ಕೊರೊನಾ ಆತಂಕದಲ್ಲಿ ಬದುಕುತ್ತಿರುವ ಜನರಲ್ಲಿ ಧೈರ್ಯ ತುಂಬುವ ಕೆಲಸವನ್ನು ಮಾಡುವಂತೆ ಪಕ್ಷದ ಕಾರ್ಯಕರ್ತರಿಗೆ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಕರೆ ನೀಡಿದ್ದಾರೆ. ಸ್ಥಳೀಯ ನಾಯಕರು ಪ್ರತಿ ಮನೆಮನೆಗೆ ತೆರಳಿ ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದ್ದಾರೆ. ಕೊರೊನಾ ಸೋಂಕಿನಿಂದ ಆತಂಕಕ್ಕೆ ಒಳಗಾಗದೇ ಧೈರ್ಯವಾಗಿರುವಂತೆ ಅರಿವು ಮೂಡಿಸಬೇಕಿದೆ. ಇಡೀ ವಿಶ್ವಕ್ಕೆ ಕಂಟಕವಾಗಿರುವ ಈ ಸೋಂಕು ವ್ಯಾಪಕವಾಗಿ ಹರಡದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜನರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕಿದೆ ಎಂದು ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ತಿಳಿಸಿದ್ದಾರೆ. ಇದೇ ವೇಳೆ ಜೆಡಿಎಸ್ –ಕಾಂಗ್ರೆಸ್ ಮೈತ್ರಿ ಸರ್ಕಾರದ ಕುರಿತಾಗಿ ಮಾತನಾಡಿದ ಹೆಚ್ ಡಿಕೆ ಕಾಂಗ್ರೆಸ್ ಜೊತೆ ಮೈತ್ರಿಗೆ ಜೆಡಿಎಸ್ ಎಂದೂ ಮುಂದಾಗಿರಲಿಲ್ಲ. ಮುಂದೆಯೂ ಕೂಡ ನಾವು ಮೈತ್ರಿಗೆ ಯೋಚಿಸುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.
Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..!
ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್ ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....








