ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಸಿಸಿಐ ಕೈಯಲ್ಲಿದೆ ಪಾಕಿಸ್ತಾನದ ಕ್ರಿಕೆಟ್ ಭವಿಷ್ಯ..!

Pakistan's Cricket Future Now in BCCI's Hands

Shwetha by Shwetha
May 20, 2025
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಬಿಸಿಸಿಐ ಕೈಯಲ್ಲಿದೆ ಪಾಕಿಸ್ತಾನದ ಕ್ರಿಕೆಟ್ ಭವಿಷ್ಯ..!

ಮಿಲಿಟರಿ, ರಾಜಕೀಯ, ವ್ಯಾಪಾರ, ನೀರು, ವಿದೇಶಾಂಗ ನೀತಿಯಿಂದ ಪಾಕಿಸ್ತಾನದ ಬೆನ್ನಲುಬನ್ನೇ ಮುರಿದಿರುವ ಭಾರತ ಈಗ ಕ್ರಿಕೆಟ್ ಆಟದ ಮೂಲಕವೂ ಬೌನ್ಸರ್..ಗೂಗ್ಲಿ ಎಸೆತಗಳನ್ನು ಎಸೆದಿದೆ.

Related posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026
CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

February 11, 2026

ಪಾಕಿಸ್ತಾನದ ವಿರುದ್ಧ ಧ್ವಿಪಕ್ಷೀಯ ಕ್ರಿಕೆಟ್ ಸರಣಿಯಂತೂ ಕನಸಿನ ಮಾತು. ಇದೀಗ ಬಿಸಿಸಿಐ ಮತ್ತೊಂದು ದಿಟ್ಟ ಹೆಜ್ಜೆಯನ್ನಿಟ್ಟಿದೆ. ಸದ್ಯಕ್ಕೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಟೂರ್ನಿಯಿಂದ ಹೊರಬರುವ ಸೂಚನೆ ನೀಡಿದೆ. ಮುಂದಿದೆ ಮಾರಿ ಹಬ್ಬ ಎಂಬಂತೆ ಮುಂದಿನ ದಿನಗಳಲ್ಲಿ ಐಸಿಸಿ ಟೂರ್ನಿಗಳಲ್ಲೂ ಆಡದಿರುವ ತೀರ್ಮಾನವನ್ನು ಕೈಗೆತ್ತಿಕೊಂಡತ್ತಿದೆ ಬಿಸಿಸಿಐ.

ಈ ಹಿಂದೆ ಜೈ ಶಾಹ ಏಷ್ಯನ್ ಕ್ರಿಕೆಟ್ ಕೌನ್ಸಿಲ್‍ನ ಅಧ್ಯಕ್ಷರಾಗಿದ್ದರು. ಐಸಿಸಿ ಅಧ್ಯಕ್ಷ ಸ್ಥಾನದ ಚುಕ್ಕಾಣಿ ಹಿಡಿದ ನಂತರ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪಟ್ಟ ಶ್ರೀಲಂಕಾದ ಶಮ್ಮಿ ಸಿಲ್ವಾ ಪಾಲಾಗಿತ್ತು. ಇದೀಗ ಪಾಕಿಸ್ತಾನದ ಸಚಿವ ಹಾಗೂ ಪಿಸಿಬಿ ಅಧ್ಯಕ್ಷ ಮೊಶ್ವೀನ್ ನಕ್ವಿ ಅಲಂಕರಿಸಿದ್ದಾರೆ. ಇತ್ತೀಚೆಗೆ ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನದ ಬೆನ್ನುಮೂಳೆ ಮುರಿದಿರುವ ಭಾರತ ಈಗ ಕ್ರಿಕೆಟ್ ಮೂಲಕವೂ ದಿಗ್ಭಂದನ ಹಾಕುವ ಪ್ರಯತ್ನ ನಡೆಸುತ್ತಿದೆ.

ಹೌದು, ಬಿಸಿಸಿಐ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಟೂರ್ನಿಯಲ್ಲಿ ಆಡದಿರುವ ತೀರ್ಮಾನವನ್ನು ಕೈಗೊಂಡಿದೆ. ಸದ್ಯ ಏಷ್ಯನ್ ಕ್ರಿಕೆಟ್ ಕೌನ್ಸಿಲ್‍ನಲ್ಲಿ 27 ದೇಶಗಳಿವೆ. ಅದರಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲದೇಶ, ಅಫಘಾನಿಸ್ತಾನ ದೇಶಗಳು ಮಾತ್ರ ಪೂರ್ಣ ಪ್ರಮಾಣದ ಸದಸ್ಯತ್ವವನ್ನು ಪಡೆದುಕೊಂಡಿವೆ. ಇನ್ನುಳಿದ 22 ರಾಷ್ಟ್ರಗಳು ಸಹ ಸದಸ್ಯತ್ವವನ್ನು ಪಡೆದುಕೊಂಡಿವೆ.

ಸದ್ಯದ ಮಟ್ಟಿಗೆ 27 ರಾಷ್ಟ್ರಗಳಲ್ಲಿ ಪಾಕಿಸ್ತಾನಕ್ಕೆ ಬೆಂಬಲ ಸೂಚಿಸುವ ರಾಷ್ಟ್ರ ಅಂದ್ರೆ ಅದು ಬಾಂಗ್ಲಾದೇಶ ಮಾತ್ರ. ಇನ್ನುಳಿದಂತೆ ವಿಶ್ವ ಕ್ರಿಕೆಟ್‍ನಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು 25 ರಾಷ್ಟ್ರಗಳು ಭಾರತದ ಪರವಾಗಿವೆ. ಒಂದು ವೇಳೆ ಕೊನೆ ಗಳಿಗೆಯಲ್ಲಿ ಬಾಂಗ್ಲಾದೇಶ ಬೆಂಬಲ ನೀಡಿದ್ರೆ ಪಾಕಿಸ್ತಾನ ಏಷ್ಯನ್ ಕ್ರಿಕೆಟ್ ಕೌನ್ಸಿಲ್‍ನಲ್ಲಿ ಏಕಾಂಗಿಯಾಗಲಿದೆ.

ಕಳೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವನ್ನು ಪಾಕ್ ನೆಲದಲ್ಲಿ ಆಡಿಸಲೇಬೇಕು ಎಂದು ಪಣ ತೊಟ್ಟಿದ್ದ ಪಿಸಿಬಿಗೆ ಮುಖಭಂಗವಾಗಿದ್ದು ಗೊತ್ತೆ ಇದೆ. ಕೊನೆಗೂ ಭಾರತ ತಟಸ್ಥ ತಾಣದಲ್ಲಿ ಆಡಿ ಚಾಂಪಿಯನ್ ಪಟ್ಟಕ್ಕೇರಿದ್ದು ಕೂಡ ಗೊತ್ತಿದೆ. ಅಂದ ಮೇಲೆ ವಿಶ್ವ ಕ್ರಿಕೆಟ್‍ನಲ್ಲಿ ಭಾರತ ಹೇಳಿದ್ದೇ ಶಾಸನ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಇದಕ್ಕೆ ಬಲವಾದ ಕಾರಣ ದುಡ್ಡು. ಟೀಮ್ ಇಂಡಿಯಾ ಯಾವುದೇ ರಾಷ್ಟ್ರದ ಜೊತೆ ಆಡಲಿ.. ಅಲ್ಲಿ ಹಣದ ಹೊಳೆ ಹರಿಯುತ್ತದೆ ಎಂಬುದು ಗೊತ್ತಿರುವ ವಿಚಾರವೇ. ಟೀಮ್ ಇಂಡಿಯಾದ ಸರಣಿಗೆ ಸಿಗುವಷ್ಟು ಪ್ರಾಯೋಜಕರು ಬೇರೆ ಯಾವುದೇ ರಾಷ್ಟ್ರದ ಸರಣಿಗೂ ಸಿಗುತ್ತಿಲ್ಲ. ಹೀಗಾಗಿಯೇ ವಿಶ್ವ ಕ್ರಿಕೆಟ್‍ನಲ್ಲಿ ಟೀಮ್ ಇಂಡಿಯಾದ ಸರಣಿಗೆ ಸಿಕ್ಕಾಪಟ್ಟೇ ಡಿಮ್ಯಾಂಡ್. ಆ ಕಾರಣಕ್ಕಾಗಿಯೇ ಐಸಿಸಿ ಕೂಡ ಬಿಸಿಸಿಐನ ನಿರ್ಧಾರಕ್ಕೆ ಯಾವುದೇ ರೀತಿಯಲ್ಲೂ ಅಡ್ಡಿಪಡಿಸುವುದಿಲ್ಲ. ಎಲ್ಲದಕ್ಕೂ ತಲೆದೂಗುತ್ತದೆ. ಜೊತೆಗೆ ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್, ಸದ್ಯದ ಮಟ್ಟಿಗೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಕೂಡ ಸೈಲೆಂಟಾಗಿ ಬಿಸಿಸಿಐಗೆ ಜೈ ಎನ್ನುತ್ತಿದೆ. ಒಟ್ಟಾರೆ, ಬಿಸಿಸಿಐ ಇವತ್ತು ಇಡೀ ಕ್ರಿಕೆಟ್ ಜಗತ್ತನ್ನು ಕೈ ಬೆರಳಿನಲ್ಲಿ ಆಡಿಸುತ್ತಿದೆ.
ಅಂದೊಂದು ಕಾಲವಿತ್ತು. ಸುಮಾರು 42 ವರ್ಷಗಳ ಹಿಂದೆ. ಅದು 1983ರ ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ವೇತನ ನೀಡಲು ಕೂಡ ಬಿಸಿಸಿಐ ಆಕೌಂಟ್‍ನಲ್ಲಿ ದುಡ್ಡು ಇರಲಿಲ್ಲ. ಲತಾ ಮಂಗೇಶ್ಕರ್ ಸಂಗೀತ ಕಚೇರಿ ನಡೆಸಿ ಕಪಿಲ್ ಡೇವಿಲ್ಸ್‍ಗೆ ದುಡ್ಡು ಕೊಟ್ಟಿರುವುದು ಎಂಬುದನ್ನು ಮರೆಯುವ ಹಾಗಿಲ್ಲ. ಹಾಗೇ 1983ರ ವಿಶ್ವಕಪ್ ಫೈನಲ್ ಪಂದ್ಯ ನೋಡಲು ಭಾರತದ ಪ್ರಭಾವಿ ಸಚಿವರಿಗೆ ಎರಡು ಟಿಕೆಟ್ ನೀಡಲು ಕೂಡ ಆಗಿನ ಬಿಸಿಸಿಐ ಅಧ್ಯಕ್ಷ ಎನ್‍ಪಿಕೆ ಸಾಳ್ವೆ ಅವರಿಗೆ ಸಾಧ್ಯವಾಗಲಿಲ್ಲ. ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಬಿಸಿಸಿಐಯನ್ನು ಕೀಳಾಗಿ ನೋಡಿದ್ದನ್ನು ಮರೆಯುವುದಕ್ಕೆ ಸಾಧ್ಯವಿಲ್ಲ. ಇದಕ್ಕೆ ಜಿದ್ದು ತೀರಿಸಿಕೊಂಡಿದ್ದು ಆಗಿನ ಬಿಸಿಸಿಐ ಅಧ್ಯಕ್ಷ ಸಾಳ್ವೆ ಅವರು. ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಹಾಗೂ ಐಸಿಸಿಗೆ ಸಡ್ಡು ಹೊಡೆಯಲು ರಚಿಸಿದ್ದ ಮಾಸ್ಟರ್ ಪ್ಲ್ಯಾನ್ ಏಷ್ಯನ್ ಕ್ರಿಕೆಟ್ ಕ್ರಿಕೆಟ್ ಕೌನ್ಸಿಲ್.
ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮೂಲಕವೇ ಐಸಿಸಿ ಮೇಲೆ ಪ್ರಭುತ್ವ ಸಾಧಿಸಿದ್ದ ಬಿಸಿಸಿಐ ನಂತರ ಹಿಂತಿರುಗಿ ನೋಡಲೇ ಇಲ್ಲ. ಈ ನಡುವೆ, ಭಾರತ – ಪಾಕ್ ನಡುವಿನ ಬಿರುಕಿನಿಂದ ಪಾಕಿಸ್ತಾನ ಏಷ್ಯಾಕಪ್‍ನಿಂದ ಹೊರಗುಳಿದಿರುವುದು ಇದೆ. ಆದ್ರೆ ಬಿಸಿಸಿಐ ಕ್ಯಾರೇ ಅನ್ನಲಿಲ್ಲ. ಏಷ್ಯಾಕಪ್ ಮಾತ್ರ ಅಲ್ಲ… ಐಸಿಸಿ ಟೂರ್ನಿಯಲ್ಲೂ ಭಾರತ ಪಾಕ್ ನೆಲದಲ್ಲಿ ಆಡದಿರುವ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಬಗ್ಗೆ ಪಾಕಿಸ್ತಾನ ಐಸಿಸಿ ಬಳಿ ದೂರು ಕೊಟ್ರೂ ಯಾವುದೇ ಪ್ರಯೋಜನ ಆಗಿಲ್ಲ.

ಐಸಿಸಿಗೆ ಭಾರತ – ಪಾಕ್ ನಡುವಿನ ಪಂದ್ಯ ಅಂದ್ರೆ ಚಿನ್ನದ ಮೊಟ್ಟೆ ಇಡುವ ಕೋಳಿ. ಅದೇ ರೀತಿ ಪಿಸಿಬಿಗೆ ಭಾರತದ ವಿರುದ್ಧ ಸರಣಿ, ಪಂದ್ಯವನ್ನಾಡಿದ್ರೆ ತನ್ನ ಬೊಕ್ಕಸವನ್ನು ತುಂಬಿಸಿಕೊಳ್ಳಬಹುದು ಎಂಬ ಲೆಕ್ಕಾಚಾರ. ಹೀಗಾಗಿ ಬಿಸಿಸಿಐ ಐಸಿಸಿ ಲೆಕ್ಕಾಚಾರಕ್ಕೆ ತೊಂದ್ರೆ ಮಾಡದಿದ್ರೂ ಪಿಸಿಬಿಗೆ ಮಾತ್ರ ಮಾಸ್ಟರ್ ಸ್ಟ್ರೋಕ್ ನೀಡುತ್ತಲೇ ಬಂದಿದೆ. ರಾಜತಾಂತ್ರಿಕ ಅಡಚಣೆಯ ನಡುವೆಯೂ ಕೆಲವೊಂದು ದ್ವೀಪಕ್ಷೀಯ ಸರಣಿಯನ್ನು ಆಡಿದ್ರೂ ಮುಂಬೈ ಬ್ಲ್ಯಾಸ್ಟ್ ನಂತರ ಪಾಕ್ ನೆಲದಲ್ಲಿ ಕ್ರಿಕೆಟ್ ಆಡದಿರುವ ಕಠಿಣ ನಿರ್ಧಾರವನ್ನು ಬಿಸಿಸಿಐ ತೆಗೆದುಕೊಂಡಿತ್ತು. ಕಳೆದ ಬಾರಿಯ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವನ್ನು ಪಾಕ್ ನೆಲದಲ್ಲಿ ಆಡಿಸಬೇಕು ಎಂಬ ಟೊಂಕಕಟ್ಟಿ ನಿಂತಿತ್ತು. ಐಸಿಸಿ ಮೇಲೆ ಎಷ್ಟೇ ಒತ್ತಡ ಹೇರಿದ್ರೂ ಬಿಸಿಸಿಐನ ನಿಲುವು ಬದಲಾಗಲಿಲ್ಲ. ಹೀಗಾಗಿ ಭಾರತದ ವಿರುದ್ಧ ತಟಸ್ಥ ತಾಣದಲ್ಲಿ ಆಡಬೇಕಾಯ್ತು. ಪಾಕ್ ಆಯೋಜನೆ ಮಾಡಿದ ಟೂರ್ನಿ ತಟಸ್ಥ ತಾಣದಲ್ಲಿ ಆಡುವ ಮೂಲಕ ಭಾರತ ಚಾಂಪಿಯನ್ ಪಟ್ಟಕ್ಕೇರಿತ್ತು.

ಇದೀಗ ಆಪರೇಷನ್ ಸಿಂಧೂರ ಬಳಿಕ ಪಾಕ್ ಕ್ರಿಕೆಟ್‍ಗೆ ಉಳಿಗಾಲವಿಲ್ಲ ಎಂದು ಅನ್ಸುತ್ತೆ. ಪಾಕ್ ನೆಲದಲ್ಲಿ ಭಾರತ ಆಡುವುದು ದೂರದ ಮಾತು. ಅಷ್ಟೇ ಯಾಕೆ ವಿದೇಶಿ ತಂಡಗಳು ಆಡುವುದು ಕೂಡ ಅನುಮಾನವಾಗಿದೆ. ಇದೀಗ ಏಷ್ಯನ್ ಕ್ರಿಕೆಟ್‍ನಿಂದ ಹೊರಬರುವ ತೀರ್ಮಾನವನ್ನು ತೆಗೆದುಕೊಂಡಿರುವ ಬಿಸಿಸಿಐ ಮುಂದಿನ ದಿನಗಳಲ್ಲಿ ಐಸಿಸಿಯಿಂದಲೂ ಪಾಕ್ ತಂಡವನ್ನು ಬ್ಯಾನ್ ಮಾಡೋ ಎಲ್ಲಾ ಪ್ಲ್ಯಾನ್‍ಗಳು ನಡೆಯುತ್ತಿವೆ.

ಈಗಾಗಲೇ ಪಾಕಿಸ್ತಾನಕ್ಕೆ ಮುಖಭಂಗ ಆಗಬೇಕು. ಭಯೋತ್ಪಾದಕ ರಾಷ್ಟ್ರ ಎಂಬುದನ್ನು ವಿಶ್ವಕ್ಕೆ ಸತ್ಯ ವಿಚಾರವನ್ನು ತಿಳಿಸಬೇಕು ಎಂಬುದು ಭಾರತ ಸರ್ಕಾರದ ನಿಲುವಾಗಿದೆ. ಒಂದು ವೇಳೆ ಭಾರತದ ಒತ್ತಡಕ್ಕೆ ಮಣಿದ್ರೆ ಪಾಕಿಸ್ತಾನ ವಿಶ್ವದಲ್ಲಿ ಬೆತ್ತಲೆಯಾಗೋದು ಖಚಿತ. ಹಾಗೇ ಬಿಸಿಸಿಐನ ಒತ್ತಡಕ್ಕೆ ಮಣಿದು ಪಾಕಿಸ್ತಾನ ಕ್ರಿಕೆಟ್ ಐಸಿಸಿಯಿಂದ ಬ್ಯಾನ್ ಆದ್ರೂ ಅಚ್ಚರಿ ಏನಿಲ್ಲ. ಉಗ್ರರನ್ನು ಪೋಷಣೆ ಮಾಡುವ ಪಾಕ್‍ನ ದುಡ್ಡಿನ ಮೂಲಕ್ಕೆ ಕತ್ತರಿ ಹಾಕುವ ಎಲ್ಲಾ ಯೋಜನೆಗಳನ್ನು ಭಾರತ ಸರ್ಕಾರ ಮಾಡುತ್ತಿದೆ ಎಂಬುದು ಅಷ್ಟೇ ಸತ್ಯ.

ಸನತ್ ರೈ

ShareTweetSendShare
Join us on:

Related Posts

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

by admin
February 11, 2026
0

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..! ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram