ಬಳ್ಳಾರಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಬರುತ್ತಾರೆ ಎಂದು ಜಿಲ್ಲೆಯ ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಒಂದು ವಾರದದಿಂದ ಹರಿದಾಡುತ್ತಿತ್ರು. ಜಿಲ್ಲೆಯ ಜನರೂ ಕೂಡ ರೋಹಿಣಿ ಸಿಂಧೂರಿ ಅವರೇ ಬಳ್ಳಾರಿಗೆ ಡಿಸಿ ಆಗಿ ಬರುತ್ತಾರೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದರು.
ಆದರೆ, ರಾಜ್ಯ ಸರ್ಕಾರ ಬಳ್ಳಾರಿ ಜನರ ನಿರೀಕ್ಷೆಗೆ ತಣ್ಣೀರೆರಚಿದೆ. ಸಾಕಷ್ಟು ಜನರು ರೋಹಿಣಿ ಸಿಂಧೂರಿಗೆ ಸೋಷಿಯಲ್ ಮೀಡಿಯಾದಲ್ಲಿ ವೆಲ್ಕಮ್ ಕೂಡ ಮಾಡಿದ್ದರು. ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಪವನಕುಮಾರ್ ಮಲಪಾಟಿ ಅವರನ್ನು ನೂತನ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶಿಸಿದೆ.
ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿಗಿ ಪವನಕುಮಾರ ಮಲಪಾಟಿ ಇಂದು ಅಧಿಕಾರ ಸ್ವೀಕರಿಸಿದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಪ್ತ ಕಾರ್ಯದರ್ಶಿಗಳಾಗಿ ನಿಯೋಜಿತರಾಗಿರುವ ನಿರ್ಗಮಿತ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ನೂತನ ಜಿಲ್ಲಾಧಿಕಾರಿ ಪವನಕುಮಾರ ಮಲಪಾಟಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಪವನಕುಮಾರ ಮಲಪಾಟಿ 2012ನೇ ಬ್ಯಾಚ್ ನ ಐಎಎಸ್ ಅಧಿಕಾರಿಗಳಾಗಿದ್ದು, ಇದುವರೆಗೆ ವಾಣಿಜ್ಯ ತೆರಿಗೆಗಳ(ಜಾರಿ)ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಈ ಹಿಂದೆ ಸಹಾಯಕ ಆಯುಕ್ತರಾಗಿ ಮಲಪಾಟಿ ಕೆಲಸ ನಿರ್ವಹಿಸಿದ್ದರು. ಹೀಗಾಗಿ ನೂತನ ಜಿಲ್ಲಾಧಿಕಾರಿಗೆ ಬಳ್ಳಾರಿ ಜಿಲ್ಲೆಯ ಪರಿಚಯವಿದೆ. ನಿರ್ಗಮಿತ ಜಿಲ್ಲಾಧಿಕಾರಿ ನಕುಲ್ ಸಹ ತಮ್ಮ ಅಧಿಕಾರ ಹಸ್ತಾಂತರಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel