ಹೈದರಾಬಾದ್ : ಮಹಾಮಾರಿ ಕೊರೊನಾ ವಿರುದ್ಧದ ಹೋರಾಟಕ್ಕೆ ಸಿನಿ ತಾರೆಯರು ಕೈ ಜೋಡಿಸಿದ್ದು, ತಮ್ಮ ಕೈಲಾದ ಮಟ್ಟಿಗೆ ಧನಸಹಾಯ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ , ಕೊರೊನಾ ಹೋರಾಟಕ್ಕೆ 2 ಕೋಟಿ ನೀಡೋದಾಗಿ ಘೋಷಿಸಿದ್ರು. ಇದರ ಬೆನ್ನಲ್ಲೆ ತಮ್ಮ ಚಿಕ್ಕಪ್ಪನ ಪ್ರೇರಣೆಯಿಂದ ಮೆಗಾ ಪವರ್ ಸ್ಟಾರ್ ರಾಮ್ ಚರಣ್ 70 ಲಕ್ಷ ರೂಪಾಯಿ ದೇಣಿಗೆ ಕೊಟ್ಟಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪವನ್ ಕಲ್ಯಾಣ್ ಅವರಿಂದ ಪ್ರೇರಣೆಯಾಗಿ, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಪಡುತ್ತಿರುವ ಶ್ರಮಕ್ಕೆ ನನ್ನ ಕೈಲಾದ ಕೊಡುಗೆ ನೀಡುತ್ತಿದ್ದೇನೆ. ಎಲ್ಲರೂ ಮನೆಯಲ್ಲೇ ಇದ್ದು, ಸುರಕ್ಷಿತವಾಗಿದ್ದೀರಿ ಎಂದು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ
ಮಧು ಬಂಗಾರಪ್ಪ ಅವರು BJP ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಅನಗತ್ಯ ಗಲಾಟೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಪಾರದರ್ಶಕ ಹಾಗೂ...








