮತ್ತೊಂದು ಅವಕಾಶ ನೀಡುವಂತೆ ಪಾಕಿಸ್ತಾನದ ಹೈಕೋರ್ಟ್ ಗುರುವಾರ ಫೆಡರಲ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯವು ನೀಡಿದ ಮರಣದಂಡನೆಯ ಪರಿಶೀಲನೆಯನ್ನು ಆಲಿಸಲು ಜಾಧವ್ ಪರ ವಕೀಲರ ನೇಮಕ ಪ್ರಕರಣವನ್ನು ಇಸ್ಲಾಮಾಬಾದ್ ಹೈಕೋರ್ಟ್ (ಐಎಚ್ಸಿ) ಕೈಗೆತ್ತಿಕೊಂಡಿತು. 50 ವರ್ಷದ ನಿವೃತ್ತ ಭಾರತೀಯ ನೌಕಾಪಡೆಯ ಅಧಿಕಾರಿ ಜಾಧವ್ ಅವರಿಗೆ 2017 ರ ಏಪ್ರಿಲ್ನಲ್ಲಿ ಗೂಡಚರ್ಯೆ ಮತ್ತು ಭಯೋತ್ಪಾದನೆ ಆರೋಪದ ಮೇಲೆ ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು.
ಅಂತರರಾಷ್ಟ್ರೀಯ ನ್ಯಾಯಾಲಯದ (ಐಸಿಜೆ) ಆದೇಶಗಳನ್ನು ಪಾಲಿಸಲು ಪಾಕಿಸ್ತಾನವು ಭಾರತಕ್ಕೆ ಕಾನ್ಸುಲರ್ ಪ್ರವೇಶವನ್ನು ನೀಡಿತು, ಆದರೆ, ಆತನ ಪರ ವಕೀಲರನ್ನು ನೇಮಿಸುವ ಪಾಕಿಸ್ತಾನದ ಪ್ರಸ್ತಾಪಕ್ಕೆ ಉತ್ತರಿಸಿಲ್ಲ ಎಂದು ಅಟಾರ್ನಿ ಜನರಲ್ ಖಾಲಿದ್ ಜಾವೇದ್ ಖಾನ್ ನ್ಯಾಯಾಲಯಕ್ಕೆ ತಿಳಿಸಿದ್ದರು.








