Bhootaradhana ದೈವನರ್ತಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ – 2 ಸಾವಿರ ಮಾಸಾಶನ
ಬೆಂಗಳೂರು : ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಸಿನಿಮಾ ದೇಶದೆಲ್ಲಡೆ ಭಾರಿ ಸದ್ದು ಮಾಡುತ್ತಿದೆ.
ಈ ಸಿನಿಮಾ ಈಮಟ್ಟಿಗೆ ಯಶ ಕಾಣಲು ಪ್ರಮುಖ ಕಾರಣ ಸಿನಿಮಾದಲ್ಲಿರುವ ಭೂತಾರಾಧನೆ.
ಸದ್ಯ ಭೂತಾರಾಧನೆ ವಿಶ್ವದೆಲ್ಲೆಡೆ ಸುದ್ದಿಯಾಗುತ್ತಿದೆ.
ಇದರ ಬೆನ್ನಲ್ಲೆ ಭೂತಾರಾಧನೆ ಮಾಡುವ ದೈವನರ್ತಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, 60 ವರ್ಷ ತುಂಬಿದ ದೈವ ನರ್ತಕರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಾಶನ ನೀಡಲು ಮುಂದಾಗಿದೆ.
ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ದೈವ ನರ್ತನೆ, ಭೂತಾರಾಧನೆ ಮಾಡುವವರ ಸಂಖ್ಯೆ ಹೆಚ್ಚಿದೆ.
ಇವರು ದೈವಾರಾಧನೆ ಮಾಡಿಕೊಳ್ಳುತ್ತಲೇ ತಮ್ಮ ಕಸುಬು ನಡೆಸುತ್ತಿದ್ದಾರೆ.
ಹಾಗಾಗಿ ದೈವ ನರ್ತನ ಮಾಡುತ್ತಿರುವ 60 ವರ್ಷ ಮೀರಿದವರಿಗೆ ಮಾಸಾಶನ ನೀಡುವ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.