ಉತ್ತರ ಕನ್ನಡ: ಪ್ರಯಾಣಿಕರ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿರುವ ಆರೋಪವೊಂದು ಕೇಳಿ ಬಂದಿದೆ.
ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹೊಳೆಗದ್ದೆ ಟೋಲ್ ಬಳಿ ನಡೆದಿದೆ ಎನ್ನಲಾಗಿದ್ದು, ಓರ್ವ ಮಹಿಳೆ ಹಾಗೂ ಓರ್ವ ಪುರುಷ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕುಮಟಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಫಾಸ್ಟ್ ಟ್ಯಾಗ್ ತಾಂತ್ರಿಕ ಸಮಸ್ಯೆಯಿಂದಾಗಿ ಈ ಗಲಾಟೆ ನಡೆದಿದೆ ಎನ್ನಲಾಗಿದ್ದು, ಜಗಳ ಆರಂಭವಾಗಿದೆ. ಈ ವೇಳೆ ಟೋಲ್ ಸಿಬ್ಬಂದಿ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿ ವಾಹನದ ಗ್ಲಾಸ್ ಪುಡಿ ಮಾಡಿದ್ದಾನೆ.
ಮಂಗಳೂರು ನಗರದ ಪಲ್ನೀರಿನ ಮುಜೀಜ್ ತನ್ನ ಕುಟುಂಬದೊಂದಿಗೆ ಕುಮಟಾ ಮಾರ್ಗವಾಗಿ ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ. ಈ ಸಂದರ್ಭದಲ್ಲಿ ಫಾಸ್ಟ್ ಟ್ಯಾಗ್ ನಿಂದ ಹಣ ಕಡಿತವಾಗದಿದ್ದಾಗ ಟೋಲ್ ಸಿಬ್ಬಂದಿಗಳಾದ ಕಿರಣ್, ಸತೀಶ್ ಹಾಗೂ ಮಂಜುನಾಥ್ ಎಂಬುವವರಿಂದ ಗಲಾಟೆಯಾಗಿದೆ. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.