ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 5 ಲಕ್ಷ ಮನೆಗಳ ಗೃಹ ಪ್ರವೇಶ
ನಮ್ಮ ದೇಶದಲ್ಲಿ ಕೆಲವು ಪಕ್ಷಗಳು ಬಡತನವನ್ನು ತೊಡೆದುಹಾಕಲು ಘೋಷಣೆಗಳನ್ನು ಕೂಗುತ್ತವೆ ಆದರೆ ಅವರನ್ನು ಸಬಲೀಕರಣಗೊಳಿಸಲು ಎಂದಿಗೂ ಕೆಲಸ ಮಾಡಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದರು. ಒಮ್ಮೆ ಬಡವರು ಸಬಲೀಕರಣಗೊಂಡರೆ ಬಡತನದ ವಿರುದ್ಧ ಹೋರಾಡುವ ಧೈರ್ಯ ಬರುತ್ತದೆ. ಪ್ರಾಮಾಣಿಕ ಸರ್ಕಾರದ ಪ್ರಯತ್ನಗಳು ಮತ್ತು ಬಲಿಷ್ಠ ಬಡವರ ಪ್ರಯತ್ನಗಳು ಒಟ್ಟಿಗೆ ಸೇರಿದಾಗ, ಬಡತನವನ್ನು ಸೋಲಿಸಲಾಗುತ್ತದೆ ಎಂದು ಅವರು ಹೇಳಿದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ರಾಜ್ಯದಲ್ಲಿ ನಿರ್ಮಿಸಲಾದ ಮಧ್ಯಪ್ರದೇಶದ 5 ಲಕ್ಷ 21 ಸಾವಿರ ಮನೆಗಳ ‘ಗೃಹ ಪ್ರವೇಶ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಫಲಾನುಭವಿಗಳನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಗ್ರಾಮಗಳಲ್ಲಿ ನಿರ್ಮಿಸಲಾದ ಈ 5 ಲಕ್ಷದ 21 ಸಾವಿರ ಮನೆಗಳು ಕೇವಲ ಮನೆಗಳಲ್ಲ, ದೇಶದ ಬಡವರು ಸಬಲರಾಗುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಮೋದಿ ಹೇಳಿದರು.
ಬಡವರಿಗೆ ಮನೆ ನೀಡುವ ಅಭಿಯಾನ ಕೇವಲ ಸರಕಾರದ ಯೋಜನೆಯಾಗದೆ ಗ್ರಾಮಸ್ಥರಲ್ಲಿ ಹಾಗೂ ಬಡವರಲ್ಲಿ ನಂಬಿಕೆ ಮೂಡಿಸುವ ಬದ್ಧತೆಯಾಗಿದೆ ಎಂದರು. ಬಡತನದ ಸಂಕೋಲೆಯನ್ನು ಮುರಿಯಲು ಬಡವರನ್ನು ಪ್ರೋತ್ಸಾಹಿಸಲು ಇದು ಮೊದಲ ಹೆಜ್ಜೆಯಾಗಿದೆ. ದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಮನೆಗಳಲ್ಲಿ ಮಹಿಳೆಯರು ಸುಮಾರು ಎರಡು ಕೋಟಿ ಮನೆಗಳ ಮಾಲೀಕತ್ವವನ್ನು ಹೊಂದಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಈ ಮಾಲೀಕತ್ವವು ಮನೆಯ ಇತರ ಆರ್ಥಿಕ ನಿರ್ಧಾರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಬಲಪಡಿಸಿದೆ ಎಂದು ತಿಳಿಸಿದರು.