ಬೆಂಗಳೂರು: ಮಹಾರಾಷ್ಟ್ರ ಸೇರಿದಂತೆ ಯಾವುದೇ ರಾಜ್ಯಗಳಿಂದ ಬರುವವರೂ ಇನ್ನು ಮುಂದೆ 14 ದಿನ ಹೋಂ ಕ್ವಾರಂಟೈನ್ಗೆ ಒಳಗಾಗುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಮಹಾರಾಷ್ಟ್ರದಿಂದ ಬರುವವರಿಗೆ ಮಾತ್ರ 7 ದಿನ ಸಾಂಸ್ಥಿಕ ಹಾಗೂ 7 ದಿನ ಹೋಂಕ್ವಾರಂಟೈನ್ ಕಡ್ಡಾಯ ಮಾಡಲಾಗಿತ್ತು. ಆದರೆ. ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ನಿಯಮವನ್ನು ಇಂದು ಬಿಡುಗಡೆ ಮಾಡಿದೆ

ವಿದೇಶದಿಂದ ಕರ್ನಾಟಕಕ್ಕೆ ಆಗಮಿಸುವವರು ಇನ್ನು ಮುಂದೆ ಸಾಂಸ್ಥಿಕ (ಖಾಸಗಿ ಹೋಟೆಲ್) ಅಥವಾ ಸರ್ಕಾರಿ ಕ್ವಾರಂಟೈನ್ಗೆ ಒಳಗಾಗುವ ಅಗತ್ಯ ಇಲ್ಲ. ಬದಲಾಗಿ ಮನೆಯಲ್ಲೇ 14 ದಿನ ಕ್ವಾರಂಟೈನ್ಗೆ ಒಳಗಾದರೆ ಸಾಕು ಎಂದು ತಿಳಿಸಿದೆ.
“ಆಸ್ಪತ್ರೆಗಳಲ್ಲಿ ಚಿಕಿತ್ಸೆ ಅಗತ್ಯ ಇರುವವರಿಗೆ ಉತ್ತಮ ಚಿಕಿತ್ಸೆ ನೀಡುವ ಕುರಿತು ಸರ್ಕಾರ ಗಮನವಹಿಸಲಿ. ಅಲ್ಲದೆ, ಹೋಮ್ ಕ್ವಾರಂಟೈನ್ ಬಗ್ಗೆ ಮನೆಯಲ್ಲಿರುವವರಿಗೆ ಮಾಹಿತಿ ನೀಡುವ ಮೂಲಕ ಹೊರ ರಾಜ್ಯ-ದೇಶದಿಂದ ಆಗಮಿಸಿದವರಿಗೆ ಮನೆಯಲ್ಲೇ ಕ್ವಾರಂಟೈನ್ಗೆ ಒಳಗಾಗಲು ಅವಕಾಶ ನೀಡಲಿ” ಎಂದು ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದರು.
ಅದರಂತೆ ಇಂದು ಹೊಸ ನಿಯಮವನ್ನು ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರ, “ಪ್ರಸ್ತುತ ಅನ್ಲಾಕ್-2 ಜಾರಿಯಲ್ಲಿರುವ ಪರಿಣಾಮ ಇನ್ನೂ ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರು ಹೋಟೆಲ್ಗಳಲ್ಲಿ ಹಣ ಪಾವತಿಸಿ ಕ್ವಾರಂಟೈನ್ಗೆ ಒಳಗಾಗಬೇಕಾಗಿಲ್ಲ. ಬದಲಾಗಿ ಮನೆಯಲ್ಲೇ 07 ದಿನದ ಬದಲಿಗೆ 14 ದಿನ ಕ್ವಾರಂಟೈನ್ಗೆ ಒಳಗಾದರೆ ಸಾಕು. ಇದು ಎಲ್ಲರಿಗೂ ಅನ್ವಯಿಸುತ್ತದೆ” ಎಂದು ತಿಳಿಸಿದೆ.








