ಬೆಂಗಳೂರಿನತ್ತ ಜನರು.. ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ Bangalore
ಬೆಂಗಳೂರು : ಕೊರೊನಾ ಲಾಕ್ ಡೌನ್ ನಿಂದಾಗಿ ಬೆಂಗಳೂರಿನಿಂದ ತಮ್ಮ ಊರುಗಳತ್ತ ತೆರಳಿದ್ದ ಜನರು ಇದೀಗ ಮತ್ತೆ ಸಿಲಿಕಾನ್ ಸಿಟಿಯತ್ತ ಆಗಮಿಸುತ್ತಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 5 ಕ್ಕಿಂತ ಕಡಿಮೆಯಾಗಿದೆ.
ಜೂನ್ 14ರ ಬಳಿಕ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗುವುದು ಬಹುತೇಕ ಪಕ್ಕಾ ಆಗಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಬೆಂಗಳೂರಿನತ್ತ ಜನರು ಮುಖಮಾಡಿದ್ದಾರೆ.
ನಗರದಲ್ಲಿ ಪಾಸಿಟಿವಿಟಿ ರೇಟ್ ಶೇ.5ಕ್ಕಿಂತ ಕಡಿಮೆ ಇದ್ದು, ಸರ್ಕಾರ ಹಂತಹಂತವಾಗಿ ಅನ್ಲಾಕ್ ಘೋಷಣೆ ಮಾಡುವ ಸಾಧ್ಯತೆಯಿದೆ.
ಗಾಮೆರ್ಂಟ್ಸ್ ಫ್ಯಾಕ್ಟರಿ, ಕೈಗಾರಿಕೆಗಳಿಗೆ ಅವಕಾಶ ನೀಡುವ ಸಾಧ್ಯತೆಯೂ ಇದೆ. ಹೀಗಾಗಿ ಬೆಂಗಳೂರು ತೊರೆದಿದ್ದ ಕಾರ್ಮಿಕರೀಗ ಕುಟುಂಬ ಸಮೇತರಾಗಿ ಹಿಂತಿರುಗುತ್ತಿದ್ದಾರೆ.
ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ 4ರ ನೆಲಮಂಗಲ ಬಳಿಯ ನವಯುಗ ಟೋಲ್, ದಾಸರಹಳ್ಳಿ ಸರ್ಕಲ್, ಗೊರಗುಂಟೆ ಪಾಳ್ಯದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.