ADVERTISEMENT
Friday, January 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಲಿ ಎಂದು ಒತ್ತಾಯಿಸಿದ ಪ್ರಧಾನಿ

ಹರಿಯಾಣದ ಚುನಾವಣಾ ಪ್ರಚಾರದಲ್ಲಿ ವಿಷಯ ಪ್ರಸ್ತಾಪ

Author2 by Author2
September 25, 2024
in Politics, National, State, ದೇಶ - ವಿದೇಶ, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಸೋನಿಪತ್: ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಮುಡಾ ಪ್ರಕರಣವನ್ನು (MUDA Scam) ಪ್ರಸ್ತಾಪಿಸಿದ್ದಾರೆ.

ಸೋನಿಪತ್‌ ನಲ್ಲಿ ನಡೆದ ಪ್ರಚಾರದಲ್ಲಿ ಮುಡಾ ವಿಚಾರವನ್ನು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶಿಸಿದೆ. ಹೀಗಾಗಿ ಅವರ ವಿರುದ್ಧ ತನಿಖೆಯಾಗಲಿ ಎಂದಿದ್ದಾರೆ.

Related posts

Reliance Jio empowers schools in Karnataka with future AI training

ಕರ್ನಾಟಕದ ಶಾಲೆಗಳಿಗೆ ರಿಲಯನ್ಸ್ ಜಿಯೋದಿಂದ ಭವಿಷ್ಯದ ಎಐ ತರಬೇತಿ ಸಬಲೀಕರಣ

January 30, 2026
Do you have a 'time table': The scientific world of 'time' in Jayanagar!

ನಿಮಗಿದೋ ‘ಟೈಂ ಟೇಬಲ್‌’: ಜಯನಗರದಲ್ಲಿ ‘ಕಾಲ’ದ ವಿಜ್ಞಾನ ಲೋಕ!

January 28, 2026

ಸಾರ್ವಜನಿಕ ಸಮಾವೇಶ (Haryana Poll Rally) ಉದ್ಧೇಶಿಸಿ ಮಾತನಾಡಿದ ಪ್ರಧಾನಿ, ಹೈಕಮಾಂಡ್‌ ಭ್ರಷ್ಟವಾದಾಗ ಕೆಳಗೆ ಇರುವವರಿಗೆ ಲೂಟಿ ಹೊಡೆಯಲು ಪರವಾನಿಗೆ ಸಿಕ್ಕಂತಾಗುತ್ತದೆ. ಕಾಂಗ್ರೆಸ್ ಆಡಳಿತ ಮಾಡಿದ ಯಾವ ರಾಜ್ಯವೂ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೇ, ಕರ್ನಾಟಕದ ಪ್ರಕರಣ ಪ್ರಸ್ತಾಪಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Government Of Karnataka) ಅಧಿಕಾರಕ್ಕೆ ಬಂದು 2 ವರ್ಷ ಆಗಿದೆ. ಅಲ್ಲಿ ಯಾವ ಪರಿಸ್ಥಿತಿ ನಿರ್ಮಾಣವಾಗಿದೆ ನೋಡಿ. ಖುದ್ದು ಅಲ್ಲಿಯ ಮುಖ್ಯಮಂತ್ರಿ ವಿರುದ್ಧ ಭೂ ಹಗರಣದ ಆರೋಪ ಕೇಳಿ ಬಂದಿದೆ. ಅಲ್ಲಿನ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ ಬೀಸಿದೆ ಎಂದು ಆರೋಪಿಸಿದ್ದಾರೆ.

ತನಿಖೆ‌ ಶುರುವಾಗುತ್ತಿದ್ದಂತೆಯೇ ಹೈಕೋರ್ಟ್‌ಗೆ ಹೋಗಿದ್ದರು. ಹೈಕೋರ್ಟ್ ಕೂಡ ಅವರಿಗೆ ಛಾಟಿ ಬೀಸಿದೆ. ಮಂಗಳವಾರ ಹೈಕೋರ್ಟ್ ತನಿಖೆಗೆ ಆದೇಶ ಮಾಡಿದೆ. ಸಿದ್ದರಾಮಯ್ಯ ವಿರುದ್ಧ ತನಿಖೆ ಆಗಲೇಬೇಕು. ಹೀಗೆ ಭ್ರಷ್ಟಾಚಾರ ಮಾಡಿದವರಿಗೆ ಹರಿಯಾಣದಲ್ಲಿ ಅವಕಾಶ ಕೊಡ್ತಿರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದಾರೆ.

Tags: #PM demands probe against CM Siddaramaiah#saakshatvLatestnewsnarendramodiprimeminister
ShareTweetSendShare
Join us on:

Related Posts

Reliance Jio empowers schools in Karnataka with future AI training

ಕರ್ನಾಟಕದ ಶಾಲೆಗಳಿಗೆ ರಿಲಯನ್ಸ್ ಜಿಯೋದಿಂದ ಭವಿಷ್ಯದ ಎಐ ತರಬೇತಿ ಸಬಲೀಕರಣ

by admin
January 30, 2026
0

 ಸುಧಾರಿತ ಕೃತಕ ಬುದ್ಧಿಮತ್ತೆಯನ್ನು (ಎಐ- ಆರ್ಟಿಫಿಷಿಯಲ್ ಇಂಟೆಲೆಜೆನ್ಸ್) ಎಲ್ಲರಿಗೂ ಲಭ್ಯ ಆಗುವಂತೆ ಮಾಡುವ ತನ್ನ ಬದ್ಧತೆಯನ್ನು ರಿಲಯನ್ಸ್ ಜಿಯೋ ಮತ್ತಷ್ಟು ಬಲಪಡಿಸುತ್ತಿದೆ. ಈ ಉದ್ದೇಶದ್ದೇ ಭಾಗವಾಗಿ, ಜಿಯೋ ಕರ್ನಾಟಕದಾದ್ಯಂತ ಸಮಗ್ರ ಎಐ ಶಿಕ್ಷಣ ಅಭಿಯಾನ ಪ್ರಾರಂಭಿಸಿದೆ. ಡಿಜಿಟಲ್ ಒಳಗೊಳ್ಳುವಿಕೆ ಬಲಪಡಿಸುವ ಹಾಗೂ ರಾಜ್ಯದ ಶಾಲೆ ಮತ್ತು ಕಾಲೇಜುಗಳ ಜೊತೆಗೆ ಸಂಪರ್ಕವನ್ನು ಸಾಧಿಸಿ, 'ಜಿಯೋ ಎಐ ಕ್ಲಾಸ್‌ರೂಮ್' (Jio AI Classroom) ಉಪಕ್ರಮದ ಮೂಲಕ ಪ್ರಾಯೋಗಿಕ ಎಐ ತರಬೇತಿಯನ್ನು ನೀಡುವ ಗುರಿಯನ್ನು ಈ ಅಭಿಯಾನ ಹೊಂದಿದೆ.  ಭಾರತದಾದ್ಯಂತ ಇರುವ ಶಾಲೆಗಳು ಎಐ ತಂತ್ರಜ್ಞಾನವನ್ನು ತರಗತಿಯ ಕಲಿಕೆಯಲ್ಲಿ ವೇಗವಾಗಿ ಅಳವಡಿಸಿಕೊಳ್ಳುತ್ತಾ ಇವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭವಿಷ್ಯಕ್ಕಾಗಿ ಸಿದ್ಧರಾಗುವ ರೀತಿಯಲ್ಲಿ ಶಿಕ್ಷಣದ ಸ್ವರೂಪದಲ್ಲಿ ಗಮನಾರ್ಹ ಬದಲಾವಣೆಗೆ ಸಾಕ್ಷಿ ಆಗುತ್ತಿದೆ. ಜಿಯೋ ಎಐ ಕ್ಲಾಸ್‌ರೂಮ್ ಮೂಲಕ ಶಿಕ್ಷಣ ಸಂಸ್ಥೆಗಳು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ಎಐ ಕೌಶಲಗಳನ್ನು ಒದಗಿಸುತ್ತಿದ್ದು, ವಿದ್ಯಾರ್ಥಿಗಳಿಗಾಗಿ ನಿಜವಾದ 'ಎಐ-ರೆಡಿ' (AI-Ready) ಶಾಲೆಗಳನ್ನು ಸಜ್ಜುಗೊಳಿಸುತ್ತಿದೆ.  ಈ ಅಭಿಯಾನವು ಆರಂಭಿಕ ಹಂತದಲ್ಲೇ ಭರ್ಜರಿ ಯಶಸ್ಸನ್ನು ಕಂಡಿದ್ದು, ಕರ್ನಾಟಕದಾದ್ಯಂತ 1000ಕ್ಕೂ ಹೆಚ್ಚು ಶಾಲೆಗಳನ್ನು ತಲುಪಿದೆ. ಜಿಯೋದ ಹಿರಿಯ ಕಾರ್ಯನಿರ್ವಾಹಕರು ನಡೆಸಿಕೊಡುತ್ತಿರುವ ಈ ವಿಶೇಷ ತರಬೇತಿ ಅವಧಿಗಳಿಗಾಗಿ 10,000ಕ್ಕೂ ಹೆಚ್ಚು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.  ಯುವಜನತೆಯ ಕೌಶಲ ಅಭಿವೃದ್ಧಿಗೆ ಪೂರಕವಾಗಿ, ಕಂಪನಿಯು ನಾಲ್ಕು ವಾರಗಳ ಉಚಿತ ಆನ್‌ಲೈನ್ ಸರ್ಟಿಫಿಕೇಷನ್ ಕಾರ್ಯಕ್ರಮವಾದ 'ಜಿಯೋ ಎಐ ಕ್ಲಾಸ್‌ರೂಮ್' ಅನ್ನು ಪರಿಚಯಿಸಿದೆ. ಈ ಕಾರ್ಯಕ್ರಮವು ವಿಡಿಯೋ ಉಪನ್ಯಾಸಗಳು, ಪಿಡಿಎಫ್ ಅಧ್ಯಯನ ಸಾಮಗ್ರಿಗಳು, ರೆಫರೆನ್ಸ್ ವಿಡಿಯೊಗಳು ಮತ್ತು ಪ್ರತಿ ಮಾಡ್ಯೂಲ್‌ನ ನಂತರ ಸಂವಾದಾತ್ಮಕ ರಸಪ್ರಶ್ನೆಗಳು ಹಾಗೂ ಅಸೈನ್‌ಮೆಂಟ್‌ಗಳನ್ನು ಒಳಗೊಂಡಿರುವ ನಾಲ್ಕು ಹಂತದ ಸಮಗ್ರ ಪಠ್ಯಕ್ರಮವನ್ನು ನೀಡುತ್ತದೆ.  ಎಲ್ಲ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಭಾಗವಹಿಸುವವರಿಗೆ 'ಕಂಪ್ಲೀಷನ್ ಬ್ಯಾಡ್ಜ್' ನೀಡಲಾಗುತ್ತದೆ. ಜಿಯೋ ಪಿಸಿ (JioPC) ಮೂಲಕ ಈ ಕಾರ್ಯಕ್ರಮವನ್ನು ಪಡೆಯುವ ಕಲಿಯುವವರು ಜಿಯೋ ಇನ್‌ಸ್ಟಿಟ್ಯೂಟ್ ಪ್ರಮಾಣಪತ್ರವನ್ನು ಸಹ ಪಡೆಯಲಿದ್ದಾರೆ. ಇದು ಅವರ ಎಐ ಪರಿಕಲ್ಪನೆಯ ತಿಳಿವಳಿಕೆ ಮತ್ತು ಅಸೈನ್‌ಮೆಂಟ್‌ಗಳ ಮೂಲಕ ಪಡೆದ ಪ್ರಾಯೋಗಿಕ ಜ್ಞಾನವನ್ನು ದೃಢೀಕರಿಸುತ್ತದೆ. ಈ ವ್ಯವಸ್ಥಿತ ಕೋರ್ಸ್ ಅನ್ನು ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಮೂಲಕ ಕಲಿಯುವವರಿಗೆ ತಮ್ಮದೇ ಆದ ವೇಗದಲ್ಲಿ ಕಲಿಯಲು ಮತ್ತು ಎಐ ತಂತ್ರಜ್ಞಾನಗಳ ಪ್ರಾಯೋಗಿಕ ಅನುಭವ ಪಡೆಯಲು ವಿನ್ಯಾಸ ಮಾಡಲಾಗಿದೆ.   ಈ ಡಿಜಿಟಲ್ ಸಬಲೀಕರಣ ಅಭಿವೃದ್ಧಿಯ ಮುಖ್ಯವಾದ ಅಂಶ ಏನೆಂದರೆ, ಯಾವುದೇ ವೆಚ್ಚವಿಲ್ಲದೆ ಬಳಕೆದಾರರಿಗೆ ಪ್ರೀಮಿಯಂ ತಂತ್ರಜ್ಞಾನವನ್ನು ಒದಗಿಸುವುದು. ಜಿಯೋ ತನ್ನ ಅನ್‌ಲಿಮಿಟೆಡ್ 5ಜಿ ಚಂದಾದಾರರಿಗೆ ₹35,100 ಮೌಲ್ಯದ 18 ತಿಂಗಳ 'ಗೂಗಲ್ ಜೆಮಿನಿ ಪ್ರೊ' (Google Gemini Pro) ಪ್ಲಾನ್ ಅನ್ನು ಉಚಿತವಾಗಿ ನೀಡುತ್ತಿದೆ. ಬಳಕೆದಾರರು ಇದನ್ನು ನೇರವಾಗಿ ಮೈಜಿಯೋ (MyJio) ಆಪ್ ಮೂಲಕ ಸಕ್ರಿಯಗೊಳಿಸಬಹುದು. ಇದು ಅತ್ಯಾಧುನಿಕ ಜೆಮಿನಿ 3 ಪ್ರೊ ಮಾಡೆಲ್ ಮತ್ತು ಉನ್ನತ ಮಟ್ಟದ ಸೃಜನಶೀಲ ಸಾಧನಗಳಿಗೆ ಸಂಪರ್ಕವನ್ನು ನೀಡುತ್ತದೆ. ಇದರಲ್ಲಿ ಎಐ-ಚಾಲಿತ ಚಿತ್ರ ರಚನೆಗಾಗಿ 'ನ್ಯಾನೋ ಬನಾನಾ ಪ್ರೊ' (Nano Banana Pro) ಮತ್ತು ಸುಧಾರಿತ ವಿಡಿಯೋ ನಿರ್ಮಾಣಕ್ಕಾಗಿ 'ವಿಯೋ 3.1' (Veo 3.1) ಸೇರಿವೆ. ಈ ಪ್ಲಾನ್ ಶೈಕ್ಷಣಿಕ ಸಂಶೋಧನಾ ಸಾಧನವಾದ 'ನೋಟ್‌ಬುಕ್ ಎಲ್‌ಎಂ'...

Do you have a 'time table': The scientific world of 'time' in Jayanagar!

ನಿಮಗಿದೋ ‘ಟೈಂ ಟೇಬಲ್‌’: ಜಯನಗರದಲ್ಲಿ ‘ಕಾಲ’ದ ವಿಜ್ಞಾನ ಲೋಕ!

by admin
January 28, 2026
0

- ಜಯನಗರದ ಪಾರ್ಸೆಕ್‌ನಲ್ಲಿ 'ಕಾಲ'ದ ಕೌತುಕ - ಪರಮ್ ಫೌಂಡೇಶನ್‌ನಿಂದ ವಿನೂತನ ಕಾರ್ಯಾಗಾರ - ವಾರಾಂತ್ಯದಲ್ಲಿ ನಡೆಯುವ ವಿಶಿಷ್ಟ ಟೈಮ್‌ ಲ್ಯಾಬ್‌ - ಮಕ್ಕಳಿಗಾಗಿ ಸ್ಟಾಪ್‌ವಾಚ್ ತಯಾರಿಸುವ...

ವಾಹನ ಸವಾರರೇ ಎಚ್ಚರ : ಅಪ್ಪಿತಪ್ಪಿಯೂ ಈ 5 ತಪ್ಪುಗಳನ್ನು ಮಾಡ್ಬೇಡಿ ಮಾಡಿದ್ರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು ಗ್ಯಾರಂಟಿ

ವಾಹನ ಸವಾರರೇ ಎಚ್ಚರ : ಅಪ್ಪಿತಪ್ಪಿಯೂ ಈ 5 ತಪ್ಪುಗಳನ್ನು ಮಾಡ್ಬೇಡಿ ಮಾಡಿದ್ರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು ಗ್ಯಾರಂಟಿ

by Shwetha
January 27, 2026
0

ಇಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಆಹಾರ, ಬಟ್ಟೆ ಮತ್ತು ವಸತಿ ಎಷ್ಟು ಮುಖ್ಯವೋ, ವಾಹನ ಚಲಾಯಿಸಲು ಡ್ರೈವಿಂಗ್ ಲೈಸೆನ್ಸ್ ಅಥವಾ ಡಿಎಲ್ ಕೂಡ ಅಷ್ಟೇ ಅನಿವಾರ್ಯವಾಗಿದೆ. ಯುವಜನತೆಯಿಂದ ಹಿಡಿದು...

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

by Shwetha
January 27, 2026
0

ಉಡುಪಿ: ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀ ಕೃಷ್ಣಮಠದ ಶೀರೂರು ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರು ಕೇಸರಿ ಧ್ವಜವನ್ನು ಪ್ರದರ್ಶಿಸುವ ಮೂಲಕ ಮೆರವಣಿಗೆಗೆ ಚಾಲನೆ...

ಪಕ್ಷವನ್ನು ಮನೆಯಾಸ್ತಿ ಮಾಡಿಕೊಂಡಿದ್ದಕ್ಕೆ ಹೊರಬಂದೆ :ದಳಪತಿಗಳ ಟೀಕೆಗೆ ಶಿವಲಿಂಗೇಗೌಡ ಖಡಕ್ ತಿರುಗೇಟು

ಪಕ್ಷವನ್ನು ಮನೆಯಾಸ್ತಿ ಮಾಡಿಕೊಂಡಿದ್ದಕ್ಕೆ ಹೊರಬಂದೆ :ದಳಪತಿಗಳ ಟೀಕೆಗೆ ಶಿವಲಿಂಗೇಗೌಡ ಖಡಕ್ ತಿರುಗೇಟು

by Shwetha
January 27, 2026
0

ಹಾಸನ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಬಳಿಕ ಇದೇ ಮೊದಲ ಬಾರಿಗೆ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ತಮ್ಮ ಪಕ್ಷಾಂತರದ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಮಂತ್ರಿಯಾಗುವ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram