ADVERTISEMENT
Sunday, July 13, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

CSK vs PBKS Match | ತಂಡಗಳ ಬಲಾಬಲ.. ಯಾರು ಬಲಿಷ್ಠರು

Mahesh M Dhandu by Mahesh M Dhandu
April 25, 2022
in Newsbeat, Sports, ಕ್ರಿಕೆಟ್
pbks vs csk match prediction saaksha tv

pbks vs csk match prediction saaksha tv

Share on FacebookShare on TwitterShare on WhatsappShare on Telegram

CSK vs PBKS Match | ತಂಡಗಳ ಬಲಾಬಲ.. ಯಾರು ಬಲಿಷ್ಠರು

ಟಾಟಾ ಐಪಿಎಲ್ 2022ರ 38ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. 15 ನೇ ಸೀಸನ್ ನಲ್ಲಿ ಈ ಎರಡೂ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಮೊದಲ ಬಾರಿ ಮುಖಾಮುಖಿಯಾಗಿದ್ದಾಗ ಪಂಜಾಬ್ ಕಿಂಗ್ಸ್ ತಂಡ ಚೆನ್ನೈ ವಿರುದ್ಧ ಅಮೋಘ ಗೆಲುವು ಸಾಧಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಂಜಾಬ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತಾ ಕಾದು ನೋಡಬೇಕಾಗಿದೆ.

Related posts

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

July 13, 2025
ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಧರ್ಮಸ್ಥಳ ಮರ್ಡರ್ ಮಿಸ್ಟರಿ: ದೂರುದಾರನ ಮಾಹಿತಿ ಬೆನ್ನಲ್ಲೇ ಅಸ್ಥಿಪಂಜರದ ಅವಶೇಷಗಳು ಪತ್ತೆ!

July 13, 2025

ಸದ್ಯದ ವಿಚಾರಕ್ಕೆ ಬಂದರೇ ಮಯಾಂಕ್ ಅಗರ್ ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ ಪ್ರಸ್ತುತ ಅಂಕಪಟ್ಟಿಯಲ್ಲಿ 8 ನೇ ಸ್ಥಾನದಲ್ಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ 9ನೇ ಸ್ಥಾನದಲ್ಲಿದೆ.

ಈ ಸೀಸನ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡ ಏಳು ಪಂದ್ಯಗಳನ್ನಾಡಿದ್ದು, ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಚೆನ್ನೈ ತಂಡ ಕೂಡ ಏಳು ಪಂದ್ಯಗಳನ್ನಾಡಿದ್ದು, ಕೇವಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಐದು ಪಂದ್ಯಗಳಲ್ಲಿ ಸೋಲು ಕಂಡಿದೆ.

ಪಂಜಾಬ್ ತಂಡ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 9 ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು. ಮಯಾಂಕ್ ಅಗರ್ ವಾಲ್ 24 ರನ್, ಜಿತೇಶ್ ಶರ್ಮಾ 32 ರನ್ ಗಳಿಸಿದ್ದರು.

pbks vs csk match prediction saaksha tv

ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಿತ್ತು. ಈ ಪಂದ್ಯದಲ್ಲಿ ಚೆನ್ನೈ ತಂಡ ಮೂರು ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು. ರಾಯುಡು 40, ಉತ್ತಪ್ಪ 30 ರನ್ ಗಳಿಸಿದರು.

ಕಳೆದ ಬಾರಿ ಚೆನ್ನೈ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದ್ದಾಗ ಪಂಜಾಬ್ ತಂಡ 54 ರನ್ ಗಳಿಂದ ಗೆಲುವು ಸಾಧಿಸಿತ್ತು.

ತಂಡಗಳ ಬಲಾ ಬಲ ವಿಚಾರಕ್ಕೆ ಬಂದರೇ

ಎರಡೂ ತಂಡಗಳಲ್ಲಿಯೂ ಸಮಸ್ಯೆಗಳಿವೆ.  ಚೆನ್ನೈ ತಂಡದ ವಿಚಾರಕ್ಕೆ ಬಂದರೆ ಆರಂಭಿಕ ರಾಬಿನ್ ಉತ್ತಪ್ಪ, ಅಂಬಾಟಿ ರಾಯುಡು, ಶಿವಂ ದುಬೆ, ಧೋನಿ ಬ್ಯಾಟಿಂಗ್ ಶಕ್ತಿಗಳಾಗಿದ್ದಾರೆ. ಆದ್ರೆ ಮತ್ತೊಬ್ಬ ಆರಂಭಿಕ ರುತುರಾಜ್ ಟಚ್ ನಲ್ಲಿ ಕಾಣಿಸ್ತಿಲ್ಲ. ಜಡೇಜಾ, ಬ್ರಾವೋ ಕೂಡ ಬ್ಯಾಟಿಂಗ್ ನಲ್ಲಿ ಮಿಂಚುತ್ತಿಲ್ಲ. ಸ್ಯಾಂಟ್ನರ್ ಕೂಡ ಆಲ್ ರೌಂಡರ್ ಆಟ ಬರ್ತಿಲ್ಲ. ಆದ್ರೆ ಬೌಲಿಂಗ್ ನಲ್ಲಿ ಮುಖೇಶ್ ಚೌದರಿ, ಮಹೀಶ್ ತೀಕ್ಷಣ ಒಳ್ಳೆ ಫಾರ್ಮ್ ನಲ್ಲಿದ್ದಾರೆ. ಇವರಿಗೆ ಡ್ವೇನ್ ಪಿಟೋರಿಯನ್ಸ್ , ಬ್ರಾವೋ ಸಾಥ್ ನೀಡಬೇಕಿದೆ.

ಇತ್ತ ಪಂಜಾಬ್ ವಿಚಾರಕ್ಕೆ ಬಂದರೇ ಬ್ಯಾಟಿಂಗ್ ನಲ್ಲಿ ಸಮಸ್ಯೆಗಳು ಎದ್ದು ಕಾಣುತ್ತಿವೆ. ಮುಖ್ಯವಾಗಿ ನಾಯಕ ಮಯಾಂಕ್ ಅಗರ್ ವಾಲ್ ಬ್ಯಾಡ್ ಫಾರ್ಮ್ ತಂಡಕ್ಕೆ ಮೈನಸ್ ಪಾಯಿಂಟ್ ಆಗಿದೆ. ಜೊತೆಗೆ ಜಾನಿ ಬೈರ್ ಸ್ಟೋ ವೈಫಲ್ಯ, ಲಿಯಾಮ್, ಶಾರೂಕ್ ಖಾನ್ ಅಸ್ಥಿರ ಪ್ರದರ್ಶನ ತಂಡದ ಹಿನ್ನಡೆ ಕಾರಣವಾಗುತ್ತಿದೆ. ಕೇವಲ ಶಿಖರ್ ಧವನ್, ಜೀತೇಶ್ ಶರ್ಮಾ ಬ್ಯಾಟಿಂಗ್ ಮೇಲೆ ತಂಡದ ಗೆಲುವು ನಿಂತಿದೆ. ಬೌಲಿಂಗ್ ನಲ್ಲಿ ಕಗಿಸೋ ರಬಾಡ, ರಾಹುಲ್ ಚಹಾರ್, ಅರ್ಷದೀಪ್ ಸಿಂಗ್, ವೈಭವ್ ಅರೋರಾ ಮತ್ತಷ್ಟು ಪರಿಣಾಮಕಾರಿಯಾಗಬೇಕಿದೆ.

Tags: #Saaksha TVCricketipl 2022pbks vs csk
ShareTweetSendShare
Join us on:

Related Posts

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

by Shwetha
July 13, 2025
0

ನಗರದ ಬೇಕರಿ, ಜ್ಯೂಸ್ ಅಂಗಡಿ, ಕಾಂಡಿಮೆಂಟ್ಸ್ ಮಾಲೀಕರಿಗೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯು ಮಹತ್ವದ ಸ್ಪಷ್ಟನೆಯನ್ನು ನೀಡಿದೆ. ಆನ್‌ಲೈನ್ ಮೂಲಕ ಹಣ ಸ್ವೀಕರಿಸಿದ ಸಣ್ಣ ವ್ಯಾಪಾರಿಗಳಿಗೆ ಇಲಾಖೆಯು...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಧರ್ಮಸ್ಥಳ ಮರ್ಡರ್ ಮಿಸ್ಟರಿ: ದೂರುದಾರನ ಮಾಹಿತಿ ಬೆನ್ನಲ್ಲೇ ಅಸ್ಥಿಪಂಜರದ ಅವಶೇಷಗಳು ಪತ್ತೆ!

by Shwetha
July 13, 2025
0

ಮಂಗಳೂರು: ಇಡೀ ರಾಜ್ಯದ ಗಮನ ಸೆಳೆದಿರುವ ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆದಿವೆ. ದೂರುದಾರನ ಹೇಳಿಕೆ ದಾಖಲಾದ ಬೆನ್ನಲ್ಲೇ, ಬೆಳ್ತಂಗಡಿ ಪೊಲೀಸರು ಅಸ್ಥಿಪಂಜರದ...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಮೊಟ್ಟೆ ಕಿಮಾ ರೈಸ್‌ ರೆಸಿಪಿ

by Shwetha
July 13, 2025
0

ಮೊಟ್ಟೆ ಕಿಮಾ ರೈಸ್ (Egg Keema Rice) ಒಂದು ರುಚಿಕರವಾದ ಮತ್ತು ಸುಲಭವಾಗಿ ತಯಾರಿಸಬಹುದಾದ ಖಾದ್ಯ. ಇದನ್ನು ಸಾಮಾನ್ಯವಾಗಿ ಮೊಟ್ಟೆ ಬುರ್ಜಿ/ಕೀಮಾ ಮಸಾಲಾವನ್ನು ಅನ್ನದೊಂದಿಗೆ ಬೆರೆಸಿ ಮಾಡಲಾಗುತ್ತದೆ....

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಮಟನ್ ಕಾಲ್ ಸೂಪ್ ಆರೋಗ್ಯ ಪ್ರಯೋಜನಗಳು

by Shwetha
July 13, 2025
0

ಮಟನ್ ಕಾಲು ಸೂಪ್ (Mutton Call Soup) ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಇದು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಸಾಂಪ್ರದಾಯಿಕವಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ದೇಹವನ್ನು ಬಲಪಡಿಸಲು...

ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!

ಶ್ರೀ ವೀರಭದ್ರ ದೇವಸ್ಥಾನ ಯಡೂರು ವೀರಭದ್ರನಗರ, ಬೆಳಗಾವಿ ಇತಿಹಾಸ ಮತ್ತು ಮಹಿಮೆ

by Shwetha
July 13, 2025
0

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು ವೀರಭದ್ರನಗರದಲ್ಲಿರುವ ಶ್ರೀ ವೀರಭದ್ರ ದೇವಸ್ಥಾನವು ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಈ ದೇವಾಲಯದ ಇತಿಹಾಸ ಮತ್ತು ಮಹಿಮೆಯ ಕುರಿತು...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram