ಕೊರೊನಾ ಆತಂಕದಲ್ಲಿ ಬದುಕುತ್ತಿರುವ ಜನರಲ್ಲಿ ಧೈರ್ಯ ತುಂಬುವ ಕೆಲಸವನ್ನು ಮಾಡುವಂತೆ ಪಕ್ಷದ ಕಾರ್ಯಕರ್ತರಿಗೆ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಕರೆ ನೀಡಿದ್ದಾರೆ. ಸ್ಥಳೀಯ ನಾಯಕರು ಪ್ರತಿ ಮನೆಮನೆಗೆ ತೆರಳಿ ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದ್ದಾರೆ. ಕೊರೊನಾ ಸೋಂಕಿನಿಂದ ಆತಂಕಕ್ಕೆ ಒಳಗಾಗದೇ ಧೈರ್ಯವಾಗಿರುವಂತೆ ಅರಿವು ಮೂಡಿಸಬೇಕಿದೆ. ಇಡೀ ವಿಶ್ವಕ್ಕೆ ಕಂಟಕವಾಗಿರುವ ಈ ಸೋಂಕು ವ್ಯಾಪಕವಾಗಿ ಹರಡದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜನರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕಿದೆ ಎಂದು ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ತಿಳಿಸಿದ್ದಾರೆ. ಇದೇ ವೇಳೆ ಜೆಡಿಎಸ್ –ಕಾಂಗ್ರೆಸ್ ಮೈತ್ರಿ ಸರ್ಕಾರದ ಕುರಿತಾಗಿ ಮಾತನಾಡಿದ ಹೆಚ್ ಡಿಕೆ ಕಾಂಗ್ರೆಸ್ ಜೊತೆ ಮೈತ್ರಿಗೆ ಜೆಡಿಎಸ್ ಎಂದೂ ಮುಂದಾಗಿರಲಿಲ್ಲ. ಮುಂದೆಯೂ ಕೂಡ ನಾವು ಮೈತ್ರಿಗೆ ಯೋಚಿಸುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.
ಫುಟ್ಬಾಲ್ ಸಾಮ್ರಾಜ್ಯದಲ್ಲಿ ಚೆಂಡು ಬ್ಯಾಟ್ನ ಸದ್ದು.. ಮೆಕ್ಸಿಕೊ ಜೈಲಿನ ಕೈದಿಗಳ ಮನಪರಿವರ್ತನೆಗೆ ಜಂಟಲ್ಮ್ಯಾನ್ ಆಟವೇ ಅಸ್ತ್ರ..!
ಭಾರತದಲ್ಲಿ ಕ್ರಿಕೆಟ್ ಹೇಗೆ ಧರ್ಮವಾಗಿದೆಯೋ ಹಾಗೇ ಆ ರಾಷ್ಟ್ರದಲ್ಲೂ ಫುಟ್ಬಾಲ್ ಆಟ ಧರ್ಮವಾಗಿದೆ. ಭಾರತದ ಗಲ್ಲಿ ಗಲ್ಲಿಗಳಲ್ಲಿ ಕ್ರಿಕೆಟ್ ಆಡುವ ರೀತಿಯಲ್ಲೇ ಆ ದೇಶದ ಗಲ್ಲಿ ಗಲ್ಲಿಗಳಲ್ಲೂ...








