ಹೊಸದಿಲ್ಲಿ, ಜೂನ್ 8: ಪಿಐಬಿ ಪ್ರಧಾನ ನಿರ್ದೇಶಕ ಕೆ. ಎಸ್. ಧಾಟ್ವಾಲಿಯಾ ಅವರಿಗೆ ಕೊರೋನಾ ಸೋಂಕು ಧೃಢಪಟ್ಟಿದ್ದು, ಅವರನ್ನು ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲಿಸಲಾಗಿದೆ. ಅವರ ಆರೋಗ್ಯದ ಸ್ಥಿತಿಗತಿ ಬಗ್ಗೆ ಅಧಿಕೃತ ಮಾಹಿತಿ ಹೊರಬಿದಿಲ್ಲ.
ಅವರು ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮಾರ್ ಹಾಗೂ ಪ್ರಕಾಶ್ ಜಾವಡೆಕರ್ ಅವರೊಂದಿಗೆ ಸೋಮವಾರ ಮತ್ತು ಬುಧವಾರ ಮಾಧ್ಯಮಗೋಷ್ಟಿ ನಡೆಸಿದ್ದು, ಈ ಇಬ್ಬರು ಕೇಂದ್ರ ಸಚಿವರಿಗೆ ಕೊರೋನಾ ಆತಂಕ ಶುರುವಾಗಿದೆ. ಇದೀಗ ಇವರ ಸಂಪರ್ಕಕ್ಕೆ ಬಂದಿದ್ದವರನ್ನು ಪತ್ತೆ ಹಚ್ಚಲಾಗುತ್ತಿದ್ದು, ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ದ ಕಚೇರಿಗೆ ಬೀಗ ಹಾಕಲಾಗಿದೆ.
ಆರೋಗ್ಯ ಇಲಾಖೆಯು ಪಿಐಬಿ ಕಛೇರಿಯನ್ನು ತೆರೆಯಲು ಅನುಮತಿ ನೀಡುವವರೆಗೆ ಪಿಐಬಿ ಕಛೇರಿಯನ್ನು ಮುಚ್ಚಲು ತೀರ್ಮಾನಿಸಿದ್ದು, ಸಂಪೂರ್ಣ ಕಟ್ಟಡವನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಸದ್ಯಕ್ಕೆ ಪಿಐಬಿ ಕಚೇರಿಯನ್ನು ಶಾಸ್ತ್ರಿ ಭವನಕ್ಕೆ ಸ್ಥಳಾಂತರಿಸಲಾಗಿದೆ.
ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...








