ಬಾಗಲಕೋಟೆ: ಡಿಸೆಂಬರ್ 22ರಂದು ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ನಾಮಪತ್ರ ಸಲ್ಲಿಸಲು ಬಂದಿದ್ದ ಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.


ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಕಂದಗಲ್ ಗ್ರಾಮದ ಯಮನಪ್ಪ ದೋಟಿಹಾಳ(36) ಮೃತ ದುರ್ದೈವಿ. ಬುಧವಾರ ಗ್ರಾಮ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು. ಹೀಗಾಗಿ ತಮ್ಮದೇ ಊರು ಕಂದಗಲ್ನ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದರು. ಪಂಚಾಯಿತಿ ಕಚೇರಿ ಆವರಣಕ್ಕೆ ನಾಮಪತ್ರ ಸಲ್ಲಿಸಲು ಯಮನಪ್ಪ ಬಂದಿದ್ದರು.


ನಾಮಪತ್ರ ಸಲ್ಲಿಕೆಗೆ ಅಗತ್ಯವಿರುವ ದಾಖಲೆಗಳನ್ನು ಹಿಡಿದುಕೊಂಡು ನಿಂತಿದ್ದರು. ಈ ವೇಳೆ ಯಮನಪ್ಪ ಹೃದಯಾಘಾತಕ್ಕೆ ಒಳಗಾದರು. ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಯಮನಪ್ಪ ಸಾವಿನಿಂದಾ ಕಂಗಾಲಾದ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








