ಬೆಂಗಳೂರು : ಸಿಎಂ ಸಿದ್ದರಾಮಯ್ಯ (Siddaramaiah) ಅವರ ಶಾಸಕತ್ವ ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆನ್ನು ಜುಲೈ 28ರಂದು ಕೈಗೆತ್ತಿಕೊಳ್ಳಲಾಗುವುದು ಎಂದು ಕೋರ್ಟ್ ಹೇಳಿದೆ.
ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಗ್ಯಾರಂಟಿ (Congress Guarantee) ಯೋಜನೆಗಳಿಂದ ಮತದಾರರಿಗೆ ಆಮಿಷ ಒಡ್ಡಿತ್ತು. ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ, ಜನರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ.
ಹೀಗಾಗಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಕೆ.ಎಂ. ಶಂಕರ ಎಂಬುವವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಈ ವಿಚಾರಣೆಯನ್ನು ವಿಚಾರಣೆಯನ್ನು ಜುಲೈ 28 ಕ್ಕೆ ಮುಂದೂಡಿದೆ.