PM Modi In Hubli : ಹೊಸ ಹೊಸ ಕೌಶಲ್ಯಗಳನ್ನು ಕಲಿತು ಯುವಕರು ಟೇಕಾಫ್ ಆಗಬೇಕು – ಮೋದಿ
ಹುಬ್ಬಳ್ಳಿ : 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಭವ್ಯ ಸ್ವಾಗತ ಸಿಕ್ಕಿದೆ.. ಅವಳಿ ನಗರ ಹುಬ್ಬಳ್ಳಿ ಧಾರವಾಡದಲ್ಲಿ 5 ದಿನಗಳ ಕಾಲ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ..
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರೈಲ್ವೇ ನಿಲ್ದಾಣದ ವರೆಗೂ ರೋಡ್ ಶೋ ಮೂಲಕ ಬಂದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಕಣ್ತುಂಬಿಕೊಂಡ ಜನ ಜೈ ಮೋದಿ ಎಂದು ಘೋಷಣೆ ಕೂಗಿದ್ದಾರೆ..
ಈ ವೇಳೆ ಈ ಶತಮಾನ ಭಾರತದ ಶತಮಾನ ಎಂದು ಇಡೀ ವಿಶ್ವವೇ ಹೇಳುತ್ತಿದೆ. ಈ ಕಾರಣಕ್ಕೆ ರನ್ ವೇ ಸಿದ್ದವಾಗಿದೆ. ಹೊಸ ಹೊಸ ಕೌಶಲ್ಯಗಳನ್ನು ಕಲಿತು ನೀವು ಟೇಕಾಫ್ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಯುವ ಜನತೆಗೆ ಕರೆ ನೀಡಿದ್ದಾರೆ.
ರೈಲ್ವೇ ಮೈದಾನದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಕನ್ನಡದಲ್ಲಿ ಮಾತನಾಡಿದ ಮೋದಿ ಅವರು ಮುರುಘಾ ಮಠ, ಸಿದ್ದರೂಢ ಮಠ, ಸಿದ್ದೇಶ್ವರ ಸ್ವಾಮೀಜಿ, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಸಿಯಾಚಿನ್ನಲ್ಲಿ ಹೋರಾಡಿ ಹುತಾತ್ಮರಾದ ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್ ಅವರನ್ನು ಸ್ಮರಿಸಿಕೊಂಡರು.