ಪ್ರಧಾನಿ ನರೇಂದ್ರ ಮೋದಿ ಅವರು ಮೀಜೋರಾಂ ಮತದಾರರಿಗೆ ಸಂದೇಶ ನೀಡಿದ್ದಾರೆ.
ಮಿಜೋರಾಂ (Mizoram) ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ತಾಯ್ನಾಡು ಸೇವೆಗೆ ಬೆಂಬಲ ಹಾಗೂ ಆಶೀರ್ವಾದ ನೀಡಬೇಕೆಂದು ಪ್ರಧಾನಿ ಮನವಿ ಮಾಡಿದ್ದಾರೆ. ಈ ಕುರಿತು ವಿಡಿಯೋವನ್ನು ಅವರು ಬಿಡುಗಡೆ ಮಾಡಿದ್ದಾರೆ.
ಜಾಗತಿಕ ಪ್ರವಾಸಿ ತಾಣವಾಗಿ ಬೆಳೆಯುವ ಸಾಮರ್ಥ್ಯವನ್ನು ಮಿಜೋರಾಂ ಹೊಂದಿದೆ. ಹೀಗಾಗಿ ವ್ಯಾಪಾರ, ಪ್ರತಿಭೆ ಮತ್ತು ಪ್ರವಾಸೋದ್ಯಮದ ಮೇಲೆ ಮೂಲಸೌಕರ್ಯ ಅಭಿವೃದ್ಧಿಯ ಧನಾತ್ಮಕ ಪ್ರಭಾವ ಹೆಚ್ಚು ಮಾಡುವ ಕಾರ್ಯ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಮತದಾರರು ನಮ್ಮನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಈ ಹಿಂದಿನ ಮಿಜೋರಾಂ ಭೇಟಿಯಲ್ಲಿ ಸಾರಿಗೆ ವ್ಯವಸ್ಥೆಗೆ ಬಗ್ಗೆ ಭರವಸೆ ನೀಡಿದ್ದ ಪ್ರಧಾನಿ ಮೋದಿ, ಸಾರಿಗೆ ವ್ಯವಸ್ಥೆಯನ್ನು ಪರಿವರ್ತಿಸಿದ್ದು, ಅಂದಿನಿಂದ, ಬಿಜೆಪಿ ನೇತೃತ್ವದ ಸರ್ಕಾರವು ಕ್ಷೇತ್ರಗಳಲ್ಲಿ ಕ್ರಾಂತಿ ಮಾಡಿದೆ. ಆರೋಗ್ಯ ಮೂಲಸೌಕರ್ಯವನ್ನು ಸುಧಾರಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಚಿಕಿತ್ಸೆಗಾಗಿ ಬೇರೆ ಸ್ಥಳಗಳಿಗೆ ಹೋಗಬೇಕಾಗಿಲ್ಲ. ರಾಜ್ಯದ 1.7 ಲಕ್ಷ ರೈತರು ತಮ್ಮ ಖಾತೆಗೆ ಹಣ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
ನ. 7 ರಂದು 40 ಸ್ಥಾನಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಒಟ್ಟಾರೆ ದೇಶದಲ್ಲಿ 5 ರಾಜ್ಯಗಳಿಗೆ ಚುನಾವಣೆ ನಡೆಯುತ್ತಿದೆ. ಈ ಪೈಕಿ ಮೀಜೋರಾಂ ಕೂಡ ಒಂದು. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ಪರ ಮತ ಯಾಚಿಸಿದ್ದಾರೆ.