ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪಾಕಿಸ್ತಾನವು ಭಯೋತ್ಪಾದನೆಯ ಕೇಂದ್ರ, ಜಗತ್ತಿಗೆ ಅವರ ಪಾಠಗಳ ಅಗತ್ಯವಿಲ್ಲ : ವಿಶ್ವ ಸಂಸ್ಥೆಯಲ್ಲಿ ಭಾರತ

admin by admin
September 27, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಪಾಕಿಸ್ತಾನವು ಭಯೋತ್ಪಾದನೆಯ ಕೇಂದ್ರ, ಜಗತ್ತಿಗೆ ಅವರ ಪಾಠಗಳ ಅಗತ್ಯವಿಲ್ಲ : ವಿಶ್ವ ಸಂಸ್ಥೆಯಲ್ಲಿ ಭಾರತ

ಜಿನೀವಾ, ಸೆಪ್ಟೆಂಬರ್27: ಜಿನೀವಾದಲ್ಲಿ ಶುಕ್ರವಾರ ನಡೆದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 45 ನೇ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಜನಾಂಗೀಯ ಅಲ್ಪಸಂಖ್ಯಾತರಿಗೆ ಸುರಕ್ಷತೆಯನ್ನು ಒದಗಿಸುವಲ್ಲಿ ಪಾಕಿಸ್ತಾನ ದಾಖಲೆ ಕಳಪೆಯಾಗಿದೆ ಎಂದು ಭಾರತ ಟೀಕಿಸಿದೆ. ವಿಶ್ವಸಂಸ್ಥೆಯಲ್ಲಿ ನಡೆದ ಮಾನವ ಹಕ್ಕುಗಳ ಮಂಡಳಿಯ 45 ನೇ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಭಾರತದ ಖಾಯಂ ಮಿಷನ್‌ನ ಮೊದಲ ಕಾರ್ಯದರ್ಶಿ ಸೆಂಥಿಲ್ ಕುಮಾರ್, ಭಯೋತ್ಪಾದನೆಯ ಕೇಂದ್ರಬಿಂದು ಎಂದು ಕರೆಯಲ್ಪಡುವ ದೇಶದಿಂದ ಮಾನವ ಹಕ್ಕುಗಳ ಬಗ್ಗೆ ಜಗತ್ತಿಗೆ ಪಾಠಗಳ ಅಗತ್ಯವಿಲ್ಲ. ಇತರರಿಗೆ ಉಪದೇಶಿಸುವ ಮೊದಲು ಭಯೋತ್ಪಾದನೆ, ಮಾನವ ಹಕ್ಕುಗಳ ದುರುಪಯೋಗ ಮತ್ತು ಅಮಾನವೀಯತೆಯು ಅಪರಾಧ ಎಂದು ಪಾಕಿಸ್ತಾನ ನೆನಪಿಡಬೇಕು. ಭಯೋತ್ಪಾದನೆಯ ಕೇಂದ್ರಬಿಂದುವಾಗಿರುವ ದೇಶದಿಂದ ಮಾನವ ಹಕ್ಕುಗಳ ಬಗ್ಗೆ ಪಾಠಗಳು ಜಗತ್ತಿಗೆ ಅಗತ್ಯವಿಲ್ಲ ಎಂದು ಹೇಳಿದರು.

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026

ಕಡಿಮೆ ದರದಲ್ಲಿ “ಮೇಡ್ ಇನ್ ಇಂಡಿಯಾ” ಕೊರೊನಾ ಕಿಟ್ ಲಭ್ಯ..!

ಪಾಕಿಸ್ತಾನದಲ್ಲಿ ಬಲೂಚ್‌ಗಳು ಅನುಭವಿಸುತ್ತಿರುವ ದೌರ್ಜನ್ಯವನ್ನೂ ಕುಮಾರ್ ಎತ್ತಿ ತೋರಿಸಿದ ಕುಮಾರ್, ಬಲವಂತದ ಕಣ್ಮರೆಗಳು, ಹಿಂಸಾಚಾರ, ಬಲವಂತದ ಸಾಮೂಹಿಕ ಸ್ಥಳಾಂತರಗಳು, ಕಿರುಕುಳ, ಕಾನೂನು ಬಾಹಿರ ಹತ್ಯೆಗಳು, ಸೇನಾ ಕಾರ್ಯಾಚರಣೆಗಳು, ಚಿತ್ರಹಿಂಸೆ, ಕೊಲೆ, ಚಿತ್ರಹಿಂಸೆ ಶಿಬಿರಗಳು, ಬಂಧನ ಕೇಂದ್ರಗಳು, ಮಿಲಿಟರಿ ಶಿಬಿರಗಳು ಬಲೂಚಿಸ್ತಾನದಲ್ಲಿ ನಿಯಮಿತ ಲಕ್ಷಣಗಳಾಗಿವೆ ಎಂದು ಹೇಳಿದರು.

ಇಲ್ಲಿಯವರೆಗೆ 47,000 ಬಲೂಚ್ ಮತ್ತು 35,000 ಪಶ್ತೂನ್ ಗಳು ಕಾಣೆಯಾಗಿದ್ದು, ಅವರು ಎಲ್ಲಿದ್ದಾರೆಂದು ಯಾರಿಗೂ ತಿಳಿದಿಲ್ಲ. ಬಲೂಚಿಸ್ತಾನದೊಳಗೆ ಬಲೂಚ್ ಎಂದಿಗೂ ಸುರಕ್ಷಿತ ಭಾವನೆ ಹೊಂದಿಲ್ಲ ಮತ್ತು ಈಗ ಅವರು ಪಾಕಿಸ್ತಾನದ ಹೊರಗೆ ಸಹ ಸುರಕ್ಷಿತ ಭಾವನೆ ಹೊಂದಿಲ್ಲ. 2018 ರ ಡಿಸೆಂಬರ್‌ನಲ್ಲಿ ರಶೀದ್ ಹುಸೇನ್ ನಾಪತ್ತೆಯಾದ ಪ್ರಕರಣ ಮತ್ತು ಪತ್ರಕರ್ತ ಸಾಜಿದ್ ಹುಸೇನ್ ಬಲೂಚ್ ಮಾರ್ಚ್ 2020 ರಲ್ಲಿ ನಾಪತ್ತೆಯಾದ ನಂತರ ಅವರನ್ನು ಹತ್ಯೆಗೈಯಲಾಯಿತು. ಈ ಪ್ರಕರಣವು ಬಲೂಚ್ ಮಾನವ ಹಕ್ಕುಗಳ ರಕ್ಷಕರನ್ನು ಪಾಕಿಸ್ತಾನವನ್ನು ತೊರೆದ ನಂತರವೂ ಗುರಿಯಾಗಿಸಿ ನಿರ್ಮೂಲನೆ ಮಾಡಲಾಗುತ್ತಿದೆ ಎಂಬುದನ್ನು ನಿರೂಪಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. ‌

ಫೈನಾನ್ಶಿಯರ್ ಕಿಡ್ನಾಪ್ ಪ್ರಕರಣದಲ್ಲಿ ಸುನಾಮಿ ಕಿಟ್ಟಿ..!

1947 ರಲ್ಲಿ 23% ರಷ್ಟಿದ್ದ ಪಾಕಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರ ಜನಸಂಖ್ಯೆಯು ಅತ್ಯಲ್ಪ ಸಂಖ್ಯೆಗೆ ಇಳಿದಿರುವುದು ಬಹಳ ಕಳವಳಕಾರಿ ವಿಷಯವಾಗಿದೆ ಎಂದು ಪ್ರಥಮ ಕಾರ್ಯದರ್ಶಿ ವಿಶ್ವ ಸಂಸ್ಥೆಯ ಗಮನಸೆಳೆದರು.
ಕಾರಣಗಳನ್ನು ಕಂಡುಹಿಡಿಯುವುದು ಕಷ್ಟವೇನಲ್ಲ. ಕೊಲೆಗಳು, ಹಿಂಸಾಚಾರ, ಬಲವಂತದ ಮತಾಂತರಗಳು, ಬಲವಂತದ ಸ್ಥಳಾಂತರದ ಮೂಲಕ ವ್ಯವಸ್ಥಿತ ತಾರತಮ್ಯ ಮತ್ತು ಕಿರುಕುಳವು ಪಾಕಿಸ್ತಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು ಬಹುತೇಕ ನಾಶಪಡಿಸಿದೆ ಎಂದು ಅವರು ಹೇಳಿದರು.

Tags: india pak borderkannada newskannada news updatelatest Kannada newsNamma KarnatakaPak human rightspak terror nationPakistan is the center of terrorismthe world does not need their lessons: India at the World Organization
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram