ಆಗಸ್ಟ್ 5ರಂದು ಹಿಂದೂಗಳ ಕನಸಾದ ರಾಮಮಂದಿರ ನಿಮಾರ್ಣದ ಶಿಲಾನ್ಯಾಸ ಸಮಾರಂಭ ನಡೆಯಲಿದೆ. ಪ್ರಧಾನ ಮಂತ್ರಿ ಮೋದಿ ಅವರು ಶಿಲಾನ್ಯಾಸ ನೆರವೇರಿಸಲಿದ್ದು, ವಿವಿಧ ಧಾರ್ಮಿಕ ಮುಖಂಡರು ಹಾಗೂ ಗಣ್ಯರನ್ನು ಈ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಈಗಾಗಲೇ ಶಿಲಾನ್ಯಾಸ ಸಮಾರಂಭಕ್ಕೆ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಈ ನಡುವೆ ಈ ವಿಚಾರವಾಗಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಪ್ರತಿಕ್ರಿಯೆ ನೀಡಿದ್ದು, ಇದೇ ತಿಂಗಳ 5ನೇ ತಾರೀಕಿನಂದು ಐತಿಹಾಸಿಕ ಭೂಮಿಪೂಜೆ ನಡೆಯಲಿದೆ. ಅಂದು ಕೋಟ್ಯಂತರ ಆಸ್ತಿಕರ ಬಹುಕಾಲದ ಕನಸು ನನಸಾಗಲಿದೆ ಎಂದು ತಿಳಿಸಿದ್ದಾರೆ. ರಾಮಜನ್ಮ ಭೂಮಿ ಟ್ರಸ್ಟ್ ನ ಟ್ರಸ್ಟಿಯಾಗಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಕೊರೊನಾದಿಂದಾಗಿ ನಮಗೆಲ್ಲ ದೈಹಿಕವಾಗಿ ಭಾಗವಹಿಸಲು ಸಾಧ್ಯ ಆಗದು. ಆದರೆ, ಈ ಕಾರ್ಯಕ್ರಮದ ನೇರಪ್ರಸಾರವನ್ನು ನಾವು ಇದ್ದ ಸ್ಥಳದಿಂದಲೇ ವಿಕ್ಷಣೆ ಮಾಡಿ ಭಾಗವಹಿಸೋಣ ಎಂದರು. ಇದೇ ವೇಳೆ ಕೊರೊನಾದಿಂದಾಗಿ ನಮಗೆಲ್ಲ ದೈಹಿಕವಾಗಿ ಭಾಗವಹಿಸಲು ಸಾಧ್ಯ ಆಗದು. ಆದರೆ, ಈ ಕಾರ್ಯಕ್ರಮದ ನೇರಪ್ರಸಾರವನ್ನು ನಾವು ಇದ್ದ ಸ್ಥಳದಿಂದಲೇ ವಿಕ್ಷಣೆ ಮಾಡಿ ಭಾಗವಹಿಸೋಣ ಎಂದಿರುವ ಶ್ರೀಗಳು ಶಿಲಾನ್ಯಾಸ ಸಮಾರಂಭದ ದಿನ ಮನೆಯ ಮೇಲೆ ಭಗವಾಧ್ವಜವನ್ನು ಹಾರಿಸುವ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗವಹಿಸೋಣ ಎಂದು ಕರೆ ನೀಡಿದರು.
ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?
ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...








