ಪಶ್ಚಿಮ ಬಂಗಾಳದಲ್ಲಿ (West Bengal) ಮತ್ತೊಂದು ವಿಧ್ವಂಸಕ ಕೃತ್ಯ ನಡೆದಿದೆ.
ಇಂದು 6ನೇ ಹಂತದ ಲೋಕಸಭಾ ಚುನಾವಣೆ (Lok Sabha Elections 2024) ಪಶ್ಚಿಮ ಬಂಗಾಳದಲ್ಲಿ ಕೂಡ ನಡೆದಿದೆ. ಈ ಸಂದರ್ಭದಲ್ಲಿ ಗುಂಪೊಂದು ಜಾರ್ಗ್ರಾಮ್ (Jhargram) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಣತ್ ತುಡು ಮೇಲೆ ಕಲ್ಲುಗಳನ್ನು ಎಸೆದು ದಾಳಿ ನಡೆಸಿದೆ.
ಕಲ್ಲಿನ ದಾಳಿ ನಡೆಸುತ್ತಿದ್ದಂತೆ ತುಡು ಓಡಿ ಹೋಗಿದ್ದಾರೆ. ರಕ್ಷಿಸಲು ಅವರ ಭದ್ರತಾ ಸಿಬ್ಬಂದಿ ಕೂಡ ಹರಸಾಹಸ ಪಟ್ಟಿದ್ದಾರೆ. ಪ್ರಣತ್ ತುಡು ಎಂಬ ಅಭ್ಯರ್ಥಿಯನ್ನು ರಕ್ಷಿಸಲು ಭದ್ರತಾ ಸಿಬ್ಬಂದಿ ಶೀಲ್ಡ್ಗಳನ್ನು ಹಿಡಿದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೂಂಡಾಗಳು ನನ್ನ ಮೇಲೆ ಹಲ್ಲೆ ಮಾಡಿಸಿದ್ದಾರೆ” ಎಂದು ಪ್ರಣತ್ ತುಡು ಆರೋಪಿಸಿದ್ದಾರೆ. ಘಟನೆಯಲ್ಲಿ ತುಡು ಅವರ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.